Homeಮುಖಪುಟಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

- Advertisement -
- Advertisement -

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದ್ದು, ಭಾರತೀಯ ಪುರಾತತ್ವ ಇಲಾಖೆಯು ಉತ್ತರಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ಕುರಿತ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಿದೆ.

ಇಂದು ಮಧ್ಯಾಹ್ನ ವೈಜ್ಞಾನಿಕ ಸಮೀಕ್ಷೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ  ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ  ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸರ್ವೆ ಕಾರ್ಯ ಪೂರ್ಣಗೊಳಿಸಿರುವ ಭಾರತೀಯ ಪುರಾತತ್ವ ಇಲಾಖೆಯು, ತನ್ನ ವರದಿಯನ್ನು ವಿಚಾರಣೆ ನಡೆಯುತ್ತಿರುವ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ಪ್ರಕರಣ ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಹಿಂದೂ ಅರ್ಜಿದಾರರ ಪರ ವಕೀಲ ಮದನ್ ಮೋಹನ್ ಯಾದವ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಎಎಸ್‌ಐ ಸ್ಥಾಯಿ ಸಮಿತಿಯ ಅಮಿತ್ ಶ್ರೀವಾಸ್ತವ ಅವರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತಮ್ಮ ವರದಿಯನ್ನು ಸಲ್ಲಿಸಿದ್ದಾರೆ. ವರದಿ ಸಲ್ಲಿಸಿದ ಸಂದರ್ಭದಲ್ಲಿ ಎಎಸ್‌ಐನ ನಾಲ್ವರು ಹಿರಿಯ ಅಧಿಕಾರಿಗಳು ಇದ್ದರು. ಡಿ.21ರಂದು ನಡೆಯಲಿರುವ ವಿಚಾರಣೆ ಸಂದರ್ಭದಲ್ಲಿ ಲಕೋಟೆಯನ್ನು ತೆರೆದು ಎರಡೂ ಕಡೆಯವರಿಗೆ ಅದರ ಪ್ರತಿಯನ್ನು ನ್ಯಾಯಾಲಯ ನೀಡಲಿದೆ ಎಂದು ಯಾದವ್ ತಿಳಿಸಿದರು.

ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿ ದೇವಾಲಯದ ಮೂಲ ತಳಪಾಯದ ಮೇಲೆ 17ನೇ ಶತಮಾನದಲ್ಲಿ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ಪರ ಅರ್ಜಿದಾರರು ವಾದವನ್ನು ಮಂಡಿಸಿದ್ದರು.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲಿ ಪ್ರಸ್ತುತ ಸ್ಥಿತಿಯನ್ನು ತಿಳಿಯಲು ಆಯೋಗವನ್ನು ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆಯನ್ನು ನಡೆಸಿ ಅದರ ವರದಿಯನ್ನು ಸಲ್ಲಿಸಲು ASIಗೆ ನಿರ್ದೇಶನ ನೀಡಿತ್ತು. ಆದರೆ ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು  ಅರ್ಜಿಯನ್ನು  ವಿರೋಧಿಸಿತು ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿತ್ತು.  ಪ್ರಕರಣವು ನಂತರ ಅಲಹಾಬಾದ್ ಹೈಕೋರ್ಟ್‌ಗೆ ತಲುಪಿತ್ತು.

ಇದನ್ನು ಓದಿ: ಶಾಹಿ ಈದ್ಗಾ ಮಸೀದಿ ಸರ್ವೆ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...