Homeಮುಖಪುಟಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

ಡೆರೆಕ್ ಒಬ್ರಿಯಾನ್ ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹ: ಪತ್ರ ಬರೆದ ಖರ್ಗೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಅವರ ಅಮಾನತು ಆದೇಶ ಹಿಂಪಡೆಯಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದು, ಸಭಾಪತಿ ಜಗದೀಪ್ ಧನ್ಖರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.

ಸಂಸತ್ತಿನನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮೂಲಕ ಸ್ಪಷ್ಟನೆ ಪಡೆಯಲು ತೃಣಮೂಲ ಕಾಂಗ್ರೆಸ್ ಸಂಸದರು ತಮ್ಮ ಗಮನ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

‘ಡಿಸೆಂಬರ್ 13, 2023 ರಂದು ಲೋಕಸಭೆಯಲ್ಲಿ ನಡೆದ ಆಘಾತಕಾರಿ ಘಟನೆಯ ಕುರಿತು ಗೃಹ ವ್ಯವಹಾರಗಳ ಸಚಿವರ ಹೇಳಿಕೆಗಾಗಿ ‘ಇಂಡಿಯಾ’ ಕೂಟದ ಪಕ್ಷಗಳ ಸಾಮೂಹಿಕ ಬೇಡಿಕೆಯ ಬಗ್ಗೆ ನಿಮ್ಮ ಗಮನ ಸೆಳೆಯಲು ಅವರು ಪ್ರಯತ್ನಿಸುತ್ತಿದ್ದರು. ಇದು ಸಂಪೂರ್ಣವಾಗಿ ನ್ಯಾಯಸಮ್ಮತ ಬೇಡಿಕೆಯಾಗಿದೆ’ ಎಂದು ತಿಳಿಸಿದ್ದಾರೆ.

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗ ಸದನದಲ್ಲಿ ಈ ವಿಷಯದ ಕುರಿತು ಮಾತನಾಡದ ಅಮಿತ್ ಶಾ, ಟಿವಿ ಚಾನೆಲ್‌ನೊಂದಿಗೆ ಮಾತನಾಡಿರುವುದನ್ನು ಖರ್ಗೆ ಆಕ್ಷೇಪಿಸಿದರು. ‘ಗೃಹ ಸಚಿವರು 13ನೇ ಡಿಸೆಂಬರ್ 2023 ರ ಘಟನೆಯ ಬಗ್ಗೆ ಮಾಧ್ಯಮ ವೇದಿಕೆಯಲ್ಲಿ ಮಾತನಾಡಬಹುದು. ಆದರೆ ಸಂಸತ್ತಿನ ಅಧಿವೇಶನ ನಡೆಯುವಾಗ ಸದನದಲ್ಲಿ ಹೇಳಿಕೆಯ ರೂಪದಲ್ಲಿ ಹೇಳಲು ನಿರಾಕರಿಸುವುದು ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 13 ರಂದು ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯೊಳಗೆ ಜಿಗಿದರು. ಘಟನೆ ಕುರಿತು ಅಮಿತ್ ಶಾ ಹೇಳಿಕೆ ನೀಡುವಂತೆ ವಿರೋಧ ಪಕ್ಷಗಳಿಂದ ಬೇಡಿಕೆ ಇಟ್ಟು, ಆಗ್ರಹಿಸಿದವು. ಕೆಲವು ಸದಸ್ಯರು ಗೃಹ ಸಚಿವರ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಗುರುವಾರ ಬೆಳಗ್ಗೆ 11 ಗಂಟೆಗೆ ರಾಜ್ಯಸಭೆಯ ಕಲಾಪ ಆರಂಭವಾದ ಸ್ವಲ್ಪ ಹೊತ್ತಿನಲ್ಲೆ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಭದ್ರತಾ ಉಲ್ಲಂಘನೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸದನದ ಬಾವಿಗೆ ಇಳಿದರು. ಡೆರೆಕ್ ಒಬ್ರಿಯನ್ ಕೂಡ ಸಭಾಧ್ಯಕ್ಷರ ಕುರ್ಚಿಯ ಮುಂಭಾಗಕ್ಕೆ ತೆರಳಿ ಕೈ ಎತ್ತಿ ಬೇಡಿಕೆ ಇಟ್ಟರು. ಇದರಿಂದ ಕೆರಳಿದ ರಾಜ್ಯಸಭಾ ಅಧ್ಯಕ್ಷರು ಟಿಎಂಸಿ ಸಂಸದರನ್ನು ಹೆಸರಿಸಿ ಸದನದಿಂದ ಹೊರಹೋಗುವಂತೆ ಸೂಚಿಸಿದರು.
ಆಡಳಿತ ಪಕ್ಷದ ನಾಯಕ ಪಿಯೂಷ್ ಗೋಯಲ್ ಅವರು ಅಧಿವೇಶನದ ಉಳಿದ ಭಾಗಕ್ಕೆ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.

ಒಬ್ರಿಯಾನ್ ಮೌನ ಪ್ರತಿಭಟನೆ:

ಕಳೆದ ಗುರುವಾರ ರಾಜ್ಯಸಭೆಯ ಚಳಿಗಾಲದ ಅಧಿವೇಶನದಿಂದ ಅಮಾನತುಗೊಳಿಸಿದ್ದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಸಂಸತ್ತಿನ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿದರು. ‘ಮೌನ ಪ್ರತಿಭಟನೆ’ ಎಂದು ಮೂರು ಭಾಷೆಗಳಲ್ಲಿ ಬರೆದ ಕಾಗದವನ್ನು ಓಬ್ರಿಯಾನ್ ಕೈಯಲ್ಲಿ ಹಿಡಿದಿದ್ದರು; ಇನ್ನೊಂದು ಕಾಗದವನ್ನು ಅವರ ಬೆನ್ನಿಗೆ ಅಂಟಿಸಿಕೊಂಡಿದ್ದರು. ಒಬ್ರಿಯಾನ್ ಅವರ ನಡವಳಿಕೆ ಗಂಭೀರ ದುರ್ನಡತೆ ಮತ್ತು ನಾಚಿಕೆಗೇಡಿ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಅಂದು ಟೀಕಿಸಿ, ಅದನದಿಂದ ಹೊರಹೋಗುವಂತೆ ಸೂಚಿಸಿದ್ದರು.

13 ಜನ ಲೋಕಸಭಾ ಸಂಸದರ ಅಮಾನತು:

ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ್ದಕ್ಕೆ ಕಳೆದ ಗುರುವಾರ ಕಾಂಗ್ರೆಸ್ ಹಾಗೂ ಡಿಎಂಕೆ ಪಕ್ಷದ 13 ಜನ ಸದಸ್ಯರನ್ನು ಸ್ಪೀಕರ್ ಚಳಿಗಾಲ ಅಧೀವೇಶನ ಮುಗಿಯುವವರೆಗೆ ಅಮಾನತು ಮಾಡಿದ್ದಾರೆ.
ಮಾಣಿಕ್ಕಂ ಠಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿ.ಕೆ. ಶ್ರೀಕಾಂತಂ, ಬೇನಿ ಬಹನ್, ಕೆ. ಸುಬ್ರಮಣ್ಯಂ, ಎಸ್. ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಅವರನ್ನು ಲೋಕಸಭೆಯಿಂದ, ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರೇನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ; ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...