HomeUncategorizedದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

ದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

- Advertisement -
- Advertisement -

ಈಶಾನ್ಯ ದೆಹಲಿಯಲ್ಲಿ 2020ರ ಫೆಬ್ರವರಿಯಲ್ಲಿ ನಡೆದ ಕೋಮು ಹಿಂಸಾಚಾರ ಪ್ರಕರಣಗಳಲ್ಲಿ ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು ರಾಜೀನಾಮೆ ನೀಡಿದ್ದು, ಈ ಕುರಿತ ಪತ್ರವನ್ನು ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಸಲ್ಲಿಸಿದ್ದಾರೆ.

ನಾನು 202ರ ದೆಹಲಿ ಗಲಭೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕಗೊಂಡಿದ್ದೆ. ನನ್ನ ಕರ್ತವ್ಯವನ್ನು 3 ವರ್ಷಗಳಲ್ಲಿ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಕರ್ತವ್ಯ ನಿಭಾಯಿಸಿದ್ದೇನೆ ಎಂದು ಪ್ರಸಾದ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿರುವ ಬಗ್ಗೆ ಲೈವ್ ಲಾ ವರದಿ ಮಾಡಿದೆ. ಈಗ ನಾನು ಪ್ರಾಸಿಕ್ಯೂಟರ್ ಆಗಿ ಮುಂದುವರಿಯಲು ಸಾಧ್ಯವಾಗುವುದಿಲ್ಲ ಮತ್ತು ಆದ್ದರಿಂದ ತಕ್ಷಣವೇ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಕೂಡಲೇ ಅಂಗೀಕರಿಸಬೇಕು. ನನಗೆ ನೀಡಿದ ಅವಕಾಶಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಾರ್ ಮತ್ತು ಬೆಂಚ್ ಪ್ರಕಾರ, ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಪ್ರಸಾದ್ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಶ್ರದ್ಧಾ ವಾಕರ್ ಪ್ರಕರಣಕ್ಕೆ ಅವರಿಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

ದಿ ವೈರ್‌ ವರದಿ ಮಾಡಿದಂತೆ 2020ರ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಅನೇಕ ಪ್ರಕರಣಗಳಿವೆ. ಇದರಲ್ಲಿ ನ್ಯಾಯಾಧೀಶರು ಪಕ್ಷಪಾತ, ಅಸಮರ್ಪಕ ತನಿಖೆಗಾಗಿ ದೆಹಲಿ ಪೊಲೀಸರನ್ನು ಟೀಕಿಸಿದ್ದಾರೆ. ನ್ಯಾಯಾಲಯಗಳು, ಹಲವಾರು ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ದೆಹಲಿ ಪೊಲೀಸರಲ್ಲಿ ಸಾಕ್ಷಾಧಾರಗಳ ಕೊರತೆ, ಸಾಕ್ಷಿಗಳ ಸೃಷ್ಟಿ, ವಾಸ್ತವತೆಯ ಬಗ್ಗೆ ತರಾಟೆಗೆ ತೆಗೆದುಕೊಂಡಿವೆ. ಕೆಲವು ಪ್ರಕರಣಗಳ ತನಿಖೆಯನ್ನು ಪೊಲೀಸರು ನಡೆಸಿದ ರೀತಿ ವಿಚಿತ್ರವಾಗಿದೆ ಎಂಬುದನ್ನು ಗಮನಿಸಿದೆ.

ಈಶಾನ್ಯ ದೆಹಲಿಯಲ್ಲಿ ಫೆಬ್ರವರಿ 2020ರಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿ ಕನಿಷ್ಠ 758 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. 2020ರ ಫೆಬ್ರವರಿಯಲ್ಲಿ ನಡೆದ ದೆಹಲಿ ಹಿಂಸಾಚಾರದ ವೇಳೆ 53 ಜನರು ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾಚಾರವು ಫೆಬ್ರವರಿ 23 ರಿಂದ 27ರವರೆಗೆ ನಾಲ್ಕು ದಿನಗಳ ಕಾಲ ನಡೆದಿತ್ತು.

ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ನೇರಹೊಣೆ ಎಂದು ಸತ್ಯಶೋಧನ ಸಮಿತಿಯ ವರದಿ ಹೇಳಿತ್ತು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್) ಬಿಡುಗಡೆಗೊಳಿಸಿರುವ ಸತ್ಯಶೋಧನಾ ವರದಿಯು, 53 ಮಂದಿಯನ್ನು ಬಲಿ ಪಡೆದ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಣೆಗಾರರನ್ನಾಗಿಸಿದೆ. ಹಿಂಸೆ ಉಲ್ಬಣಗೊಳ್ಳಲು ಹಾಗೂ ಈ ಕುರಿತಾದ ಪೊಲೀಸ್ ತನಿಖೆ ಪೂರ್ವಾಗ್ರಹಪೀಡಿತವಾಗಲು ಕೂಡ ಶಾ ಅವರೇ ಕಾರಣ ಎಂದು ಈ ವರದಿ ಆರೋಪಿಸಿತ್ತು.

ಬಿಜೆಪಿ ನಾಯಕರುಗಳಾದ ಕಪಿಲ್ ಮಿಶ್ರಾ ಮತ್ತು ಅನುರಾಗ್ ಠಾಕೂರ್ ಅವರ ಪ್ರಚೋದನಾತ್ಮಕ ಭಾಷಣಗಳು ಹಾಗೂ ಫೆಬ್ರವರಿ 21ರ ಶಿವರಾತ್ರಿ ಮೆರವಣಿಗೆಗಳ ವೇಳೆಯ ಪ್ರಚೋದನಾತ್ಮಕ ಘೋಷಣೆಗಳು ಕೂಡ ದೆಹಲಿ ಹಿಂಸೆಗೆ ಕಾರಣವಾಗಿತ್ತು ಎಂದು ಸತ್ಯಶೋಧನಾ ವರದಿ ತಿಳಿಸಿತ್ತು.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...