Homeಕರ್ನಾಟಕಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಳಗಾವಿ: ಮಹಿಳೆ ಮೇಲೆ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

ಈ ಕುರಿತು ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಸಿಐಡಿ ಅಧಿಕಾರಿಗಳು ತನಿಖೆ ಕೈಗೊಂಡಾಗ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಅವರಿಗೆ ಪ್ರಕರಣದ ಕುರಿತು ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ನಿನ್ನೆ(ಡಿ.17) ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ದ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ಹಾಗಾಗಿ, ಬೇರೆ ಪ್ರಶ್ನೆ ಉದ್ಬವಿಸದು ಎಂದಿದ್ದರು. ಆದರೆ. ಸಂಜೆಯ ವೇಳೆಗೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದೆ ಎಂದು ತಿಳಿದು ಬಂದಿದೆ.

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದೆ. ಕರ್ನಾಟಕ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ರಾಷ್ಟ್ರೀಯ ಮಹಿಳಾ ಆಯೋಗ, ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಬಿಜೆಪಿಯ ಸತ್ಯಶೋಧನಾ ತಂಡದ ಸದಸ್ಯರು ಶನಿವಾರ ವಂಟಮೂರಿ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಆಯೋಗದ ಅಧಿಕಾರಿಗಳು ಡಿ.18 ಅಥವಾ 19ರಂದು ಬೆಳಗಾವಿಗೆ ಭೇಟಿ ನೀಡುವ ಸಾಧ್ಯತೆ ಇದೆ.

ಬಿಜೆಪಿಯಿಂದ ಸತ್ಯಶೋಧನೆ:

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದಿಂದ ಪ್ರಕರಣದ ಸತ್ಯಶೋಧನೆಗೆ ತಂಡ ರಚಿಸಿದ್ದರು. ಈ ತಂಡ ಶನಿವಾರ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಕಲೆ ಹಾಕಿದೆ.

ಸಂತ್ರಸ್ತ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆಕೆಯ ಆರೋಗ್ಯ ವಿಚಾರಿಸಿದೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತ್ಯಶೋಧನಾ ಸಮಿತಿ ಸದಸ್ಯೆ, ಬಿಜೆಪಿ ಸಂಸದೆ ಸುನಿತಾ ದುಗ್ಗಲ್, ಘಟನಾ ಸ್ಥಳಕ್ಕೆ ಭೇಟಿ ನೀಡದ, ಸಂಸತ್ರಸ್ತ ಮಹಿಳೆಗೆ ಸಾಂತ್ವನ ಹೇಳದ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಯ ಕ್ಷಮೆ ಕೇಳಬೇಕು. ನೊಂದ ಮಹಿಳೆಗೆ ಸರ್ಕಾರದ ದುಡ್ಡು ಬೇಡ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ಕೊಡಿಸಲಿ ಎಂದು ಹೇಳಿದ್ದರು.

ಘಟನೆಯನ್ನು ರಾಜ್ಯ ಸರ್ಕಾರದ ವಿರುದ್ದ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ, ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಕೆಲವೆಡೆ ಈಗಾಗಲೇ ಪ್ರತಿಭಟನೆಗಳು ನಡೆದಿವೆ.

ಕೋರ್ಟ್‌ ಆದೇಶ ಉಲ್ಲಂಘಿಸಿದ ಬಿಜೆಪಿ: ಸಿಎಂ ಸಿದ್ದರಾಮಯ್ಯ

ಸಂತ್ರಸ್ತ ಮಹಿಳೆಯನ್ನು ಭೇಟಿಯಾಗದಂತೆ ಹೈಕೋರ್ಟ್‌ ಆದೇಶವಿದ್ದರೂ, ಬಿಜೆಪಿಯವರು ಸತ್ಯಶೋಧನೆಯ ಹೆಸರಿನಲ್ಲಿ ಮಹಿಳೆಯನ್ನು ಭೇಟಿಯಾಗಿ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ.

ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು.

ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ ಎಂದಿದ್ದಾರೆ.

ಬಿಜೆಪಿಯ ಸತ್ಯಶೋಧನಾ ತಂಡ ಮಣಿಪುರಕ್ಕೆ ಯಾಕೆ ಹೋಗಿಲ್ಲ?

ಬೆಳಗಾವಿಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸತ್ಯಶೋಧನಾ ತಂಡ ರಚಿಸಿದ ಬೆನ್ನಲ್ಲೇ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಮುಂದಿಟ್ಟಿತ್ತು. ಬೆಳಗಾವಿಯ ಮಹಿಳೆಯ ಬೆತ್ತಲೆ ಪ್ರಕರಣದಲ್ಲಿ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಂಡಿದೆ. ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಸಂತ್ರಸ್ತೆಯ ರಕ್ಷಣೆಗೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಬದ್ದವಾಗಿದೆ. ಜೆಪಿ ನಡ್ಡಾ ಅವರೇ, ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮಾಡಿದಾಗ ನಿಮ್ಮ ಸತ್ಯಶೋಧನೆ ತಂಡ ಹೋಗಲಿಲ್ಲವೇಕೆ? ಉತ್ತರ ಪ್ರದೇಶದ ದಲಿತರ ಮೇಲೆ ಮೂತ್ರ ವಿಸರ್ಜನೆ ಮಾಡಿದಾಗ ಸತ್ಯಶೋಧನೆ ಮಾಡಲಿಲ್ಲವೇಕೆ? ಮಧ್ಯಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರವೆಸಗಿ ಬೆತ್ತಲೆ ಮಾಡಿ ರಸ್ತೆಗೆ ಅಟ್ಟಿದಾಗ ಹೋಗಲಿಲ್ಲವೇಕೆ? ಹತ್ರಾಸ್ ನಲ್ಲಿ ಬಿಜೆಪಿ ಶಾಸಕನೇ ಅತ್ಯಾಚಾರ ಮಾಡಿದಾಗ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗ ನಿಮಗೆ ಮಹಿಳೆಯರ ಬಗ್ಗೆ ಕಾಳಜಿ ಹುಟ್ಟಲಿಲ್ಲ ಏಕೆ? ಅಲ್ಲೆಲ್ಲಾ ಇದ್ದಿದ್ದು ನಿಮ್ಮದೇ ಸರ್ಕಾರ ಎಂಬ ಕಾರಣಕ್ಕೆ, ರಾಜಕೀಯ ಮಾಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಸತ್ಯಶೋಧನೆ ಮಾಡುವ ಮನಸಾಗಲಿಲ್ಲವೇ? ಸಂಸತ್ ದಾಳಿ ಪ್ರಕರಣದಿಂದ ಪ್ರತಾಪ್ ಸಿಂಹನನ್ನು ರಕ್ಷಿಸಲು ಈಗ ಸದಾರಮೆ ನಾಟಕ ಶುರು ಮಾಡಿದ ಬಿಜೆಪಿಗೆ ನೈತಿಕತೆ ಎಂಬ ಪದದ ಅರ್ಥವೇ ಗೊತ್ತಿಲ್ಲ ಎಂದು ಎಕ್ಸ್‌ನಲ್ಲಿ ಹೇಳಿತ್ತು.

ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳೇನು?

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ

ಘಟನೆ ನಡೆದ ಮರು ದಿನವೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಹಿಳೆಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಗೆ ತೆರಳಿ ಸಂತ್ರಸ್ತೆಗೆ ಧೈರ್ಯ ತುಂಬಿದ್ದಾರೆ.

ಪ್ರಕರಣ ಸಂಬಂಧ ಕಾಕತಿ ಪೊಲೀಸರು ಶನಿವಾರದವರೆಗೆ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರಂಭದಲ್ಲಿ ಬಂಧಿತರಾದ ಯುವತಿಯ ತಂದೆ, ತಾಯಿ, ಅಜ್ಜಿ ಮತ್ತು ಸಂಬಂಧಿಕರನ್ನು ಡಿ.21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೌರ್ಜ್ಯಕ್ಕೊಳಗಾದ ಮಹಿಳೆಗೆ 2.03 ಎಕರೆ ಜಮೀನು ಮಂಜೂರು ಮಾಡಿ ರಾಜ್ಯ ಸರ್ಕಾರದ ಆದೇಶಿಸಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಮೀನು ಮಂಜೂರಾತಿ ಜೊತೆಗೆ ಮಹಿಳೆಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ಬೆಳಗಾವಿ ಹೊರ ವಲಯದ ವಂಟಮೂರಿ ಗ್ರಾಮದ ನಾಯಕ್‌ ಸಮುದಾಯಕ್ಕೆ ಸೇರಿದ ದುಂಡಪ್ಪ (24) ಮತ್ತು ಪ್ರಿಯಾಂಕಾ (18)ಪರಸ್ಪರ ಪ್ರೀತಿಸುತಿದ್ದರು. ಡಿಸೆಂಬರ್ 11ರಂದು ಭಾನುವಾರ ರಾತ್ರಿ ಇಬ್ಬರು ಮನೆ ಬಿಟ್ಟು ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಯುವತಿಯ ಸಂಬಂಧಿಕರು, ಯುವಕನ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಯುವಕನ ತಾಯಿ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿದ ಪ್ರಕರಣ: ವಸತಿ ಶಾಲೆಯ ಪ್ರಾಂಶುಪಾಲರ ಸಹಿತ ಮೂವರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...