Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...