HomeಮುಖಪುಟICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

ICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಅರ್) ನ ಡೇಟಾ ಬ್ಯಾಂಕ್‌ನಿಂದ 81 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ.

ಈ ಪ್ರಕರಣ ನಡೆದು ಎರಡು ತಿಂಗಳ ಬಳಿಕ ಮೂರು ರಾಜ್ಯಗಳಲ್ಲಿ ನಾಲ್ವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಮಾಹಿತಿ ಲಭ್ಯವಾಗಬೇಕಿದೆ.

ಐಸಿಎಂಆರ್ ಮಾತ್ರವಲ್ಲದೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಮತ್ತು ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ (ಸಿಎನ್‌ಐಸಿ) ಡೇಟಾವನ್ನು ಕೂಡ ಕದ್ದಿರುವುದಾಗಿ ಬಂಧಿತರು ವಿಚಾರಣೆ ವೇಳೆ ಹೇಳಿದ್ದಾಗಿ ತಿಳಿದು ಬಂದಿದೆ.

ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಹಿತಿಗಳನ್ನು ಒಳಗೊಂಡ ಮಹತ್ವದ ಡೇಟಾವನ್ನು ಡಾರ್ಕ್ ವೆಬ್ ನಲ್ಲಿ ಮಾರಾಟಕ್ಕಿಟ್ಟಿರುವುದು ಕಳೆದ ಅಕ್ಟೋಬರ್‌ನಲ್ಲಿ ಪೊಲೀಸರ ಗಮನಕ್ಕೆ ಬಂದಿತ್ತು.

ಎಕ್ಸ್ ಹ್ಯಾಂಡಲ್ ಒಂದರಲ್ಲಿ ಡೇಟಾವನ್ನು ಬಹಿರಂಗವಾಗಿ ಮಾರಾಟಕ್ಕೆ ಇಡಲಾಗಿತ್ತು. ಕೋವಿಡ್ ಸಮಯದಲ್ಲಿ ಐಸಿಎಂಆರ್ ಮತ್ತು ಇತರ ಸಂಸ್ಥೆಗಳ ಡೇಟಾ ಬ್ಯಾಂಕ್‌ನಿಂದ ಆರೋಪಿಗಳು ಡೇಟಾ ಕದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಶೀಘ್ರ ತನಿಖೆಗೆ ಆಗ್ರಹಿಸಿದ್ದರು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, “ಐಸಿಎಂಆರ್ ಡೇಟಾ ಲೀಕ್ ಆಗಿರೋದು ನಿಜ. ಆದರೆ, ಮಾರಾಟವಾಗಿಲ್ಲ” ಎಂದಿದ್ದರು.

ದೆಹಲಿ ಪೊಲೀಸರು ಈ ಕುರಿತು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಇದೀಗ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲು ಪ್ರವೇಶಿಸಿದೆ.

ಐಸಿಎಂಆರ್ ಡೇಟಾ ಮಾರಾಟಕ್ಕಿಟ್ಟ ವಿಚಾರ ಬೆಳಕಿಗೆ ಬಂದಾಗ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಈ ಕುರಿತು ಕೇಂದ್ರದಿಂದ ಮಾಹಿತಿ ಕೇಳಿದ್ದರು. ಆಗ ಕೇಂದ್ರ ಸರ್ಕಾರ ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದಿತ್ತು.

ಆದರೆ, ನಿನ್ನೆ ಆರೋಪಿಗಳ ಬಂಧನವಾಗುತ್ತಿದ್ದಂತೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಧಾರ್ ಮಾಹಿತಿಯ ಭದ್ರತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಮೋದಿ ಸರ್ಕಾರವು ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದು, ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ಆದರೆ, ಇದೀಗ ಐಸಿಎಂಆರ್ ಡೇಟಾಬೇಸ್‌ನಿಂದ ಡಾರ್ಕ್ ವೆಬ್‌ನಲ್ಲಿ ಭಾರತೀಯರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಸೋರಿಕೆ ಮಾಡಿದ್ದಕ್ಕಾಗಿ 4 ಜನರನ್ನು ಬಂಧಿಸಲಾಗಿದೆ. ನಿಮ್ಮ ಸಚಿವಾಲಯ ಸಂಸತ್ತಿನಲ್ಲಿ ಏಕೆ ಸುಳ್ಳು ಹೇಳುತ್ತಿದೆ? ರಾಜೀವ್ ಚಂದ್ರಶೇಖರ್ ಅವರೆ ನೀವು ಏನು ಮರೆಮಾಡುತ್ತಿದ್ದೀರಿ” ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಏನೇ ಆದರೂ, ಕೋಟ್ಯಾಂತರ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಖಾಸಗಿ ವ್ಯಕ್ತಿಗಳು ಡಾರ್ಕ್ ವೆಬ್ ನಲ್ಲಿ ಬಹಿರಂಗವಾಗಿ ಮಾರಾಟಕ್ಕಿಟ್ಟಿರುವುದು ಸರ್ಕಾರದ ವೈಫಲ್ಯವಲ್ಲದೆ ಇನ್ನೇನಲ್ಲ.

ಇದು ದೇಶದ ಉನ್ನತ ಸಂಸ್ಥೆಯೊಂದರ ಸೈಬರ್ ಸುರಕ್ಷತೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಲ್ಲದೆ ಖಾಸಗಿ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಸರ್ಕಾರಿ ಸಾರ್ವಜನಿಕ ಸಂಸ್ಥೆಗಳ ನಿರ್ವಹಣೆಯ ಹೊಣೆ ಕೊಟ್ಟರೆ ಆಗುವ ಅನಾಹುತಕ್ಕೆ ಉದಾಹರಣೆಯಾಗಿದೆ.

ಜನರು ಸರ್ಕಾರವನ್ನು ನಂಬಿ ನೀಡುವ ವೈಯಕ್ತಿಕ ಮಾಹಿತಿಯನ್ನು ಸಿಕ್ಕ ಸಿಕ್ಕವರಿಗೆ ಲಭ್ಯವಾಗುವಂತೆ ಮಾಡಿರುವ ಬೇಜವಬ್ದಾರಿಯ ನಡೆಯ ಪರಿಣಾಮವಾಗಿದೆ.

ದೇಶದ ಹೆಚ್ಚಿನ ಮುಗ್ದ ಜನರಿಗೆ ಇಂತಹ ಪ್ರಕರಣಗಳ ಬಗ್ಗೆ ಮಾಹಿತಿಯೇ ಇಲ್ಲ. ಇದ್ದರೂ ಅವರು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲದಲ್ಲ. ಏಕೆಂದರೆ ಈ ಪ್ರಕರಣ ಸಾಮಾನ್ಯ ಜನರಿಗೆ ಅರ್ಥವಾಗುವಂತದ್ದಲ್ಲ.

ಇದನ್ನೂ ಓದಿ: ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...