Homeಕರ್ನಾಟಕಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

ಗುರುತಿನ ಚೀಟಿ ನವೀಕರಣಕ್ಕೆ ಆಗ್ರಹಿಸಿ ಬೀದಿ ವ್ಯಾಪಾರಿಗಳಿಂದ ‘ಬಿಬಿಎಂಪಿ ಚಲೋ’

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣ ಪತ್ರ ನವೀಕರಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ ‘ಬಿಬಿಎಂಪಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಯನಗರ ಬಿಡಿಎ ಕಾಂಪ್ಲೆಕ್ಸ್, ಕೆಆರ್ ಮಾರ್ಕೆಟ್, ಬನಶಂಕರಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವರಿಗೆ ಬಿಬಿಎಂಪಿ ನೀಡಿರುವ ಗುರುತಿನ ಚೀಟಿ ಕಾಲಾವಧಿ (ಐದು ವರ್ಷ) ಮುಗಿದಿದ್ದು, ಇದೀಗ ವ್ಯಾಪಾರ ಮಾಡದಂತೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ವ್ಯಾಪಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಆದ್ದರಿಂದ, ಕೂಡಲೇ ಬೀದಿ ವ್ಯಪಾರಿಗಳ ಸರ್ವೆ ನಡೆಸಿ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲು ಮುಂದಾಗಿದ್ದಾರೆ.

ಈ ಕುರಿತು ‘ನಾನು ಗೌರಿ’ ಪ್ರತಿನಿಧಿ ಜತೆಗೆ ಮಾತನಾಡಿದ ‘ಜಿಲ್ಲಾ ಬೀದಿ ವ್ಯಾಪಾರಿಗಳ ಸಂಘ’ದ ಅಧ್ಯಕ್ಷ ಬಾಬು. ‘ಜಯನಗರ ಬಿಬಿಎಂಪಿ ಕಾಂಪ್ಲೆಕ್ಸ್ ಸೇರಿದಂತೆ ಕೂಡಲೇ ವಿವಿಧ ಪ್ರದೇಶಗಳಲ್ಲಿ ವ್ಯಾಪಾರಿಗಳ ಎತ್ತಂಗಡಿ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಐದು ವರ್ಷಗಳ ಹಿಂದೆ ನೀಡಿದ್ದ ಗುರುತಿನ ಚೀಟಿ ಅವಧಿ ಕಳೆದ ಫೆಬ್ರವರಿಯಲ್ಲೇ ಮುಗಿದಿದ್ದು, 2022ರ ಡಿಸೆಂಬರ್‌ನಲ್ಲಿ ನವೀಕರಣಕ್ಕೆ ಮನವಿ ಪತ್ರ ಕೊಟ್ಟಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ’ ಎಂದರು.

ಜನಯನಗರ ಕಾಂಪ್ಲೆಕ್ಸ್‌ ಬಳಿಯಲ್ಲಿ ಬಿಬಿಎಂಪಿ ನಿಯೋಜಿಸಿರುವ ಮಾರ್ಷಲ್‌ಗಳು

‘ಜಯನಗರ 4ನೇ ಬ್ಲಾಕ್‌ನಲ್ಲಿರುವ ಕಾಂಪ್ಲೆಕ್ಸ್ ಸುತ್ತಮುತ್ತ ಇದ್ದ ಬೀದಿ ವ್ಯಾಪಾರಿಗಳನ್ನು ಒಂದು ವರ್ಷದ ಮುಂಚೆಯೇ ಅಲ್ಲಿಂದ ಎತ್ತಂಗಡಿ ಮಾಡಿಸಿದ್ದಾರೆ. ಅಂಗಡಿ ತೆರವುಗೊಳಿಸಿದ ನಂತರ ಕೈನಲ್ಲಿ ವಸ್ತುಗಳನ್ನು ಹಿಡಿದು ಮಾರಾಟ ಮಾಡಲು ಸಹ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳು ಅಡ್ಡಿಪಡಿಸುತ್ತಿದ್ದಾರೆ. ಅವರನ್ನು ಮುಂದೆ ಬಿಟ್ಟು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ಕೈನಲ್ಲಿ ವಸ್ತು ಹಿಡಿದು ವ್ಯಾಪಾರ ಮಾಡುವವರನ್ನು ಓಡಿಸುತ್ತಾರೆ. ಪ್ರತಿದಿನ ಮಾರ್ಷಲ್‌ಗಳ ಜತೆಗೆ ಘರ್ಷಣೆ ನಡೆಯುತ್ತಲೇ ಇರುತ್ತದೆ’ ಎಂದರು.

‘ಬಿಬಿಎಂಪಿ ಕೂಡಲೇ ಹೊಸದಾಗಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಮಾಡಬೇಕು; ಅದನ್ನು ಯಾವುದೇ ಮೂರನೇ ವ್ಯಕ್ತಿ ಸಂಸ್ಥೆಗಳಿಗೆ ವಹಿಸಬಾರದು. ಐದು ವರ್ಷಗಳ ಹಿಂದೆ ಸಮೀಕ್ಷೆ ಮಾಡಿ ಗುರುತಿನ ಚೀಟಿ ನೀಡಲಾಗಿದ್ದು, ಫೆಬ್ರವರಿಯಲ್ಲೇ ಅದರ ಅವಧಿ ಮುಗಿದಿದೆ. ಸರ್ಕಾರದ ಸೌಲಭ್ಯಗಳಿಗಿಂತ ನಮಗೆ ಭದ್ರತೆ ಮುಖ್ಯವಾಗಿದ್ದು, ನಮಗೆ ಆದಷ್ಟು ಬೇಗ ಗುರುತಿನ ಚೀಟಿ ಕೊಡಬೇಕು. ಅದಕ್ಕಾಗಿ ಬಿಬಿಎಂಪಿ ಚಲೋ ಹಮ್ಮಿಕೊಂಡಿದ್ದೇವೆ. ಬೀದಿ ವ್ಯಾಪಾರಿಗಳನ್ನು ಸಂಘಟಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಬೀದಿ ವ್ಯಾಪಾರಿಗಳ ಸಂಘ ಕೊಟ್ಟಿರುವ ಮನವಿ ಪತ್ರ

ಬೀದಿ ವ್ಯಾಪಾರ ಸಂವಿಧಾನ ಕೊಟ್ಟಿರುವ ಹಕ್ಕು:

‘ಬೆಂಗಳೂರಿನಲ್ಲಿ ಎಲ್ಲರಿಗೂ ಬದುಕುವ ಹಕ್ಕಿದ್ದು, ನಗರವನ್ನು ನಿರ್ಮಾಣ ಮಾಡಿರುವುದೆ ಶ್ರಮಿಕ ವರ್ಗ. ಬೀದಿಗಳಲ್ಲಿ ವ್ಯಾಪಾರ ಮಾಡುತ್ತಾ ನಮ್ಮ ಕುಟುಂಬಗಳನ್ನು ಸಾಕುವ ನಾವು, ಬೀದಿ-ರಸ್ತೆಗಳಲ್ಲಿ ಮಾರಾಟ ಮಾಡದಿದ್ದರೆ, ನಗರದ ಮಧ್ಯಮ ವರ್ಗದವರು ಮತ್ತು ಬಡವರು ಎಲ್ಲಿ ಹೋಗುತ್ತಾರೆ? ಎಲ್ಲರಿಗೂ ಆನ್‌ಲೈನ್, ಮಾಲ್‌ಗಳಲ್ಲಿ ಮತ್ತು ಮಾರ್ಟ್‌ಗಳಲ್ಲಿ ಕೊಳ್ಳಲು ಸಾಧ್ಯವೇ? ಇದನ್ನು ಸರ್ಕಾರಗಳು ಹಾಗೂ ಶ್ರೀಮಂತರು ಅರ್ಥ ಮಾಡಿಕೊಳ್ಳಲು ಏಕೆ ಕಷ್ಟ ಪಡುತ್ತಿದ್ದಾರೆ’ ಎಂದು ಬೀದಿ ವ್ಯಾಪಾರಿಗಳ ಸಂಘಟನೆ ಪ್ರಶ್ನಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಘಟನೆ, ‘ಸಂವಿಧಾನವೆ ನಮಗೆ ಬೀದಿ ವ್ಯಾಪಾರ ಮಾಡುವ ಹಕ್ಕು ಕೊಟ್ಟಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ-2014 ಜಾರಿಗೊಳಿಸಲಾಗಿದೆ. ಬೀದಿಯಲ್ಲಿ ವ್ಯಾಪಾರ ಮಾಡುವುದು ನಮ್ಮ ಹಕ್ಕು, ಬೀದಿಬದಿ ವ್ಯಾಪಾರಸ್ಥರ ಹಕ್ಕುಗಳನ್ನು ರಕ್ಷಿಸಬೇಕೆಂದು ಹಲವಾರು ನ್ಯಾಯಾಲಯದ ತೀರ್ಪುಗಳು ಸಹ ಹೇಳಿರುತ್ತದೆ’ ಎಂದು ಹೇಳಿದೆ.

‘ಆದರೆ, ಬಿಬಿಎಂಪಿ ಕಾನೂನನ್ನು ಬಹಿರಂಗವಾಗಿ ಉಲ್ಲಂಘಿಸಿ ನಮ್ಮನ್ನು ಎತ್ತಂಗಡಿ ಮಾಡುತ್ತಿದೆ. ಸೆಪ್ಟೆಂಬರ್ 2017 ರಲ್ಲಿ ಬಿಬಿಎಂಪಿ ವತಿಯಿಂದ 20 ಸಾವಿರ ಬೀದಿ ವ್ಯಾಪಾರಿಗಳನ್ನು ಗುರುತಿಸಿ, ಅವರಿಗೆ ಗುರುತಿನ ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರು ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಉಳಿದ ವ್ಯಾಪಾರಿಗಳನ್ನು ಬಿಬಿಎಂಪಿ ಸಮೀಕ್ಷೆ ಒಳಗೊಳ್ಳಲಿಲ್ಲ. ಕಾನೂನಿನ ಪ್ರಕಾರ ಪ್ರತಿ 5 ವರ್ಷಕ್ಕೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು. ಈಗ 5 ವರ್ಷಗಳು ಕಳೆದಿದ್ದು, ಬಿಬಿಎಂಪಿಯು ಸಮೀಕ್ಷೆ ಶುರು ಮಾಡಲು ಮುಂದಾಗುತ್ತಿಲ್ಲ. ಮುಂಚೆ ನೀಡಿದ ಗುರುತಿನ ಚೀಟಿ ಹಾಗೂ ವ್ಯಾಪಾರದ ಪ್ರಮಾಣ ಪತ್ರದ ಸಿಂಧುತ್ವ ಮುಗಿದಿರುತ್ತದೆ. ಅದರ ನವೀಕರಣದ ಕುರಿತು ಬಿಬಿಎಂಪಿಯು ಯಾವುದೇ ರೀತಿಯ ಕ್ರಮ ವಹಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದಾರೆ.

‘ಬೆಂಗಳೂರು ನಗರ ಅತಿವೇಗದಲ್ಲಿ ಬೆಳೆಯುತ್ತಿದೆ. ಮೆಟ್ರೋ, ಮಾಲುಗಳು, ಸ್ಮಾರ್ಟ್ ಫುಟ್ಪಾತ್ ಗಳು, ಕ್ಲೀನ್ ಸಿಟಿಯಾಗಿ ಹೆಸರುಗಳಿಸುತ್ತಿದೆ. ಈ ‘ಬ್ರಾಂಡ್ ಬೆಂಗಳೂರು’ನಲ್ಲಿ ಬೀದಿ ವ್ಯಾಪಾರಿಗಳಿಗೆ ಜಾಗವಿಲ್ಲವೇ? ಕಡಲೇಕಾಯಿ ಪರಿಷೆ, ಚಿತ್ರಸಂತೆ ಸೇರಿದಂತೆ ಬೆಂಗಳೂರಿನಲ್ಲಿ ಹೆಸರಾಂತ ಮೇಳಗಳು ನಡೆಯುತ್ತವೆ. ಇಲ್ಲಿ ಮಾಧ್ಯಮ ವರ್ಗದವರು ಮತ್ತು ಶ್ರೀಮಂತರು ಹೋಗುತ್ತಾರೆ. ಆದರೆ, ದಿನನಿತ್ಯ ತಮ್ಮ ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುವವರನ್ನು ಏಕೆ ಭಿನ್ನವಾಗಿ ಪರಿಗಣಿಸಲಾಗುತ್ತದೆ? ಬೀದಿ ವ್ಯಾಪಾರಿಗಳನ್ನು ಒಳಗೊಳ್ಳದಿದ್ದರೆ, ಇದು ಎಂಥಹ ನಗರವಾಗಿ ಬೆಳೆಯಬೇಕು ಎಂದು ನಾವೆಲ್ಲರೂ ಉತ್ತರಿಸಬೇಕಾಗಿದೆ’ ಎಂದು ಹೇಳಿದೆ.

ಜಯನಗರದಲ್ಲಿ ಬೀದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಬಿಬಿಎಂಪಿ ನೌಕರರು.

ಬೀದಿ ವ್ಯಾಪಾರಿಗಳ ಬೇಡಿಕೆಗಳೇನು?

1. ಜಯನಗರ, ಮಹದೇವಪುರ, ಮಲ್ಲೇಶ್ವರ, ಬನಶಂಕರಿ, ಮೂಡಲಪಾಳ್ಯ ಹಾಗು ಇತರೆ ಪ್ರದೇಶಗಳಲ್ಲಿ ಎತ್ತಂಗಡಿ ಮಾಡಿದ ವ್ಯಾಪಾರಿಗಳಿಗೆ ಅದೇ ಸ್ಥಳದಲ್ಲಿ ವ್ಯಾಪಾರ ಮಾಡುವಂತೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಇಷ್ಟು ದಿವಸ ಅವರಿಗೆ ಆದ ನಷ್ಟಕ್ಕೆ ಪಾಲಿಕೆ ಪರಿಹಾರ ಕೊಡಬೇಕು.

2. ಪಟ್ಟಣ ವ್ಯಾಪಾರ ಸಮಿತಿ ಅಡಿಯಲ್ಲಿ ಪ್ರತಿ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಯಬೇಕು.

3. ಸಮೀಕ್ಷೆಯು ಬಿಬಿಎಂಪಿಯ ನೇತೃತ್ವದಲ್ಲಿ ನಡೆಯಬೇಕು; ಯಾವುದೇ ಕಾರಣಕ್ಕೂ ಹೊರಗುತ್ತಿಗೆಗೆ ನೀಡಬಾರದು.

4. ಸಮೀಕ್ಷೆ ನಡೆಯುವ ತನಕ ಯಾವುದೇ ಬೀದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಬಾರದು.

5. ಈಗಾಗಲೇ ನೀಡಿರುವ ಗುರುತಿನ ಚೀಟಿ/ವ್ಯಾಪಾರದ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲೇ ನವೀಕರಿಸಬೇಕು.

6. ಸಮೀಕ್ಷೆ ಕುರಿತು ಬೀದಿ ವ್ಯಾಪಾರಿಗಳ ಸಂಘಟನೆಗಳೊಂದಿಗೆ ಸಭೆ ನಡೆಸಿ, ಸಲಹೆ-ಸೂಚನೆ ಪಡೆಯಬೇಕು.

ಇದನ್ನೂ ಓದಿ; ‘ಕೋವಿಡ್ ರೂಪಾಂತರಿ ಉಲ್ಬಣಕ್ಕೆ ಡಬ್ಲ್ಯೂಎಚ್ಒ ಆತಂಕ; 60 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...