Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಮತ್ತು ಎಎಸ್‌ಐ ಸಮೀಕ್ಷೆ ಆದೇಶ ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ಇಂದು(ಡಿ.19) ತಿರಸ್ಕರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು,1991ರ ಹಿಂದೂಗಳ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ವಾರಣಾಸಿ ನ್ಯಾಯಾಲಯಕ್ಕೆ ಸೂಚಿಸಿದೆ.

ತಿರಸ್ಕೃತಗೊಂಡ ಮುಸ್ಲಿಮರ ಐದು ಅರ್ಜಿಗಳಲ್ಲಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿವೆ. ಉಳಿದ ಎರಡು ಅರ್ಜಿಗಳು ಎಎಸ್ಐನ ಸರ್ವೆ ಆದೇಶದ ವಿರುದ್ಧವಾಗಿವೆ.

ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಮಸೀದಿಯ ಆವರಣವು ಮುಸ್ಲಿಂ ಅಥವಾ ಹಿಂದೂ ಕುರುಗಳನ್ನು ಹೊಂದಿರಬಹುದು. ಆದರೆ, ಸಮಸ್ಯೆಯ ಆರಂಭ ಹಂತದಲ್ಲೇ ಅದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅದರ ಅವಶೇಗಳ ಮೇಲೆ ಕಟ್ಟಲಾಗಿದೆ. ಅದನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಆದರೆ, ಇದಕ್ಕೆ ಉತ್ತರ ಪ್ರದೇಶ ಸುನ್ನೀ ವಕ್ಪ್‌ ಮಂಡಳಿ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಿಸಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ವಿರೋಧ ವ್ಯಕ್ತಪಡಿಸಿದ್ದು, ಇದು 1991ರ ಆರಾಧನಾ ಸ್ಥಳಗಳ ಕಾಯಿದೆ (ವಿಶೇಷ ನಿಬಂಧನೆಗಳು) ವಿರುದ್ದವಾಗಿದೆ ಎಂದು ವಾದಿಸಿದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ ಸ್ವಾತಂತ್ರ್ಯ ನಂತರ ಯಾವುದೇ ಧಾರ್ಮಿಕ ಸ್ಥಳಗಳ ರಚನೆಯನ್ನು ಅದರ ಸ್ವರೂಪದಿಂದ ಪರಿವರ್ತಿಸುವುದನ್ನು ನಿಷೇಧಿಸುತ್ತದೆ.

ಕಳೆದ ತಿಂಗಳು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠದಿಂದ ತನ್ನ ಪೀಠಕ್ಕೆ ವರ್ಗಾಯಿಸಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ( ನಿವೃತ್ತ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸಿಜೆಐ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹಿಂದಿನ ನ್ಯಾಯಾಧೀಶರು (ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ) 2021 ರಲ್ಲಿ ತೀರ್ಪನ್ನು ಕಾಯ್ದಿರಿಸಿದರೂ ಮತ್ತು ಎಪ್ಪತ್ತೈದು ವಿಚಾರಣೆಗಳನ್ನು ನಡೆಸಿದರೂ ತೀರ್ಪು ನೀಡಲಿಲ್ಲ. ಆದ್ದರಿಂದ, ಪ್ರಕರಣಗಳನ್ನು ವರ್ಗಾಯಿಸಲು ಸಿಜೆ ಅವರ ಆದೇಶವು ಸಮರ್ಥನೀಯವಾಗಿದೆ ಎಂದು ಹೇಳಿತ್ತು.

ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಭಾರತೀಯ ಪುರಾತತ್ವ ಇಲಾಖೆಯು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸೋಮವಾರ(ಡಿ.18) ಸಲ್ಲಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುವುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲೆ ವಸ್ತು ಸ್ಥಿತಿ ತಿಳಿಯಲು ಆಯೋಗ ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆ ನಡೆಸಿ ಅದರ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ನಿರ್ದೇಶನ ನೀಡಿತ್ತು. ಆದರೆ, ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಪರರ ಅರ್ಜಿ ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...