Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...