Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...