Homeಮುಖಪುಟಕೇಸರೀಕರಣಗೊಂಡ ವಂದೇ ಭಾರತ್‌ ರೈಲು

ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

- Advertisement -
- Advertisement -

‘ಕೇಸರೀಕರಣ’ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ವ್ಯಾಪಕವಾಗಿ ಕೇಳಿ ಬಂದ ಆರೋಪ. ಶಿಕ್ಷಣ ಸಂಸ್ಥೆಗಳು, ಪಠ್ಯ ಪುಸ್ತಕಗಳು, ಸಾರಿಗೆ ಸಂಸ್ಥೆಗಳು ಸೇರಿ ವಿವಿಧ ಇಲಾಖೆಗಳಲ್ಲಿ ಇದಕ್ಕೆ ಪೂರಕವಾದ ಬೆಳವಣಿಗೆಗಳು ಕಂಡು ಬಂದಿದ್ದವು. ಇದೀಗ ರೈಲ್ವೇ ಇಲಾಖೆಯಲ್ಲೂ ಕೇಸರೀಕರಣ ಆರೋಪ ಕೇಳಿ ಬಂದಿದೆ. ದೇಶದ ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟನೆ ಮಾಡಲಿದ್ದಾರೆ.

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಇದಕ್ಕೆ ಮೊದಲು ರೈಲ್ವೇ ನಿಲ್ಧಾಣ, ಬಸ್‌ ನಿಲ್ಧಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ನಗರಗಳ ಹೆಸರನ್ನು ಬದಲಿಸಲಾಗಿತ್ತು. ಉತ್ತರಪ್ರದೇಶದಲ್ಲಿ ಯೋಗಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಾಲಾ ಮಕ್ಕಳ ಬ್ಯಾಗನ್ನು ಕೇಸರೀಕರಣಗೊಳಿಸಿದ್ದರು. ಈ ಮೊದಲು ಉತ್ತರಪ್ರದೇಶದಲ್ಲಿ
ಲಕ್ಷಣ್ ಮತ್ತು ರಾಣಿಲಕ್ಷ್ಮೀಬಾಯಿ ಪ್ರಶಸ್ತಿ ಸಮಾರಂಭವನ್ನು ಸಂಪೂರ್ಣ ಕೇಸರೀಕರಣಗೊಳಿಸಿದ್ದ ಯೋಗಿ ಸರಕಾರ ಪ್ರಶಸ್ತಿ ಪತ್ರ, ಬುಕ್ಲೆಟ್, ಪ್ರಶಸ್ತಿ ವಿಜೇತ ಸಮಾರಂಭದ ಉಸ್ತುವಾರಿಗಳ ಉಡುಗೆತೊಡುಗೆಯನ್ನೂ ಕೇಸರಿಮಯಗೊಳಿಸಿತ್ತು. ಇದಲ್ಲದೆ ರಾಜ್ಯ ರಸ್ತೆಸಾರಿಗೆ ಸಂಸ್ಥೆಯ 50 ಕೇಸರಿ ಬಸ್‌ಗಳನ್ನು ಬಿಡುಗಡೆಗೊಳಿಸಿತ್ತು. ಈ ಬಸ್ಸುಗಳಿಗೆ ‘ಸಂಕಲ್ಪ ಸೇವಾ’ ಎಂದು ಹೆಸರಿಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ಈ ಬಸ್ಸುಗಳ ಓಡಾಟ ನಡೆಸುತ್ತಿದೆ.

ಎರಡನೇ ‘ಕೇಸರಿ’ ಬಣ್ಣದ ವಂದೇ ಭಾರತ್‌ ರೈಲು ಸಂಚಾರ ಆರಂಭ:

ವಾರಣಾಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದು, ಇದು ಕೇಸರಿ ಬಣ್ಣದಲ್ಲಿ ಇರಲಿದೆ ಮತ್ತು ಹೆಚ್ಚುವರಿ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಮತ್ತು ರೈಲ್ವೇ ಸಚಿವಾಲಯವು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಕೇಸರಿ ಬಣ್ಣದ ರೈಲಿನ ಫೋಟೋವನ್ನು ಹಂಚಿಕೊಂಡಿದೆ.

ನೂತನ ರೈಲು ವೈ-ಫೈ ಸೌಲಭ್ಯ, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‌ಗಳು, ಟಚ್ ಮಾಡದೆ ತೆರೆಯುವಂತಹ ಬಯೋ-ವ್ಯಾಕ್ಯೂಮ್ ಟಾಯ್ಲೆಟ್‌ಗಳು, ಎಲ್ಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‌ಗಳು, ಉತ್ತಮ ಹವಾನಿಯಂತ್ರಣ ವ್ಯವಸ್ಥೆ ಕೂಡ ಹೊಂದಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ  2:15ಕ್ಕೆ ರೈಲಿನ ಉದ್ಘಾಟನೆ ನಡೆಯಲಿದ್ದು, ವಾರಣಾಸಿಯಿಂದ ನವದೆಹಲಿಗೆ ಅದರ ಉದ್ಘಾಟನೆಯ ಅಂಗವಾಗಿ ರೈಲು ಸಂಚರಿಸಲಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನಗಳು ರೈಲು ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ಸಂಚರಿಸಲಿದೆ. ರೈಲು ಮಧ್ಯಾಹ್ನ 2.5ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3 ಗಂಟೆಗೆ ವಾಪಾಸ್ಸು ವಾರಣಾಸಿಗೆ ಹೊರಡಲಿದೆ.

ರೈಲ್ವೇ ಇಲಾಖೆಯು ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆ.24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತ್ತು. ಸೆ.24ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿತ್ತು. ಈ ವೇಳೆ ರೈಲ್ವೇಗಳ ಕೇಸರೀಕರಣದ ಬಗ್ಗೆ ಚರ್ಚೆಯಾಗಿತ್ತು.

ಪತ್ರಕರ್ತ ಮೊಹಮ್ಮದ್ ಜುಬೇರ್, ಈ ವಂದೇ ಭಾರತ್‌ನಲ್ಲಿನ ಹಸಿರು ಬಣ್ಣವು ‘ಅಚ್ಛೇ ದಿನ್” ರೀತಿ ಕಾಣೆಯಾಗಿದೆ. ರೈಲಿನಲ್ಲಿ ತ್ರಿವರ್ಣ ಕಾಣೆಯಾಗಿದೆ ಎಂದು ಹೇಳಿದ್ದರು. ಸಾಮಾಜಿಕ ಜಾಲತಾಣಗಳ ಬಳಕೆದಾರರು ಕೇಸರಿ ಮತ್ತು ಬಿಳಿ ಬಣ್ಣ ಇದೆ ಆದರೆ ಹಸಿರು ಎಲ್ಲಿದೆ?  ಅದರ ನಡುವೆ ಧರ್ಮಚಕ್ರ ಕಾಣೆಯಾಗಿದೆ ಎಂದು ಹೇಳಿದ್ದರು.

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗೆ ಮಾತನಾಡುವಾಗ ಕೇಸರಿ ಬಣ್ಣದಲ್ಲೇ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದಿನ ರಾಜಕೀಯ ಲೆಕ್ಕಾಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ್ದರು. ವಂದೇ ಭಾರತ್‌ ರೈಲಿಗೆ ಕೇಸರಿ ಬಣ್ಣದ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಕೂಡಿದೆ. ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಈ ಬಣ್ಣಗಳನ್ನು ಬಳಕೆ ಮಾಡಲಾಗಿದೆ ಎಂದು ಹೇಳಿದ್ದರು.

ವಂದೇ ಭಾರತ್ ರೈಲು:

2019ರಲ್ಲಿ ಭಾರತದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚಾಲನೆಗೊಂಡಿತ್ತು. 16 ಬೋಗಿಗಳಿರುವ ಈ ಒಂದು ಎಕ್ಸ್‌ಪ್ರೆಸ್ ರೈಲಿನ ನಿರ್ಮಾಣಕ್ಕೆ ಅಂದಾಜು 115 ಕೋಟಿ ರೂ ತಗುಲುತ್ತದೆ ಎಂದು ಹೇಳಲಾಗಿದೆ. ಭಾರತದಲ್ಲಿ ಸದ್ಯ ಒಟ್ಟು 34 ವಂದೇ ಭಾರತ್ ರೈಲುಗಳು ದೈನಂದಿನ ಕಾರ್ಯಾಚರಣೆಯಲ್ಲಿ ತೊಡಗಿವೆ. ಬ್ರಾಡ್ ಗೇಜ್  ವಿದ್ಯುದೀಕೃತ ನೆಟ್‌ವರ್ಕ್ ಹೊಂದಿರುವ ರಾಜ್ಯಗಳಲ್ಲಿ ಈ ನೂತನ ಒಂದೇ ಭಾರತ್ ರೈಲು ಸಂಚಾರ ನಡೆಸಲಿವೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸ್ಥಳೀಯವಾಗಿ ನಿರ್ಮಿತ ಮತ್ತು ಅತ್ಯಾಧುನಿಕ ಪ್ರಯಾಣಿಕ ಸೌಕರ್ಯಗಳನ್ನು ಹೊಂದಿವೆ.

ಕಳೆದ ಡಿ.8ರಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2047ರ ವೇಳೆಗೆ ದೇಶದಲ್ಲಿ 4,500 ವಂದೇ ಭಾರತ್ ರೈಲುಗಳು ಓಡಾಡಲಿದೆ ಎಂದು ಹೇಳಿದ್ದರು. ಇತ್ತೀಚೆಗೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ 12,000ಕ್ಕೂ ಹೆಚ್ಚು ಹೊಸ ರೈಲುಗಳ ತಯಾರಿ ಬಗ್ಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...