Homeಮುಖಪುಟಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

ಅಡ್ವಾಣಿ-ಜೋಶಿ ಇಬ್ಬರನ್ನೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ: ವಿಎಚ್‌ಪಿ ಸ್ಪಷ್ಟನೆ

- Advertisement -
- Advertisement -

2024ರ ಜನವರಿಯಲ್ಲಿ ನಡೆಯುವ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ರಾಮಮಂದಿರ ಟ್ರಸ್ಟ್ ಸಿದ್ಧತೆ ಮಾಡಿಕೊಂಡಿದ್ದು, ದೇಶದ ಹಲವು ಗಣ್ಯರಿಗೆ ಆಹ್ವಾನ ನೀಡುತ್ತಿದೆ. ಆದರೆ, ವಿವಾದಿತ ರಾಮಜನ್ಮ ಭೂಮಿ ಸಲುವಾಗಿ ದೇಶದಾದ್ಯಂತ ರಥಯಾತ್ರೆ ನಡೆಸಿದ ಬಿಜೆಪಿ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರನ್ನು ಉದ್ಘಾಟನೆಗೆ ಬರದಂತೆ ಸೂಚನೆ ನೀಡಲಾಗಿದ ಎಂಬ ಸುದ್ದಿ ಇಂದು ಭಾರಿ ಸದ್ದು ಮಾಡಿತ್ತು.

‘ಇಬ್ಬರೂ ನಾಯಕರಿಗೆ ವಯಸ್ಸಾಗಿರುವ ಕಾರಣಕ್ಕೆ ಹಾಗೂ ಜನವರಿಯಲ್ಲಿ ಇಲ್ಲಿ ಕೊರೆಯುವ ಚಳಿಯಿರುವ ಕಾರಣಕ್ಕೆ ಬರದಂತೆ ವಿನಂತಿಸಲಾಗಿದೆ’ ಎಂದು ರಾಮ ಮಂದಿರ ಟ್ರಸ್ಟ್ ಮಾಧ್ಯಮಗಳಿಗೆ ತಿಳಿಸಿದ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.

ಅಡ್ವಾಣಿಯವರಿಗೆ ಈಗ 96 ವರ್ಷವಾಗಿದ್ದು, ಜೋಶಿ ಅವರಿಗೆ 89 ವರ್ಷಗಳನ್ನು ಪೂರೈಸಿದ್ದಾರೆ. ಇವರಿಬ್ಬರೂ 80ರ ದಶಕದಲ್ಲಿ ದೇಶದಾದ್ಯಂತ ರಾಮ ಜನ್ಮಭೂಮಿ ಚಳವಳಿಯನ್ನು ಮುಂದೆ ನಿಂತು ಮುನ್ನಡೆಸಿದವರು. 1990ರಲ್ಲಿ ಅಡ್ವಾಣಿಯವರು ರಾಮಜನ್ಮ ಭೂಮಿ ಚಳವಳಿಗೆ ಬೆಂಬಲ ಪಡೆಯಲು ಗುಜರಾತ್‌ನ ಸೋಮನಾಥದಿಂದ ಉತ್ತರ ಪ್ರದೇಶದ ಅಯೋಧ್ಯೆ ವರೆಗೆ ವಿವಾದಾತ್ಮಕ ‘ರಥಯಾತ್ರೆ’ ನಡೆಸಿದರು. ಈ ಯಾತ್ರೆಯು ಉತ್ತರ ಭಾರತದ ಹಲವಾರು ನಗರಗಳಲ್ಲಿ ಕೋಮುಗಲಭೆಗೆ ಕಾರಣವಾಯಿತು. ಎರಡು ವರ್ಷಗಳ ನಂತರ, ಡಿಸೆಂಬರ್ 6, 1992 ರಂದು ಅಯೋಧ್ಯೆಯ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದಾಗ, ಈ ಇಬ್ಬರೂ ಜನ ಸಂಘದ ನಾಯಕರು ಸ್ಥಳದಲ್ಲಿಯೇ ಇದ್ದರು.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಮಮಂದಿರ ಚಳವಳಿಯ ಮುಂಚೂಣಿ ನಾಯಕರಾದ ಅಡ್ವಾಣಿ ಮತ್ತು ಜೋಶಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿಎಚ್‌ಪಿಯ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ. ‘ನಾವು ರಾಮ ಜನ್ಮ ಭೂಮಿ ಹೋರಾಟದ ಬಗ್ಗೆ ಮಾತನಾಡಿದ್ದೇವೆ. ಇಬ್ಬರೂ ಹಿರಿಯರು ಕಾರ್ಯಕ್ರಮಕ್ಕೆ ಬರಲು ತಮ್ಮ ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದ್ದಾರೆ’ ಎಂದು ಕುಮಾರ್ ಹೇಳಿದ್ದಾರೆ. ವಿಎಚ್‌ಪಿಯು ಬಿಜೆಪಿಯ ಸೈದ್ಧಾಂತಿಕ ಪೋಷಕ ಗುಂಪುಗಳಾದ ಸಂಘ ಪರಿವಾರದ ಒಂದು ಭಾಗವಾಗಿದೆ.

ರಾಮಮಂದಿರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದಿಂದ ಇಬ್ಬರನ್ನು ದೂರವಿಡಲು ತಿಳಿಸಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿಕೆಯ ನಂತರ ವಿಎಚ್‌ಪಿ ಸ್ಪಷ್ಟನೆ ನೀಡಿದೆ. ‘ಇಬ್ಬರೂ ನಮ್ಮ ಕುಟುಂಬದ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಯಿತು, ಅದನ್ನು ಇಬ್ಬರೂ ಒಪ್ಪಿಕೊಂಡರು’ ಎಂದು ರೈ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು,
ಈ ಟೀಕೆಗಳು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಒಂದು ಹಂತದಲ್ಲಿ ಬಿಜೆಪಿ ನಾಯಕತ್ವವು ಪಕ್ಷವನ್ನು ಮುನ್ನಡೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸುವ ಮೂಲಕ ಅವಮಾನಿಸಿದೆ ಎಂದು ಹಲವರು ಆರೋಪಿಸಿದ್ದಾರೆ.

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಈ ಭವ್ಯ ಸಮಾರಂಭಕ್ಕೆ ಆರು ಪ್ರಾಚೀನ ಶಾಲೆಗಳ ಆಚಾರ್ಯರು, ಸುಮಾರು 4,000 ಸಂತರು ಮತ್ತು 2,200 ಇತರೆ ಅತಿಥಿಗಳನ್ನು ಆಹ್ವಾನಿಸಲಾಗಿದೆ ಎಂದು ರೈ ನಿನ್ನೆ ಹೇಳಿದ್ದರು. ಅತಿಥಿಗಳು ಕಾಶಿ ವಿಶ್ವನಾಥ ಮತ್ತು ವೈಷ್ಣೋದೇವಿಯಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಗಂಡ ಬಲಾತ್ಕರಿಸಿದರೂ ಅತ್ಯಾಚಾರವೇ: ಗುಜರಾತ್‌ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...