HomeಮುಖಪುಟICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

ICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಅರ್) ನ ಡೇಟಾ ಬ್ಯಾಂಕ್‌ನಿಂದ 81 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ.

ಈ ಪ್ರಕರಣ ನಡೆದು ಎರಡು ತಿಂಗಳ ಬಳಿಕ ಮೂರು ರಾಜ್ಯಗಳಲ್ಲಿ ನಾಲ್ವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಮಾಹಿತಿ ಲಭ್ಯವಾಗಬೇಕಿದೆ.

ಐಸಿಎಂಆರ್ ಮಾತ್ರವಲ್ಲದೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಮತ್ತು ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ (ಸಿಎನ್‌ಐಸಿ) ಡೇಟಾವನ್ನು ಕೂಡ ಕದ್ದಿರುವುದಾಗಿ ಬಂಧಿತರು ವಿಚಾರಣೆ ವೇಳೆ ಹೇಳಿದ್ದಾಗಿ ತಿಳಿದು ಬಂದಿದೆ.

ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಹಿತಿಗಳನ್ನು ಒಳಗೊಂಡ ಮಹತ್ವದ ಡೇಟಾವನ್ನು ಡಾರ್ಕ್ ವೆಬ್ ನಲ್ಲಿ ಮಾರಾಟಕ್ಕಿಟ್ಟಿರುವುದು ಕಳೆದ ಅಕ್ಟೋಬರ್‌ನಲ್ಲಿ ಪೊಲೀಸರ ಗಮನಕ್ಕೆ ಬಂದಿತ್ತು.

ಎಕ್ಸ್ ಹ್ಯಾಂಡಲ್ ಒಂದರಲ್ಲಿ ಡೇಟಾವನ್ನು ಬಹಿರಂಗವಾಗಿ ಮಾರಾಟಕ್ಕೆ ಇಡಲಾಗಿತ್ತು. ಕೋವಿಡ್ ಸಮಯದಲ್ಲಿ ಐಸಿಎಂಆರ್ ಮತ್ತು ಇತರ ಸಂಸ್ಥೆಗಳ ಡೇಟಾ ಬ್ಯಾಂಕ್‌ನಿಂದ ಆರೋಪಿಗಳು ಡೇಟಾ ಕದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಶೀಘ್ರ ತನಿಖೆಗೆ ಆಗ್ರಹಿಸಿದ್ದರು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, “ಐಸಿಎಂಆರ್ ಡೇಟಾ ಲೀಕ್ ಆಗಿರೋದು ನಿಜ. ಆದರೆ, ಮಾರಾಟವಾಗಿಲ್ಲ” ಎಂದಿದ್ದರು.

ದೆಹಲಿ ಪೊಲೀಸರು ಈ ಕುರಿತು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಇದೀಗ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲು ಪ್ರವೇಶಿಸಿದೆ.

ಐಸಿಎಂಆರ್ ಡೇಟಾ ಮಾರಾಟಕ್ಕಿಟ್ಟ ವಿಚಾರ ಬೆಳಕಿಗೆ ಬಂದಾಗ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಈ ಕುರಿತು ಕೇಂದ್ರದಿಂದ ಮಾಹಿತಿ ಕೇಳಿದ್ದರು. ಆಗ ಕೇಂದ್ರ ಸರ್ಕಾರ ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದಿತ್ತು.

ಆದರೆ, ನಿನ್ನೆ ಆರೋಪಿಗಳ ಬಂಧನವಾಗುತ್ತಿದ್ದಂತೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಧಾರ್ ಮಾಹಿತಿಯ ಭದ್ರತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಮೋದಿ ಸರ್ಕಾರವು ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದು, ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ಆದರೆ, ಇದೀಗ ಐಸಿಎಂಆರ್ ಡೇಟಾಬೇಸ್‌ನಿಂದ ಡಾರ್ಕ್ ವೆಬ್‌ನಲ್ಲಿ ಭಾರತೀಯರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಸೋರಿಕೆ ಮಾಡಿದ್ದಕ್ಕಾಗಿ 4 ಜನರನ್ನು ಬಂಧಿಸಲಾಗಿದೆ. ನಿಮ್ಮ ಸಚಿವಾಲಯ ಸಂಸತ್ತಿನಲ್ಲಿ ಏಕೆ ಸುಳ್ಳು ಹೇಳುತ್ತಿದೆ? ರಾಜೀವ್ ಚಂದ್ರಶೇಖರ್ ಅವರೆ ನೀವು ಏನು ಮರೆಮಾಡುತ್ತಿದ್ದೀರಿ” ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಏನೇ ಆದರೂ, ಕೋಟ್ಯಾಂತರ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಖಾಸಗಿ ವ್ಯಕ್ತಿಗಳು ಡಾರ್ಕ್ ವೆಬ್ ನಲ್ಲಿ ಬಹಿರಂಗವಾಗಿ ಮಾರಾಟಕ್ಕಿಟ್ಟಿರುವುದು ಸರ್ಕಾರದ ವೈಫಲ್ಯವಲ್ಲದೆ ಇನ್ನೇನಲ್ಲ.

ಇದು ದೇಶದ ಉನ್ನತ ಸಂಸ್ಥೆಯೊಂದರ ಸೈಬರ್ ಸುರಕ್ಷತೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಲ್ಲದೆ ಖಾಸಗಿ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಸರ್ಕಾರಿ ಸಾರ್ವಜನಿಕ ಸಂಸ್ಥೆಗಳ ನಿರ್ವಹಣೆಯ ಹೊಣೆ ಕೊಟ್ಟರೆ ಆಗುವ ಅನಾಹುತಕ್ಕೆ ಉದಾಹರಣೆಯಾಗಿದೆ.

ಜನರು ಸರ್ಕಾರವನ್ನು ನಂಬಿ ನೀಡುವ ವೈಯಕ್ತಿಕ ಮಾಹಿತಿಯನ್ನು ಸಿಕ್ಕ ಸಿಕ್ಕವರಿಗೆ ಲಭ್ಯವಾಗುವಂತೆ ಮಾಡಿರುವ ಬೇಜವಬ್ದಾರಿಯ ನಡೆಯ ಪರಿಣಾಮವಾಗಿದೆ.

ದೇಶದ ಹೆಚ್ಚಿನ ಮುಗ್ದ ಜನರಿಗೆ ಇಂತಹ ಪ್ರಕರಣಗಳ ಬಗ್ಗೆ ಮಾಹಿತಿಯೇ ಇಲ್ಲ. ಇದ್ದರೂ ಅವರು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲದಲ್ಲ. ಏಕೆಂದರೆ ಈ ಪ್ರಕರಣ ಸಾಮಾನ್ಯ ಜನರಿಗೆ ಅರ್ಥವಾಗುವಂತದ್ದಲ್ಲ.

ಇದನ್ನೂ ಓದಿ: ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...