HomeUncategorizedಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

ಜೈಪುರ ರೈಲಿನಲ್ಲಿ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ತಿರಸ್ಕಾರ

- Advertisement -
- Advertisement -

ಜೈಪುರದಲ್ಲಿ ಮೂವರು ಮುಸ್ಲಿಂ ಪ್ರಯಾಣಿಕರು ಮತ್ತು ತನ್ನ ಹಿರಿಯ ಅಧಿಕಾರಿಯನ್ನು ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದ ಆರೋಪಿ ಆರ್‌ಪಿಎಫ್ ಪೇದೆಯಾಗಿದ್ದ ಚೇತನ್‌ ಸಿಂಗ್‌ ಚೌಧರಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಪ್ರತಿವಾದಿಗಳ ವಾದವನ್ನು ಪರಿಗಣಿಸಿದೆ.

ಮಹಾರಾಷ್ಟ್ರದ ಜೈಲಿನಲ್ಲಿರುವ ಚೌಧರಿ ವಿಚಾರಣೆ ಭಾಗವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಕಳೆದ ತಿಂಗಳು ವಕೀಲರಾದ ಅಮಿತ್ ಮಿಶ್ರಾ ಮತ್ತು ಪಂಕಜ್ ಘಿಲ್ಡಿಯಾಲ್ ಅವರ ಮೂಲಕ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದ ಆರೋಪಿಯು, ತಾನು ಭೂತ ಭ್ರಮೆಗಳಿಂದ ಬಳಲುತ್ತಿದ್ದೇನೆ, ನನ್ನನ್ನು ಇನ್ನೊಂದು ಆತ್ಮ ವಶಪಡಿಸಿಕೊಂಡಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದ. ಪೊಲೀಸರು ಜಾಮೀನು ಅರ್ಜಿಗೆ ವಿರೋಧಿಸಿದ್ದು, ಆರೋಪಿ ನಿರ್ದಿಷ್ಟ ಸಮುದಾಯದ ಬಗ್ಗೆ ಕೋಪ ಮತ್ತು ದ್ವೇಷವನ್ನು ಹೊಂದಿದ್ದ ಮತ್ತು ಮಾಡಿದ ಅಪರಾಧಕ್ಕೆ ಯಾವುದೇ ಪಶ್ಚಾತ್ತಾಪವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಆರೋಪಿಗೆ ಜಾಮೀನು ಮಂಜೂರು ಮಾಡಿದರೆ, ಅದು ಕಾನೂನಿನ ಬಗ್ಗೆ ನಕಾರಾತ್ಮಕ ಚಿತ್ರಣವನ್ನು ಸೃಷ್ಟಿಸುತ್ತದೆ ಮತ್ತು ಕೆಲವು ಧಾರ್ಮಿಕ ಗುಂಪುಗಳಲ್ಲಿ ಭಯ, ಭೀತಿ ಮತ್ತು ಅಭದ್ರತೆಯನ್ನು ಉಂಟುಮಾಡಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಸರ್ಕಾರಿ ರೈಲ್ವೆ ಪೊಲೀಸರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಸಂತ್ರಸ್ತ ಅಸ್ಗರ್ ಶೇಖ್ ಅವರ ಪತ್ನಿ ಉಮೇಸಾ ಖಾತೂನ್ ಅವರು ತಮ್ಮ ವಕೀಲರಾದ ಕರೀಂ ಪಠಾಣ್ ಮತ್ತು ಫಜ್ಲುರ್ರಹ್ಮಾನ್ ಶೇಖ್ ಅವರ ಮೂಲಕ ಚೌಧರಿಗೆ ಜಾಮೀನು ನೀಡುವುದನ್ನು ವಿರೋಧಿಸಿದ್ದಾರೆ. ಆರೋಪಿಯು ಭಯೋತ್ಪಾದಕ ಮನೋಭಾವದ ವ್ಯಕ್ತಿಯಾಗಿದ್ದಾನೆ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದ್ದಾನೆ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದರು.

ಜು.31ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕಾರಾಂ ಮೀನಾ ಮತ್ತು ಮೂವರು ಪ್ರಯಾಣಿಕರಾದ ಅಬ್ದುಲ್ ಕಾದರ್ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸೈಯದ್ ಸೈಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಚೇತನ್‌ ಸಿಂಗ್‌ ಗುಂಡಿಟ್ಟು ಹತ್ಯೆ ಮಾಡಿದ್ದ. ಆಘಾತಕಾರಿ ಘಟನೆಯನ್ನು ಇತರ ಪ್ರಯಾಣಿಕರು ವಿಡಿಯೋ ಮಾಡಿದ್ದರು. ವಿಡಿಯೋದಲ್ಲಿ ಗಡ್ಡದಾರಿ ಮುಸ್ಲಿಮರ ಮೇಲೆ ಚೇತನ್‌ ಸಿಂಗ್‌ ಫೈರಿಂಗ್‌ ಮಾಡುವುದು ಸೆರೆಯಾಗಿತ್ತು. ಈತ ವಿಡಿಯೋದಲ್ಲಿ ಮುಸ್ಲಿಮರು ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿದ್ದಾರೆ. ಇದನ್ನು ಮಾದ್ಯಮಗಳು ತೋರಿಸುತ್ತಿರುವುದು. ನೀವು ಭಾರತದಲ್ಲಿ ಬದುಕಲು ಬಯಸುವುದಾದರೆ ಮೋದಿ, ಯೋಗಿ ಹಾಗೂ ನಿಮ್ಮ ಠಾಕ್ರೆಗೆ ಮತ ಚಲಾಯಿಸಿ ಎಂದು ಹೇಳಿರುವುದು ಕೂಡ ವೀಡಿಯೊದಲ್ಲಿ ದಾಖಲಾಗಿದೆ.

ಘಟನೆಯ ನಂತರ ಚೌಧರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಮತ್ತು ಭಾರತೀಯ ರೈಲ್ವೇ ಕಾಯ್ದೆಯ ಸೆಕ್ಷನ್‌ಗಳು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿತ್ತು. ಘಟನೆಯ ಕುರಿತು ಸಮಗ್ರ ತನಿಖೆಗೆ ಐವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರೈಲ್ವೆ ಮಂಡಳಿ ರೂಪಿಸಿತ್ತು.

ಉತ್ತರಪ್ರದೇಶದ ಹತ್ರಾಸ್‌ ಮೂಲದ ಚೇತನ್ ಸಿಂಗ್‌ನನ್ನು ಕಳೆದ ಮಾರ್ಚ್‌ನಲ್ಲಿ ಭಾವನಗರ ವಿಭಾಗದಿಂದ ಮುಂಬೈಗೆ ವರ್ಗಾವಣೆ ಮಾಡಲಾಗಿತ್ತು. ಆ ಬಳಿಕ ಹತ್ರಾಸ್‌ಗೆ ಭೇಟಿ ನೀಡಿದ್ದ ದುಷ್ಕರ್ಮಿ ಜು.17ರಂದು ಊರಿಗೆ ಹಿಂದಿರುಗಿದ್ದ. ಈತ ರೈಲಿನಲ್ಲಿ ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ್ದು ರೈಲ್ವೆ ಪೊಲೀಸ್ ಸಿಬ್ಬಂದಿ  ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....