Homeಕರ್ನಾಟಕಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಈ ಕುರಿತು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ನಿನ್ನೆ(ಡಿ.17) ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ಹಾಗಾಗಿ, ಬೇರೆ ಪ್ರಶ್ನೆ ಉದ್ಬವಿಸದು ಎಂದಿದ್ದರು. ಆದರೆ. ಸಂಜೆಯ ವೇಳೆಗೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದು ಬಂದಿದೆ.

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದೆ. ಕರ್ನಾಟಕ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಬಿಜೆಪಿಯ ಸತ್ಯಶೋಧನಾ ತಂಡದ ಸದಸ್ಯರು ಶನಿವಾರ ವಂಟಮೂರಿ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಆಯೋಗದ ಅಧಿಕಾರಿಗಳು ಡಿ.18 ಅಥವಾ 19ರಂದು ಬೆಳಗಾವಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಬಿಜೆಪಿಯಿಂದ ಸತ್ಯಶೋಧನೆ:

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದಿಂದ ಪ್ರಕರಣದ ಸತ್ಯಶೋಧನೆಗೆ ತಂಡ ರಚಿಸಿದ್ದರು. ಈ ತಂಡ ಶನಿವಾರ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಕಲೆ ಹಾಕಿದೆ.

ಸಂತ್ರಸ್ತ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಕೆಯ ಆರೋಗ್ಯ ವಿಚಾರಿಸಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತ್ಯಶೋಧನಾ ಸಮಿತಿ ಸದಸ್ಯೆ, ಬಿಜೆಪಿ ಸಂಸದೆ ಸುನಿತಾ ದುಗ್ಗಲ್, ಘಟನಾ ಸ್ಥಳಕ್ಕೆ ಭೇಟಿ ನೀಡದ, ಸಂಸತ್ರಸ್ತ ಮಹಿಳೆಗೆ ಸಾಂತ್ವನ ಹೇಳದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ನೊಂದ ಮಹಿಳೆಗೆ ಸರ್ಕಾರದ ದುಡ್ಡು ಬೇಡ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ಕೊಡಿಸಲಿ ಎಂದು ಹೇಳಿದ್ದರು.

ಘಟನೆಯನ್ನು ರಾಜ್ಯ ಸರ್ಕಾರದ ವಿರುದ್ದ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ, ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕೆಲವೆಡೆ ಈಗಾಗಲೇ ಪ್ರತಿಭಟನೆಗಳು ನಡೆದಿವೆ.

ಕೋರ್ಟ್‌ ಆದೇಶ ಉಲ್ಲಂಘಿಸಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ

ಸಂತ್ರಸ್ತ ಮಹಿಳೆಯನ್ನು ಭೇಟಿಯಾಗದಂತೆ ಹೈಕೋರ್ಟ್‌ ಆದೇಶವಿದ್ದರೂ, ಬಿಜೆಪಿಯವರು ಸತ್ಯಶೋಧನೆಯ ಹೆಸರಿನಲ್ಲಿ ಮಹಿಳೆಯನ್ನು ಭೇಟಿಯಾಗಿ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.

ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.

ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದಿದ್ದಾರೆ.

ಬಿಜೆಪಿಯ ಸತ್ಯಶೋಧನಾ ತಂಡ ಮಣಿಪುರಕ್ಕೆ ಯಾಕೆ ಹೋಗಿಲ್ಲ?

ಬೆಳಗಾವಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸತ್ಯಶೋಧನಾ ತಂಡ ರಚಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತ್ತು. ಬೆಳಗಾವಿಯ ಮಹಿಳೆಯ ಬೆತ್ತಲೆ ಪ್ರಕರಣದಲ್ಲಿ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡಿದೆ. ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಸಂತ್ರಸ್ತೆಯ ರಕ್ಷಣೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಬದ್ದವಾಗಿದೆ. ಜೆಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಹೋಗಲಿಲ್ಲವೇಕೆ? ಉತ್ತರ ಪ್ರದೇಶದ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡಿದಾಗ ಸತ್ಯಶೋಧನೆ ಮಾಡಲಿಲ್ಲವೇಕೆ? ಮಧ್ಯಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರವೆಸಗಿ ಬೆತ್ತಲೆ ಮಾಡಿ ರಸ್ತೆಗೆ ಅಟ್ಟಿದಾಗ ಹೋಗಲಿಲ್ಲವೇಕೆ? ಹತ್ರಾಸ್ ನಲ್ಲಿ ಬಿಜೆಪಿ ಶಾಸಕನೇ ಅತ್ಯಾಚಾರ ಮಾಡಿದಾಗ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗ ನಿಮಗೆ ಮಹಿಳೆಯರ ಬಗ್ಗೆ ಕಾಳಜಿ ಹುಟ್ಟಲಿಲ್ಲ ಏಕೆ? ಅಲ್ಲೆಲ್ಲಾ ಇದ್ದಿದ್ದು ನಿಮ್ಮದೇ ಸರ್ಕಾರ ಎಂಬ ಕಾರಣಕ್ಕೆ, ರಾಜಕೀಯ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಸತ್ಯಶೋಧನೆ ಮಾಡುವ ಮನಸಾಗಲಿಲ್ಲವೇ? ಸಂಸತ್ ದಾಳಿ ಪ್ರಕರಣದಿಂದ ಪ್ರತಾಪ್ ಸಿಂಹನನ್ನು ರಕ್ಷಿಸಲು ಈಗ ಸದಾರಮೆ ನಾಟಕ ಶುರು ಮಾಡಿದ ಬಿಜೆಪಿಗೆ ನೈತಿಕತೆ ಎಂಬ ಪದದ ಅರ್ಥವೇ ಗೊತ್ತಿಲ್ಲ ಎಂದು ಎಕ್ಸ್‌ನಲ್ಲಿ ಹೇಳಿತ್ತು.

ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು?

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ

ಘಟನೆ ನಡೆದ ಮರು ದಿನವೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಹಿಳೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ತೆರಳಿ ಸಂತ್ರಸ್ತೆಗೆ ಧೈರ್ಯ ತುಂಬಿದ್ದಾರೆ.

ಪ್ರಕರಣ ಸಂಬಂಧ ಕಾಕತಿ ಪೊಲೀಸರು ಶನಿವಾರದವರೆಗೆ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಬಂಧಿತರಾದ ಯುವತಿಯ ತಂದೆ, ತಾಯಿ, ಅಜ್ಜಿ ಮತ್ತು ಸಂಬಂಧಿಕರನ್ನು ಡಿ.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೌರ್ಜ್ಯಕ್ಕೊಳಗಾದ ಮಹಿಳೆಗೆ 2.03 ಎಕರೆ ಜಮೀನು ಮಂಜೂರು ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಮೀನು ಮಂಜೂರಾತಿ ಜೊತೆಗೆ ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಬೆಳಗಾವಿ ಹೊರ ವಲಯದ ವಂಟಮೂರಿ ಗ್ರಾಮದ ನಾಯಕ್‌ ಸಮುದಾಯಕ್ಕೆ ಸೇರಿದ ದುಂಡಪ್ಪ (24) ಮತ್ತು ಪ್ರಿಯಾಂಕಾ (18)ಪರಸ್ಪರ ಪ್ರೀತಿಸುತಿದ್ದರು. ಡಿಸೆಂಬರ್ 11ರಂದು ಭಾನುವಾರ ರಾತ್ರಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಯುವತಿಯ ಸಂಬಂಧಿಕರು, ಯುವಕನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಯುವಕನ ತಾಯಿ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...