Homeಮುಖಪುಟಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಸೇನೆ ತನ್ನದೇ ದೇಶದ ಮೂವರು ನಾಗರಿಕರನ್ನು ಹತ್ಯೆ ಮಾಡಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಐಡಿಎಫ್‌ನಿಂದಾದ ದೊಡ್ಡ ಪ್ರಮಾದ ಎಂದು ಹೇಳಿದ್ದರು. ಇದೀಗ ಘಟನೆಯ ಬೆನ್ನಲ್ಲೇ ಇಸ್ರೇಲ್‌ನಲ್ಲಿ ವ್ಯಾಪಕವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಮೂವರು ನಾಗರಿಕರ ಹತ್ಯೆ ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಗಾಝಾದಲ್ಲಿ ಹಮಾಸ್‌ ವಶದಲ್ಲಿದ್ದ ತಮ್ಮದೇ ದೇಶದ ಮೂವರು ಒತ್ತೆಯಾಳುಗಳನ್ನು ಇಸ್ರೇಲ್‌ ಸೈನಿಕರು ಹತ್ಯೆ ನಡೆಸಿರುವುದನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಟೆಲ್ ಅವಿವ್‌ ನಗರದ ಮಧ್ಯಭಾಗದಲ್ಲಿರುವ ಮುಖ್ಯ ರಸ್ತೆಯನ್ನು ತಡೆದು ಒತ್ತೆಯಾಳುಗಳ ತಕ್ಷಣದ ಬಿಡುಗಡೆಗೆ ಒತ್ತಾಯಿಸಿದ್ದಾರೆ ಎಂದು ಮಾದ್ಯಮ ವರದಿ ತಿಳಿಸಿದೆ.

ಪ್ರತಿಭಟನಾಕಾರರು ಈಗ ಸಮಯ ಮೀರುತ್ತಿದೆ. ಒತ್ತೆಯಾಳುಗಳನ್ನು ಮನೆಗೆ ಕರೆ ತನ್ನಿ ಎಂದು ಘೋಷಣೆಗಳನ್ನು ಕೂಗಿದ್ದು, ಪ್ರತಿ ಕೊನೆಯ ಒತ್ತೆಯಾಳು ಬಿಡುಗಡೆಯಾಗುವವರೆಗೂ ಯಾವುದೇ ವಿಜಯವಿಲ್ಲ ಎಂದು ಹೇಳುತ್ತಿದ್ದಾರೆ. ಇದಲ್ಲದೆ ಒತ್ತೆಯಾಳುಗಳ ಚಿತ್ರಗಳಿರುವ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಇಸ್ರೇಲ್‌ ಸೇನಾ ಪ್ರಧಾನ ಕಚೇರಿಯತ್ತ ಮೆರವಣಿಗೆ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರು ಒತ್ತೆಯಾಳುಗಳ ಬಿಡುಗಡೆಗೆ  ನೆತನ್ಯಾಹು ಅವರ ಸರ್ಕಾರವು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಇದಲ್ಲದೆ ನವೆಂಬರ್‌ನಲ್ಲಿ ನಡೆಸಿದಂತೆ ಮತ್ತೊಂದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ.

ಅ.7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದರು.

ಅಲ್ ಜಝೀರಾ ಪತ್ರಕರ್ತನ ಹತ್ಯೆ

ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಝಾದಲ್ಲಿ ಅಲ್ ಜಝೀರಾ ಮಾದ್ಯಮ ಸಂಸ್ಥೆಯ ಕ್ಯಾಮರಾಮ್ಯಾನ್ ಸಮರ್ ಅಬು ದಕ್ಕಾ ಕೊಲ್ಲಲ್ಪಟ್ಟಿದ್ದಾರೆ ಎಂದು ಅಲ್ ಜಝೀರಾ ಹೇಳಿದೆ.

ಕತಾರ್ ನೆಟ್‌ವರ್ಕ್ ಪ್ರಕಾರ, ಇಸ್ರೇಲ್ ಯುದ್ಧ ಸಂಭವಿಸಿದಾಗ ಅಬು ದಕ್ಕಾ, ವರದಿಗಾರ ವೇಲ್ ದಹದೌಹ್ ಜೊತೆಗೆ ಖಾನ್ ಯೂನಿಸ್‌ನಲ್ಲಿರುವ ಶಾಲಾ ಮೈದಾನದಿಂದ ವರದಿ ಮಾಡುತ್ತಿದ್ದರು. ಖಾನ್ ಯೂನಿಸ್ ದಕ್ಷಿಣ ಗಾಝಾದ ಪ್ರಮುಖ ನಗರವಾಗಿದೆ. ಈ ಘಟನೆಯ ಬಗ್ಗೆ ಇಸ್ರೇಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಬು ದಕ್ಕಾ ಹತ್ಯೆಯ ಮೊದಲೇ  ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಪ್ರಾರಂಭವಾದ ಬಳಿಕ ಕನಿಷ್ಠ 63 ಪತ್ರಕರ್ತರು ಹತ್ಯೆ ನಡೆದಿದೆ ಎನ್ನವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...