Homeಅಂತರಾಷ್ಟ್ರೀಯಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

- Advertisement -
- Advertisement -

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಿರಂತರ ಬಾಂಬ್‌ ದಾಳಿ ನಡೆಸುತ್ತಿದೆ. ಈ ಭೀಕರ ಯುದ್ಧ ಗಾಝಾದಲ್ಲಿ ಹತ್ಯಾಕಾಂಡದ ಜೊತೆ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದು, ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿದೆ.

ಗಾಝಾದ ದಕ್ಷಿಣಕ್ಕೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ. ಇದರಿಂದ ಗಾಝಾದ ದಕ್ಷಿಣದಲ್ಲಿ ನಿರಾಶ್ರಿತರ ಕೇಂದ್ರಗಳಲ್ಲಿ ಲಕ್ಷಾಂತರ ಮಂದಿ ನೆಲೆಸಿದ್ದಾರೆ. ಈ ಭಾಗದಲ್ಲಿ ಹಸಿದ ಮತ್ತು ಹತಾಶೆಯ ಜನರು ಈಜಿಪ್ಟ್‌ನ ಗಡಿಯ ಸಮೀಪವಿರುವ ರಫಾ ಪ್ರದೇಶದಲ್ಲಿ ಆಹಾರ ಮತ್ತು ಇತರ ಸರಬರಾಜುಗಳನ್ನು ಸಾಗಿಸುವ ಟ್ರಕ್‌ಗಳನ್ನು ತಡೆಯುವುದು. ಆಹಾರ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿರುವುದು ಕಂಡು ಬಂದಿದೆ.

ರಫಾ ಕ್ರಾಸಿಂಗ್‌ನಲ್ಲಿ ಜನರು ನೆರವು ಸಾಗಾಟ ಮಾಡುವ ಟ್ರಕ್‌ಗಳನ್ನು ಸುತ್ತುವರಿಯುತ್ತಾರೆ, ಕೆಲವರು ಟ್ರಕ್‌ಗಳ ಮೇಲೆ ಹಾರುತ್ತಾರೆ. ನೀರಿನ ಬಾಟಲಿಗಳನ್ನು, ಆಹಾರದ ಪೊಟ್ಟಣಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಕೆಲವು ಟ್ರಕ್‌ಗಳನ್ನು ಮುಸುಕುಧಾರಿಗಳು ಕಾವಲು ಕಾಯುತ್ತಿರುವುದು ಕೂಡ ಕಂಡು ಬಂದಿದೆ.

ಇದು ಕೇವಲ ರಫಾ ನಗರದ ಸ್ಥಿತಿ ಮಾತ್ರವಲ್ಲ. ಗಾಝಾದಲ್ಲಿನ ಮಾನವೀಯ ಪರಿಸ್ಥಿತಿಯು ತುಂಬಾ ಕೆಟ್ಟದಾಗಿದೆ. ಒಂದು ಮಿಲಿಯನ್ ನಿರಾಶ್ರಿತ ಪ್ಯಾಲೆಸ್ತೀನ್‌ ನಾಗರಿಕರು ಹಸಿವು ಮತ್ತು ಬಾಯಾರಿಕೆಯಿಂದ ಬಳಲುತ್ತಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಪ್ಯಾಲೆಸ್ತೀನ್‌ಗೆ ಹರಿದು ಬರುತ್ತಿರುವ ನೆರವು ಸಾಕಾಗುತ್ತಿಲ್ಲ. ಜನರು ಮನೆಯಿಲ್ಲದೆ, ಆಹಾರವಿಲ್ಲದೆ, ನೀರಿಲ್ಲದೆ ಮತ್ತು ವೈದ್ಯಕೀಯ ಸಾಮಗ್ರಿಗಳಿಲ್ಲದೆ ಪರದಾಡುತ್ತಿದ್ದಾರೆ. ವಿಶ್ವಸಂಸ್ಥೆಯು ಇತ್ತೀಚೆಗೆ ಗಾಝಾದಲ್ಲಿರುವ ಜನರು ಆಹಾರಕ್ಕಾಗಿ ಹತಾಶರಾಗಿದ್ದಾರೆ, ಅವರು ನೆರವು ಟ್ರಕ್‌ಗಳನ್ನು ತಡೆದು ಸಿಕ್ಕಿದ್ದನ್ನು ಕಸಿದುಕೊಂಡು ತಿನ್ನುವ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿತ್ತು.

ಇತ್ತೀಚೆಗೆ ಗಾಝಾ ಪಟ್ಟಿಗೆ ಭೇಟಿ ನೀಡಿದ ಯುಎನ್‌ಆರ್‌ಡಬ್ಲ್ಯೂಎ ಮುಖ್ಯಸ್ಥ ಫಿಲಿಪ್ ಲಜ್ಜರಿನಿ ಮಾತನಾಡುತ್ತಾ, ಗಾಝಾ ನಿವಾಸಿಗಳು ಸುದೀರ್ಘ ವರ್ಷಗಳಿಂದ ಇಸ್ರೇಲ್‌ನ ದಾಳಿಗೆ ಒಳಗಾಗಿದ್ದರೂ ಈ ರೀತಿಯ ಹಸಿವನ್ನು ಎಂದು ಅನುಭವಿಸಿರಲಿಕ್ಕಿಲ್ಲ. ರಾಫಾದಲ್ಲಿನ ಜನರು ಸಂಪೂರ್ಣ ಹತಾಶೆಯಿಂದ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ನೆರವು ಸಾಮಾಗ್ರಿ ಕಸಿದು ಸ್ಥಳದಲ್ಲೇ ತಿನ್ನುತ್ತಿದ್ದು, ಅವರ ಹಸಿವಿನ ದಾಹವನ್ನು ಸೂಚಿಸುತ್ತದೆ. ಈ ಭಯಾನಕ ಸ್ಥಿತಿ ನನ್ನ ಕಣ್ಣುಗಳಿಂದ ನೋಡಿದೆ ಎಂದು ಫಿಲಿಪ್ ಲಜ್ಜರಿನಿ ಹೇಳಿದ್ದಾರೆ.

WFP ಉಪ ಮುಖ್ಯಸ್ಥ ಕಾರ್ಲ್ ಸ್ಕೌ ಮಾತನಾಡುತ್ತಾ, ಗಾಝಾದಲ್ಲಿ ಸುಮಾರು ಅರ್ಧದಷ್ಟು ಜನರು ಹಸಿವಿನಿಂದ ಬಳಲುತ್ತಿದ್ದಾರೆ, ಅವರು ಮುಂದಿನ ಊಟ ನಮಗೆ ಸಿಗುತ್ತಾ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ರಫಾದಲ್ಲಿ ಪ್ರತಿ ಚದರ ಕಿಲೋಮೀಟರ್‌ಗೆ 12,000ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಇಸ್ರೇಲ್‌ ರಫಾವನ್ನು ಕೂಡ ಕೇಂದ್ರೀಕರಿಸಿ ದಾಳಿಯನ್ನು ನಡೆಸುತ್ತಿದೆ. ಇಸ್ರೇಲ್‌ನ ಬಾಂಬ್ ದಾಳಿಯಿಂದ ಈಗಾಗಲೇ 19,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಮತ್ತು 50,897 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ. ಆದರೆ ಇಸ್ರೇಲ್ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: ಕೇಸರೀಕರಣಗೊಂಡ ವಂದೇ ಭಾರತ್‌ ರೈಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...