Homeಮುಖಪುಟತಮಿಳುನಾಡಿನಲ್ಲಿ ಭಾರೀ ಮಳೆ: 4 ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

ತಮಿಳುನಾಡಿನಲ್ಲಿ ಭಾರೀ ಮಳೆ: 4 ಜಿಲ್ಲೆಗಳಲ್ಲಿ ಹೈ ಅಲರ್ಟ್‌ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

- Advertisement -
- Advertisement -

ಮಿಚಾಂಗ್ ಚಂಡಮಾರುತದ ಪರಿಣಾಮ ಅಸ್ತವ್ಯಸ್ತಗೊಂಡಿದ್ದ ಜೀವನ ಚೇತರಿಸಿಕೊಳ್ಳುವ ಹೊತ್ತಿಗೆ ತಮಿಳುನಾಡಿನ ಜನತೆ ಮಳೆಯ ಆರ್ಭಟಕ್ಕೆ ಸಿಲುಕಿದ್ದಾರೆ. ಭಾರೀ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳು ಜಲಾವೃತವಾಗಿವೆ.

ರಾಜ್ಯದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ, ತೆಂಕಶಿ ಮತ್ತು ವಿರುದನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಎಲ್ಲಾ ಶಾಲಾ-ಕಾಲೇಜುಗಳು, ಖಾಸಗಿ ಸಂಸ್ಥೆ, ಬ್ಯಾಂಕ್‌, ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಇಂದು (ಸೋಮವಾರ) ರಜೆ ಘೋಷಿಸಲಾಗಿದೆ.

ಇಂದು (ಡಿಸೆಂಬರ್ 18) ತಮಿಳುನಾಡು, ಕೇರಳ ಮತ್ತು ಮಾಹೆಯ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಮುನ್ಸೂಚನೆ ನೀಡಿದೆ. ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಮಳೆಯಿಂದ ತೂತುಕುಡಿ ಜಲಾವೃತವಾಗಿದೆ. ಇಲ್ಲಿನ ಕೋವಿಲ್‌ಪಟ್ಟಿ, ಎಟ್ಟಾಯಪುರಂ, ವಿಲಾತಿಕುಲಂ, ಕಲುಗುಮಲೈ, ಕಯತಾರ್, ಕಡಂಬೂರ್, ವೆಂಬಾರ್, ಸುರಂಗುಡಿ ಮತ್ತು ಇತರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ತೂತುಕುಡಿಯ ಕಾಯಲ್‌ಪಟ್ಟಿಣಂನಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಲ್ಲಿ ಒಂದೇ ದಿನದಲ್ಲಿ ದಾಖಲೆಯ ಮಳೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 932 ಮಿ.ಮೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿರಂತರ ಮಳೆಯಿಂದಾಗಿ ತೂತುಕುಡಿ ಜಿಲ್ಲೆಯ ಕೋವಿಲ್‌ಪಟ್ಟಿ ಸುತ್ತಮುತ್ತಲಿನ ನದಿಗಳು ಮತ್ತು ಕೆರೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯ ಆತಂಕದಲ್ಲಿವೆ. ಕೋವಿಲ್‌ಪಟ್ಟಿಯ 40 ಕೆರೆಗಳು ತುಂಬಿವೆ. ಎರಡು ಕೆರೆಗಳು ಹಾಳಾಗಿದ್ದು, ದುರಸ್ತಿ ಮಾಡಿದ್ದೇವೆ. ಉಳಿದ ಕೆರೆಗಳ ಮೇಲೂ ನಿರಂತರ ನಿಗಾ ವಹಿಸಿದ್ದೇವೆ. ಕೆರೆ ಒತ್ತುವರಿ ಕಂಡು ಬಂದರೆ ಕೂಡಲೇ ಸರಿಪಡಿಸಲು ಸಿದ್ಧರಿದ್ದೇವೆ ಎಂದು ಜಿಲ್ಲಾ ಅಭಿವೃದ್ಧಿ ಅಧಿಕಾರಿ ರಾಜೇಶ್ ತಿಳಿಸಿದ್ದಾರೆ.

ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಡಿ.18 ಮತ್ತು 19 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕನ್ಯಾಕುಮಾರಿ, ತೂತುಕುಡಿ, ತೆಂಕಶಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ 250 ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಯನ್ನು ನಿಯೋಜಿಸುವುದು ಸೇರಿದಂತೆ ಸರ್ಕಾರವು ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಹೇಳಿದ್ದಾರೆ.

ತಿರುನಲ್ವೇಲಿಯಲ್ಲಿ 19, ಕನ್ಯಾಕುಮಾರಿಯಲ್ಲಿ ನಾಲ್ಕು, ತೂತುಕುಡಿಯಲ್ಲಿ ಎರಡು ಮತ್ತು ತೆಂಕಶಿ ಜಿಲ್ಲೆಯಲ್ಲಿ ಒಂದು ಶಿಬಿರವನ್ನು ವಿಪತ್ತಿನ ಸಮಯದಲ್ಲಿ ಸಾರ್ವಜನಿಕರಿಗೆ ವಸತಿ ಕಲ್ಪಿಸಲು ಸ್ಥಾಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...