Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...