Homeಮುಖಪುಟಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

ಧಾರಾವಿ ಪುನರಾಭಿವೃದ್ಧಿ ಯೋಜನೆ ಅದಾನಿ ತೆಕ್ಕೆಗೆ: ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಧಾರಾವಿ ಕೊಳೆಗೇರಿ ಪ್ರದೇಶ ಪುನರಾಭಿವೃದ್ಧಿ ಯೋಜನೆಯನ್ನು ಅದಾನಿ ಗ್ರೂಪ್‌ಗೆ ನೀಡಿರುವುದನ್ನು ವಿರೋಧಿಸಿ ಮಹರಾಷ್ಟ್ರದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದ್ದು,ಸಾವಿರಾರು ಪ್ರತಿಭಟನಾಕಾರರು ಗೌತಮ್ ಅದಾನಿ ಅವರ ಕಚೇರಿಗೆ ಸ್ಲಮ್‌ನಿಂದ ಮೆರವಣಿಗೆ ನಡೆಸಿದ್ದಾರೆ.

ಪ್ರತಿಭಟನಾಕಾರರು ‘ಅದಾನಿಯನ್ನು ತೆಗೆದುಹಾಕಿ, ಧಾರವಿಯನ್ನು ಉಳಿಸಿ’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದು,  ಧಾರವಿ ನಿವಾಸಿಗಳಿಗೆ 500 ಚದರ ಅಡಿಯ ಮನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ಶಿವಸೇನೆ (ಯುಬಿಟಿ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತನಾಡಿ, ಮಹಾ ವಿಕಾಸ್ ಅಘಾಡಿ ಸರ್ಕಾರವು ಧಾರವಿ ಪುನರಾಭಿವೃದ್ಧಿ ಯೋಜನೆಗೆ (ಡಿಆರ್‌ಪಿ) ಟೆಂಡರ್ ನೀಡಿದೆ ಎಂದು ಭಾರತೀಯ ಜನತಾ ಪಕ್ಷವು ಸುಳ್ಳು ಹೇಳಿಕೆ ನೀಡುತ್ತಿದೆ. ಧಾರಾವಿ ನಿವಾಸಿಗಳು ಮಾತ್ರವಲ್ಲದೆ ಪೊಲೀಸರು, ನೈರ್ಮಲ್ಯ ಕಾರ್ಮಿಕರು ಮತ್ತು ಗಿರಣಿ ಕಾರ್ಮಿಕರಿಗೂ ಧಾರಾವಿಯಲ್ಲಿ ಮನೆ ಸಿಗಬೇಕು. ನಾನು ಅಭಿವೃದ್ಧಿಯ ವಿರೋಧಿಯಲ್ಲ. ಆದರೆ ಇದು ಅತಿ ದೊಡ್ಡ ಹಗರಣವಾಗಿದೆ. ಅದಾನಿ ಕೋಟ್ಯಂತರ ರೂ.ಗಳ ಟಿಡಿಆರ್ ಪಡೆಯುತ್ತಿದ್ದಾರೆ ಎಂದರೆ ಅವರ ಮುಂದಿನ ಪೀಳಿಗೆಗಳು ಸಹ ಕೆಲಸ ಮಾಡದೆ ನೆಮ್ಮದಿಯಿಂದ ಬದುಕಬಹುದು. ಅಷ್ಟರಮಟ್ಟಿಗೆ ಟಿಡಿಆರ್ ಅವರಿಗೆ ಸರ್ಕಾರ ಉಡುಗೊರೆಯಾಗಿ ನೀಡುತ್ತಿದೆ. ಆದರೆ ನಾವು ಅದಕ್ಕೆ ಬಿಡುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.

ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿದ್ದಾಗ 2018ರಲ್ಲಿ ಧಾರಾವಿಯನ್ನು ಮರು ಅಭಿವೃದ್ಧಿ ಪಡಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಬಿಜೆಪಿಯ ಫಡ್ನವೀಸ್ ಪ್ರಸ್ತುತ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದಾರೆ. ನನ್ನ ಸರ್ಕಾರವನ್ನು ಪತನಗೊಳಿಸಲು ಯಾರು ಹಣಕಾಸು ಒದಗಿಸಿದ್ದಾರೆಂದು ಈಗ ಯಾರಾದರೂ ಅರ್ಥಮಾಡಿಕೊಳ್ಳಬಹುದು. ನಮ್ಮ ಸರಕಾರವಿದ್ದಾಗ ಬಿಜೆಪಿಗೆ ತನ್ನ ಸ್ನೇಹಿತರಿಗೆ ಸಹಾಯ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನನ್ನ ಪಕ್ಷವನ್ನು ಒಡೆಯಲಾಯಿತು ಮತ್ತು ಪಕ್ಷದ ಚಿಹ್ನೆಯನ್ನು ಕಳ್ಳತನ ಮಾಡಲಾಯಿತು ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದ ಉದ್ದವ್‌ ಸರಕಾರ ಅದಾನಿ ಗ್ರೂಪ್ ಜೊತೆ ಈ ಕುರಿತು ಒಪ್ಪಂದ ಮಾಡಿಕೊಂಡಿದೆ ಎಂದು ಬಿಜೆಪಿ ಮತ್ತು ಅದಾನಿ ಗ್ರೂಪ್ ಹೇಳಿಕೊಂಡಿವೆ. ಧಾರವಿ ಯೋಜನೆಯನ್ನು ನ್ಯಾಯಯುತ, ಮುಕ್ತ ಹರಾಜು ಪ್ರಕ್ರಿಯೆಯ ಮೂಲಕ ಅದಾನಿ ಗ್ರೂಪ್‌ಗೆ ನೀಡಲಾಗಿದೆ. ಎಂವಿಎ ಸರ್ಕಾರದ ಅವಧಿಯಲ್ಲಿ ಟೆಂಡರ್ ಷರತ್ತುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಗ್ರೂಪ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...