Homeಮುಖಪುಟಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

- Advertisement -
- Advertisement -

‘ಸಂತ್ರಸ್ತೆಯ ಪತಿಯಿಂದ ಅತ್ಯಾಚಾರ ನಡೆದರೂ, ಅದು ಅತ್ಯಾಚಾರವೇ’ ಎಂದು ಗುಜರಾತ್ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಭಾರತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಮೌನ ಮುರಿಯಬೇಕಾಗಿದೆ ಎಂದು ಒತ್ತಿ ಹೇಳಿದೆ.

ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ನೈಜ ಘಟನೆಗಳು ಬಹುಶಃ ಡೇಟಾ ಸೂಚಿಸುವುದಕ್ಕಿಂತ ಹೆಚ್ಚಾಗಿವೆ. ಮಹಿಳೆಯರು ಪ್ರತಿ ದಿನ ಕಿರುಕುಳ ಎದುರಿಸುತ್ತಲೇ ಇರುತ್ತಾರೆ. ಕೆಲವೊಬ್ಬರು ತಮ್ಮ ಗಂಡದಿರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾರೆ ಎಂದು ಪ್ರಕರಣವೊಂದರ ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಒಬ್ಬ ಮನುಷ್ಯ ಮನುಷ್ಯನೇ, ಕೃತ್ಯ ಕೃತ್ಯವೇ, ಅದೇ ರೀತಿ ಅತ್ಯಾಚಾರ ಅತ್ಯಾಚಾರವೇ. ಅದು ಗಂಡ ಹೆಂಡಿತಿಯ ಮೇಲೆ ಮಾಡಿದರೂ ಸರಿ ಎಂದು ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.

ಸಮಾಜದಲ್ಲಿ ಮಹಿಳೆಯನ್ನು ಹಿಂಬಾಲಿಸುವುದು, ಮೌಖಿಕ, ದೈಹಿಕ ದಬ್ಬಾಳಿಕೆ ಮಾಡುವುದು ಮತ್ತು ಕಿರುಕುಳದಂತಹ ಕೆಲವು ವಿಚಾರಗಳು ಸಣ್ಣ ಮಟ್ಟದ ಅಪರಾಧಗಳೆಂದು ಗುರುತಿಸಲ್ಪಟ್ಟಿದೆ. ಇದು ಸಾಮಾನ್ಯ ಘಟನೆಯೆಂಬಂತೆ ಪರಿಗಣಿಸಲ್ಪಟ್ಟಿದೆ. ಆದರೆ, ವಾಸ್ತವದಲ್ಲಿ ಹೀಗಾಗಬಾರದು. ಇಂಥ ಘಟನೆಗಳು ಕೂಡ ಹಿಂಸೆಗೆ ಸಮವಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಲೈಂಗಿಕ ಅಪರಾಧವನ್ನು ಕ್ಷಮಿಸುವ ವರ್ತನೆಗಳು ನೊಂದವರ ಮೇಲೆ ಶಾಶ್ವತ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ಸೊಸೆಗೆ ಕಿರಕುಳ, ಅತ್ತೆಯ ಜಾಮೀನು ಅರ್ಜಿ ತಿರಸ್ಕೃತ

ತನ್ನ ಸೊಸೆಯನ್ನು ಕ್ರೌರ್ಯ ಮತ್ತು ಕ್ರಿಮಿನಲ್ ಬೆದರಿಕೆಗೆ ಒಳಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಮಹಿಳೆಯೊಬ್ಬರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಮೇಲಿನಂತೆ ಹೇಳಿದೆ. ಆರೋಪಿತ ಮಹಿಳೆ, ತನ್ನ ಪತಿ ಮತ್ತು ಮಗನಿಂದ ಸೊಸೆಯ ಮೇಲೆ ಅತ್ಯಾಚಾರ ಮಾಡಿಸಿ, ಅದರ ವಿಡಿಯೋವನ್ನು ಅಶ್ಲೀಲ ಸೈಟ್‌ಗಳಲ್ಲಿ ಪೋಸ್ಟ್ ಮಾಡಿ ಹಣ ಸಂಪಾದಿಸಲು ಮುಂದಾಗಿದ್ದಳು ಎಂದು ತಿಳಿದು ಬಂದಿದೆ.

ಕೋರ್ಟ್‌ ಆದೇಶದ ಪ್ರಕಾರ, ಈ ವರ್ಷದ ಆಗಸ್ಟ್ 13 ರಂದು ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು. ಅಂದೇ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಭಾರತೀಯ ದಂಡ ಸಂಹಿತೆ (ಐಪಿಸಿ)ಯನ್ನು ಹೆಚ್ಚಾಗಿ ಯುಕೆಯಿಂದ ಅಳವಡಿಸಿಕೊಳ್ಳಲಾಗಿದೆ. ಆ ದೇಶದಲ್ಲೇ ಅತ್ಯಾಚಾರ ಪ್ರಕರಣಗಳಲ್ಲಿ ಗಂಡಂದಿರಿಗೆ ನೀಡಿದ್ದ ವಿನಾಯಿತಿಯನ್ನು ತೆಗೆದು ಹಾಕಲಾಗಿದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸುವ ವೇಳೆ ತಿಳಿಸಿದೆ.

ಭಾರತದ ಕಾನೂನು ಏನು ಹೇಳುತ್ತದೆ?

ಭಾರತೀಯ ದಂಡ ಸಂಹಿತೆ ಸೆಕ್ಷನ್ 375 ಅತ್ಯಾಚಾರದ ವ್ಯಾಖ್ಯಾನದಿಂದ ಪತಿಗೆ ವಿನಾಯಿತಿ ನೀಡುತ್ತದೆ. ಪುರುಷ 15 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ತನ್ನ ಹೆಂಡತಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ ಎಂದು ಹೇಳುತ್ತದೆ. ಸೆಕ್ಷನ್ 376 ಅತ್ಯಾಚಾರಕ್ಕೆ ಶಿಕ್ಷೆಯನ್ನು ವಿವರಿಸುತ್ತದೆ.

50 ಅಮೆರಿಕನ್ ರಾಜ್ಯಗಳಲ್ಲಿ ವೈವಾಹಿಕ ಅತ್ಯಾಚಾರ ಅಪರಾಧ:

50 ಅಮೆರಿಕನ್ ರಾಜ್ಯಗಳು, ಮೂರು ಆಸ್ಟ್ರೇಲಿಯಾದ ರಾಜ್ಯಗಳು, ನ್ಯೂಜಿಲೆಂಡ್, ಕೆನಡಾ, ಇಸ್ರೇಲ್, ಫ್ರಾನ್ಸ್, ಸ್ವೀಡನ್, ಡೆನ್ಮಾರ್ಕ್, ನಾರ್ವೆ, ಸೋವಿಯತ್ ಯೂನಿಯನ್, ಪೋಲೆಂಡ್ ಜೆಕೊಸ್ಲೊವಾಕಿಯಾ ಸೇರಿದಂತೆ ಹಲವಾರು ಇತರ ದೇಶಗಳಲ್ಲಿ ವೈವಾಹಿಕ ಅತ್ಯಾಚಾರ ಕಾನೂನುಬಾಹಿರವಾಗಿದೆ ಎಂದು ಕೋರ್ಟ್ ತಿಳಿಸಿದೆ.

ವೈವಾಹಿಕ ಅತ್ಯಾಚಾರದ ವಿನಾಯಿತಿ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ವೈವಾಹಿಕ ಅತ್ಯಾಚಾರದ ವಿನಾಯಿತಿಯನ್ನು ಪ್ರಶ್ನಿಸಿ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮುನ್ನ ಸುಪ್ರೀಂ ಕೋರ್ಟ್‌ ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಅಂತಿಮ ನಿಲುವು ಕೇಳಿದೆ. ಸರ್ಕಾರ ಇನ್ನೂ ಕೋರ್ಟ್‌ಗೆ ಅಂತಿಮ ಅಫಿಡವಿಟ್ ಸಲ್ಲಿಸಿಲ್ಲ. ಆದರೆ, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ವಿಷಯವು “ಸಾಮಾಜಿಕ ಪರಿಣಾಮಗಳನ್ನು” ಹೊಂದಿರುತ್ತದೆ ಎಂದು ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಮರ ಐದು ಅರ್ಜಿಗಳು ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...