Homeಮುಖಪುಟಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

ಆದಾಯ ಮೀರಿ ಆಸ್ತಿ ಗಳಿಕೆ: ತಮಿಳುನಾಡು ಸಚಿವ ಪೊನ್ಮುಡಿ ದೋಷಿ; ಮದ್ರಾಸ್ ಹೈಕೋರ್ಟ್‌

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ತಪ್ಪಿತಸ್ಥ ಎಂದು ಮದ್ರಾಸ್ ಹೈಕೋರ್ಟ್‌ ಮಂಗಳವಾರ ಘೋಷಿಸಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು, ಹಿರಿಯ ಡಿಎಂಕೆ ನಾಯಕ ಪೊನ್ಮುಡಿ ಮತ್ತು ಅವರ ಪತ್ನಿ ಪಿ ವಿಶಾಲಾಕ್ಷಿ ಅವರನ್ನು ದೋಷಿಗಳು ಎಂದು ಘೋಷಿಸಿದ್ದಾರೆ. ಡಿಸೆಂಬರ್ 21 ರಂದು ಇಬ್ಬರಿಗೂ ಶಿಕ್ಷೆ ಪ್ರಮಾಣ ಪ್ರಕಟಿಸಲಾಗುತ್ತದೆ. ಅಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

1996ರಿಂದ 2001ರ ವರೆಗಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಎಐಎಡಿಎಂಕೆ 2002ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಾಗೃತ ಹಾಗೂ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (ಡಿವಿಎಸಿ)ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಪೊನ್ಮುಡಿ ವಿರುದ್ಧ ಆರೋಪ ರೂಪಿಸಲಾಗಿತ್ತು. ವಿಚಾರಣೆಯನ್ನು ವಿಲ್ಲುಪುರಂನಿಂದ ವೆಲ್ಲೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ಜೂನ್ 28ರಂದು ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಧೀಶೆ ಎನ್ .ವಸಂತಲೀಲಾ ಅವರು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದರು.

ಆದರೆ, ಮದ್ರಾಸ್ ಹೈಕೋರ್ಟ್‌ ಪೊನ್ಮುಡಿ ದಂಪತಿ ಸೇರಿದಂತೆ ಇತರ ಆರು ಮಂದಿ ರಾಜಕಾರಣಿಗಳ ವಿರುದ್ಧದ ಪ್ರಕರಣಗಳನ್ನು ಸ್ವಯಂ ಪ್ರೇರಿತ ಮರು ಪರಿಶೀಲನೆಗೆ ತೆಗೆದುಕೊಂಡಿತ್ತು.ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪೊನ್ಮುಡಿ ದಂಪತಿಯ ಪ್ರಕರಣದ ವಿಚಾರಣೆ ಆರಂಭಿಸಿದ್ದರು.

ವಿಚಾರಣಾ ನ್ಯಾಯಾಲಯದ ಇತ್ಯರ್ಥಪಡಿಸಿದ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ವೆಂಕಟೇಶ್ ವಿರುದ್ಧ ಪೊನ್ಮುಡಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. “ನಮ್ಮ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಂತಹ ನ್ಯಾಯಾಧೀಶರನ್ನು ಹೊಂದಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನವೆಂಬರ್ 5 ರಂದು ಹೇಳಿತ್ತು.

ಬಳಿಕ ನ್ಯಾಯಾಲಯದ ರೋಸ್ಟರ್ ಬದಲಾವಣೆಯ ಕಾರಣ ನ್ಯಾಯಮೂರ್ತಿ ಜಿ.ಜಯಚಂದ್ರ ಅವರು ಈ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಿದ್ದರು. ಡಿ.19ರಂದು ತೀರ್ಪು ಪ್ರಕಟಿಸಿದ್ದಾರೆ.

ಆರೋಪಿಗಳ ವಿರುದ್ಧದ ಸಾಕ್ಷ್ಯಗಳ ಕೊರತೆ ಮತ್ತು ಲಭ್ಯ ಸಾಕ್ಷ್ಯಗಳ ತಪ್ಪಾದ ವ್ಯಾಖ್ಯಾನ ಖುಲಾಸೆಗೊಳಿಸುವ ವಿಚಾರಣಾ ನ್ಯಾಯಾಲಯದ ತೀರ್ಪು ಸ್ಪಷ್ಟವಾಗಿ ತಪ್ಪು ಎಂದು ಸೂಚಿಸುತ್ತದೆ. ಹಾಗಾಗಿ, ವಿಚಾರಣಾ ನ್ಯಾಯಾಲಯದ ತೀರ್ಪು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಜಿ. ಜಯಚಂದ್ರನ್ ಹೇಳಿದ್ದಾರೆ.

ಸಚಿವ ಪೊನ್ಮುಡಿ ಅನರ್ಹತೆ ಎದುರಿಸುವ ಸಾಧ್ಯತೆ ಇದ್ದು, ಗುರುವಾರ ನ್ಯಾಯಾಲಯದ ಶಿಕ್ಷೆ ಪ್ರಕಟಿಸಿದ ನಂತರ ಅದು ಸ್ಪಷ್ಟವಾಗಲಿದೆ.

ಇದನ್ನೂ ಓದಿ: ಎಲ್ಗರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...