Homeಮುಖಪುಟ'ನಾಚಿಕೆಗೇಡು': ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

‘ನಾಚಿಕೆಗೇಡು’: ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

- Advertisement -
- Advertisement -

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.

ಇಂದು (ಡಿ.19) ಸಂಸತ್‌ನಿಂದ ಅಮಾನತುಗೊಂಡಿರುವ 49 ಸಂಸದರು ಹೊಸ ಸಂಸತ್‌ ಕಟ್ಟಡದ ‘ಮಕರ ದ್ವಾರ’ದ ಬಳಿ ಕುಳಿತು ಪ್ರತಿಭಟಿಸುತ್ತಿದ್ದರು. ಈ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ್ದಾರೆ ಎನ್ನಲಾಗಿದೆ.

ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಕಲ್ಯಾಣ್ ಬ್ಯಾನರ್ಜಿ ಜಗದೀಪ್ ಧನ್ಕರ್‌ ಅವರನ್ನುಅಣುಕರಣೆ ಮಾಡಿರುವುದು ಮತ್ತು ಇತರ ಸಂಸದರು ನಕ್ಕಿರುವುದನ್ನು ನೋಡಬಹುದು. ಗಮನಾರ್ಹ ಸಂಗತಿಯೆಂದರೆ, ಕಲ್ಯಾಣ್ ಬ್ಯಾನರ್ಜಿ ಅಣುಕರಣೆ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ್ದಾರೆ. “ನನ್ನ ಬೆನ್ನುಮೂಳೆ ನೇರವಾಗಿದೆ. ನಾನು ತುಂಬಾ ಉದ್ದ ಇದ್ದೀನಿ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

ಅಪರಾಹ್ನ ರಾಜ್ಯಸಭೆ ಕಲಾಪ ಮತ್ತೆ ಆರಂಭವಾದಾಗ ಈ ಸಂಬಂಧ ರಾಹುಲ್‌ ಗಾಂಧಿಯವರನ್ನು ಗುರಿಯಾಗಿಸಿ ಮಾತನಾಡಿದ ಜಗದೀಪ್ ಧನ್ಕರ್, ” ಒಬ್ಬರು ಸಂಸದರು ಸಭಾಧ್ಯಕ್ಷರನ್ನು ಅಣಕಿಸಿರುವುದು ಮತ್ತು ಪಕ್ಷದ ನಾಯಕರೊಬ್ಬರು ಅದನ್ನು ಚಿತ್ರೀಕರಿಸಿರುವುದು ಹಾಸ್ಯಾಸ್ಪದ, ನಾಚಿಕೆಗೇಡಿನ ಸಂಗತಿ. ದೇವರು ಅವರಿಗೆ ಸದ್ಬುದ್ದಿ ಕೊಡಲಿ” ಎಂದಿದ್ದಾರೆ.

ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, “ವಿರೋಧ ಪಕ್ಷದ ಸಂಸದರನ್ನು ಯಾಕೆ ಅಮಾನತು ಮಾಡಲಾಗ್ತಿದೆ? ಎಂದು ದೇಶ ಆಶ್ಚರ್ಯ ಪಡುತ್ತಿದೆ. ಅದಕ್ಕೆ ಕಾರಣ ಇಲ್ಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ಅಪಹಾಸ್ಯ ಮಾಡಿದರೆ, ರಾಹುಲ್ ಗಾಂಧಿ ಅವರನ್ನು ಹುರಿದುಂಬಿಸಿದ್ದಾರೆ. ಹಾಗಾದರೆ, ಅವರು ಸದನದಲ್ಲಿ ಎಷ್ಟು ಅಜಾಗರೂಕರಾಗಿರಬಹುದು ಮತ್ತು ನಿಯಮ ಉಲ್ಲಂಘಿಸಿರಬಹುದು ಎಂದು ಯಾರು ಬೇಕಾದರು ಊಹಿಸಬಹುದು ಎಂದು ಬಿಜೆಪಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.

ಇದನ್ನೂ ಓದಿ: ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...