Homeಮುಖಪುಟಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

- Advertisement -
- Advertisement -

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪ್ರಾರ್ಥನೆಗೆ ಅವಕಾಶ ಕೋರಿದ್ದ ಹಿಂದೂಗಳ ಅರ್ಜಿ ಮತ್ತು ಎಎಸ್‌ಐ ಸಮೀಕ್ಷೆ ಆದೇಶ ಪ್ರಶ್ನಿಸಿ ಮುಸ್ಲಿಮರು ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ಇಂದು(ಡಿ.19) ತಿರಸ್ಕರಿಸಿದೆ.

ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು,1991ರ ಹಿಂದೂಗಳ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ. 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ವಾರಣಾಸಿ ನ್ಯಾಯಾಲಯಕ್ಕೆ ಸೂಚಿಸಿದೆ.

ತಿರಸ್ಕೃತಗೊಂಡ ಮುಸ್ಲಿಮರ ಐದು ಅರ್ಜಿಗಳಲ್ಲಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿವೆ. ಉಳಿದ ಎರಡು ಅರ್ಜಿಗಳು ಎಎಸ್ಐನ ಸರ್ವೆ ಆದೇಶದ ವಿರುದ್ಧವಾಗಿವೆ.

ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿದ ನ್ಯಾಯಾಲಯ, ಮಸೀದಿಯ ಆವರಣವು ಮುಸ್ಲಿಂ ಅಥವಾ ಹಿಂದೂ ಕುರುಗಳನ್ನು ಹೊಂದಿರಬಹುದು. ಆದರೆ, ಸಮಸ್ಯೆಯ ಆರಂಭ ಹಂತದಲ್ಲೇ ಅದನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿ ಅದರ ಅವಶೇಗಳ ಮೇಲೆ ಕಟ್ಟಲಾಗಿದೆ. ಅದನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.

ಆದರೆ, ಇದಕ್ಕೆ ಉತ್ತರ ಪ್ರದೇಶ ಸುನ್ನೀ ವಕ್ಪ್‌ ಮಂಡಳಿ ಮತ್ತು ಜ್ಞಾನವಾಪಿ ಮಸೀದಿ ನಿರ್ವಹಿಸಿರುವ ಅಂಜುಮನ್ ಇಂತೇಜಾಮಿಯಾ ಮಸಾಜಿದ್ ವಿರೋಧ ವ್ಯಕ್ತಪಡಿಸಿದ್ದು, ಇದು 1991ರ ಆರಾಧನಾ ಸ್ಥಳಗಳ ಕಾಯಿದೆ (ವಿಶೇಷ ನಿಬಂಧನೆಗಳು) ವಿರುದ್ದವಾಗಿದೆ ಎಂದು ವಾದಿಸಿದೆ.

1991ರ ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ ಸ್ವಾತಂತ್ರ್ಯ ನಂತರ ಯಾವುದೇ ಧಾರ್ಮಿಕ ಸ್ಥಳಗಳ ರಚನೆಯನ್ನು ಅದರ ಸ್ವರೂಪದಿಂದ ಪರಿವರ್ತಿಸುವುದನ್ನು ನಿಷೇಧಿಸುತ್ತದೆ.

ಕಳೆದ ತಿಂಗಳು, ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠದಿಂದ ತನ್ನ ಪೀಠಕ್ಕೆ ವರ್ಗಾಯಿಸಿದ್ದ ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ( ನಿವೃತ್ತ) ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

ಸಿಜೆಐ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಹಿಂದಿನ ನ್ಯಾಯಾಧೀಶರು (ನ್ಯಾಯಮೂರ್ತಿ ಪ್ರಕಾಶ್ ಪಾಡಿಯಾ) 2021 ರಲ್ಲಿ ತೀರ್ಪನ್ನು ಕಾಯ್ದಿರಿಸಿದರೂ ಮತ್ತು ಎಪ್ಪತ್ತೈದು ವಿಚಾರಣೆಗಳನ್ನು ನಡೆಸಿದರೂ ತೀರ್ಪು ನೀಡಲಿಲ್ಲ. ಆದ್ದರಿಂದ, ಪ್ರಕರಣಗಳನ್ನು ವರ್ಗಾಯಿಸಲು ಸಿಜೆ ಅವರ ಆದೇಶವು ಸಮರ್ಥನೀಯವಾಗಿದೆ ಎಂದು ಹೇಳಿತ್ತು.

ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ಭಾರತೀಯ ಪುರಾತತ್ವ ಇಲಾಖೆಯು ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸೋಮವಾರ(ಡಿ.18) ಸಲ್ಲಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ. ವರದಿಯನ್ನು ಬಹಿರಂಗಗೊಳಿಸಲಾಗುತ್ತದೆಯೇ? ಸರ್ವೆ ಮಾಹಿತಿಯನ್ನು ಹಿಂದೂ ಪರ ಮತ್ತು ಮುಸ್ಲಿಂ ಪರ ಅರ್ಜಿದಾರರ ಜೊತೆ ಹಂಚಿಕೊಳ್ಳಲಾಗುತ್ತದೆಯೇ ಎಂಬುವುದು ಸ್ಪಷ್ಟವಾಗಿಲ್ಲ. ಮುಂದಿನ ವಿಚಾರಣೆ ಡಿ. 21ರಂದು ನಡೆಯಲಿದೆ.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲೆ ವಸ್ತು ಸ್ಥಿತಿ ತಿಳಿಯಲು ಆಯೋಗ ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆ ನಡೆಸಿ ಅದರ ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆ(ಎಎಸ್‌ಐ)ಗೆ ನಿರ್ದೇಶನ ನೀಡಿತ್ತು. ಆದರೆ, ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಪರರ ಅರ್ಜಿ ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಇದನ್ನೂ ಓದಿ : ಜ್ಞಾನವಾಪಿ ಮಸೀದಿ ವಿವಾದ: ವೈಜ್ಞಾನಿಕ ಸಮೀಕ್ಷೆ ವರದಿ ಕೋರ್ಟ್‌ಗೆ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...