Homeಕರ್ನಾಟಕಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ದೆಹಲಿ ಪೊಲೀಸರಿಂದ ಮೈಸೂರಿನಲ್ಲಿ ತನಿಖೆ

- Advertisement -
- Advertisement -

ಸಂಸತ್ತಿನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಮೈಸೂರಿಗೆ ಆಗಮಿಸಿದ್ದು, ಪ್ರಕರಣದ ಆರೋಪಿ ಮೈಸೂರು ನಿವಾಸಿ ಮನೋರಂಜನ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೋರಂಜನ್ ತಂದೆ ಮತ್ತು ತಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮೈಸೂರಿನ ವಿಜಯನಗರದ 2ನೇ ಹಂತದಲ್ಲಿರುವ ಮನೋರಂಜನ್ ಮನೆಗೆ ದೆಹಲಿ ಪೊಲೀಸರ ತಂಡ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಪೊಲೀಸರ ತಂಡದಲ್ಲಿ ಮಹಿಳಾ ಪೊಲೀಸರು ಕೂಡ ಇದ್ದರು. ಮನೋರಂಜನ್ ಕೊಠಡಿಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು, ಪುಸ್ತಕ ಸೇರಿದಂತೆ ಮನೋರಂಜನ್ ಬಳಸುತ್ತಿದ್ದ ವಸ್ತುಗಳನ್ನು ಪರಿಶೀಲಿಸಿದ್ದಾರೆ.

ಮನೋರಂಜನ್ ತಾಯಿ ಶೈಲಜಾ ಮತ್ತು ತಂದೆ ದೇವರಾಜೇಗೌಡ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದಲ್ಲದೆ ಗುಪ್ತಚರ ಇಲಾಖೆಯ ಅಧಿಕಾರಿಗಳು, ಮನೋರಂಜನ್ ಬ್ಯಾಂಕ್ ಖಾತೆ, ಆತನ ಫೋನ್‍ ಕರೆ ಡಿಟೇಲ್ಸ್ ಮತ್ತು ಆತನ ಕುಟುಂಬದ ಹಿನ್ನೆಲೆ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇದಲ್ಲದೆ ಮನೋರಂಜನ್ ಹಾಗೂ ಸಾಗರ್ ಶರ್ಮಾರ ಚಲನವಲನಗಳ ಬಗ್ಗೆ ತನಿಖೆ ನಡೆಯುತ್ತಿದೆ. ಲಕ್ನೋ ಮೂಲದ  ಸಾಗರ್ ಶರ್ಮಾ ಮೈಸೂರಿನಲ್ಲಿ ಎಲ್ಲಿ ವಾಸವಾಗಿದ್ದ? ಯಾಕೆ ಆತ ಮೈಸೂರಿಗೆ ಬಂದಿದ್ದ ಎಂಬ ಕುರಿತು ತನಿಖೆ ನಡೆಯುತ್ತಿದೆ.

 

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಹರಡಿದ್ದರು. 2001ರ ಸಂಸತ್ ದಾಳಿಯ 22ನೇ ವಾರ್ಷಿಕದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿದೆ.

ಹೊಗೆ ಡಬ್ಬಿಗಳನ್ನು ಹಿಡಿದುಕೊಂಡು ಸಂಸತ್ತಿನ ಕಟ್ಟಡದ ಹೊರಗೆ ಸರ್ವಾಧಿಕಾರ ಧೋರಣೆಯ ವಿರುದ್ಧ ಘೋಷಣೆಗಳನ್ನು ಕೂಗಿದ ನೀಲಂ ಆಜಾದ್, ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡಲು ಪ್ರಯತ್ನಿಸಿದಾಗಲೆಲ್ಲಾ ಲಾಠಿ ಚಾರ್ಜ್ ಮಾಡಿ ಬಂಧಿಸಲಾಗುತ್ತದೆ. ನಮಗೆ ಬೇರೆ ದಾರಿ ಇರಲಿಲ್ಲ. ನಾವು ಯಾವುದೇ ಸಂಘಟನೆಯಿಂದ ಬಂದವರಲ್ಲ, ನಾವು ಸಾಮಾನ್ಯ ಜನರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕರು. ನಮ್ಮ ಪೋಷಕರು ಕಷ್ಟಪಟ್ಟು ದುಡಿಯುವ ಕಾರ್ಮಿಕರು, ರೈತರು.  ನಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಹೇಳಿದ್ದರು.

ಘಟನೆಗೆ ಸಂಬಂಧಿಸಿ ಲೋಕಸಭೆಯೊಳಗೆ ಸಾಗರ್ ಶರ್ಮಾ ಮತ್ತು ಡಿ ಮನೋರಂಜನ್, ಸಂಸತ್ತಿನ ಹೊರಗೆ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಬಂಧಿಸಲಾಗಿತ್ತು. ಆ ಬಳಿಕ ಸಂಸತ್ತಿನ ಭದ್ರತಾ ವ್ಯವಸ್ಥೆಯನ್ನು ಭೇದಿಸುವ ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಲಲಿತ್ ಝಾನನ್ನು ಬಂಧಿಸಲಾಗಿತ್ತು. ಇದಲ್ಲದೆ ಲಲಿತ್‌ ಝಾಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಮಹೇಶ್ ಕುಮ್ವತ್ ಮತ್ತು ಕೈಲಾಶ್ ಅವರ ವಿಚಾರಣೆ ಕೂಡ ನಡೆಯುತ್ತಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ವೇಳೆ ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಗಳಿಗೆ ಸದನದೊಳಗೆ ಪ್ರವೇಶಿಸಲು ಸಂದರ್ಶಕರ ಪಾಸ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದರು ಎನ್ನುವುದು  ಬಯಲಾಗಿದೆ. ಈ ಕುರಿತು ಸಂಸದ ಪ್ರತಾಪ್‌ ಸಿಂಹ ಹೇಳಿಕೆಯನ್ನು ಕೂಡ ತನಿಖಾಧಿಕಾರಿಗಳು ದಾಖಲಿಸಿಕೊಳ್ಳಲಿದ್ದಾರೆ.

ಸಂಸತ್ತಿನಲ್ಲಿ ಭದ್ರತಾಲೋಪ ಪ್ರಕರಣದ ಕುರಿತು ಗೃಹ ಸಚಿವರಾದ ಅಮಿತ್‌ ಶಾ ಅವರು ಹೇಳಿಕೆಯನ್ನು ನೀಡಬೇಕೆಂದು ಒತ್ತಾಯಿಸಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಿನ್ನೆ ಸಂಸದರು ಪಟ್ಟು ಹಿಡಿದಿದ್ದರು. ಈ ವೇಳೆ ಉಭಯ ಸದನಗಳ 92ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಲಾಗಿದೆ.

ಇದನ್ನು ಓದಿ; ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...