Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...