Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...