Homeಮುಖಪುಟಅಧ್ಯಕ್ಷೀಯ ಚುನಾವಣೆಯಿಂದ ಟ್ರಂಪ್ ಅನರ್ಹ: ಕೊಲೊರಡೊ ಕೋರ್ಟ್‌ ತೀರ್ಪು

ಅಧ್ಯಕ್ಷೀಯ ಚುನಾವಣೆಯಿಂದ ಟ್ರಂಪ್ ಅನರ್ಹ: ಕೊಲೊರಡೊ ಕೋರ್ಟ್‌ ತೀರ್ಪು

- Advertisement -
- Advertisement -

ಅಮೆರಿಕದ ಕ್ಯಾಪಿಟೋಲ್ (ಸಂಸತ್) ಕಟ್ಟಡದ ಮೇಲೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದಲ್ಲಿ ಟ್ರಂಪ್ ಪಾತ್ರ ಕಂಡು ಬಂದ ಹಿನ್ನೆಲೆ ಅವರು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಂತೆ ಅನರ್ಹಗೊಳಿಸಿ ಕೊಲೊರಡೊ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ.

ಅಮೆರಿಕದ ಸಂವಿಧಾನದ 14ನೇ ತಿದ್ದುಪಡಿಯ ಸೆಕ್ಷನ್ 3ರ ಅಡಿಯಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯೊಬ್ಬರನ್ನು ಇದೇ ಮೊದಲ ಬಾರಿಗೆ ಅನರ್ಹಗೊಳಿಸಲಾಗಿದೆ.

ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ 2024ರಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಟ್ರಂಪ್ ಸಿದ್ದತೆ ನಡೆಸಿದ್ದರು. ಆದರೆ, ಹಿಂಸೆಗೆ ಪ್ರಚೋದಿಸಿದ ಆರೋಪದ ಮೇಲೆ ಅವರು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಕೋರ್ಟ್‌ ನಿರ್ಬಂಧ ಹೇರಿದೆ.

ಕೊಲೊರಡೊ ಸುಪ್ರೀಂ ಕೋರ್ಟ್‌ ನಿನ್ನೆ(ಡಿ.19) ತೀರ್ಪು ನೀಡಿದೆ. ಆದರೆ, ಯುಎಸ್ ಸುಪ್ರೀಂ ಕೋರ್ಟ್ ಮೊರೆ ಹೋಗಲು ಜನವರಿ 4ವರೆಗೆ ಟ್ರಂಪ್ ಅವರಿಗೆ ಸಮಯ ನೀಡಿದೆ. ಟ್ರಂಪ್ ಅಧ್ಯಕ್ಷೀಯ ಚುನಾವಣೆಗೆ ನಡೆಸುತ್ತಿರುವ ತಯಾರಿ ನೋಡಿದರೆ ಅವರು ಖಂಡಿತವಾಗಿಯೂ ಯುಎಸ್ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇದೆ ಎಂದು ವರದಿಗಳು ಹೇಳಿವೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಹಿನ್ನಡೆ ಅನುಭವಿಸಿದ ಬಳಿಕ ಜನವರಿ 6, 2021ರಂದು ಅವರ ಬೆಂಬಲಿಗರು ಸಂಸತ್ತಿನ ಮೇಲೆ ದಾಳಿ ನಡೆಸಿದ್ದರು. ಇದರ ಹಿಂದೆ ಟ್ರಂಪ್ ಅವರ ಪ್ರಚೋದನೆ ಇದೆ ಎಂದು ಆರೋಪಿಸಲಾಗಿತ್ತು.

ಕೊಲೊರಡೊ ಮತದಾರರ ಗುಂಪೊಂದು ಟ್ರಂಪ್ ವಿರುದ್ಧ ಮೊಕದ್ದಮೆ ಹೂಡಿತ್ತು. 2024ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಕ್ಕೆ ಅವರಿಗೆ ನಿರ್ಬಂಧ ಹೇರುವಂತೆ ಕೋರಿತ್ತು. ವಾಷಿಂಗ್ಟನ್ ಸಿಟಿಝನ್ ಫಾರ್ ರೆಸ್ಪಾನ್ಸಿಬಿಲಿಟಿ ಅಂಡ್ ಎಥಿಕ್ಸ್ ಈ ಪ್ರಕರಣವನ್ನು ಬೆಂಬಲಿಸಿತ್ತು.

ಟ್ರಂಪ್ ವಿರುದ್ಧದ ತೀರ್ಪು ಮುಂದಿನ ವರ್ಷ ಮಾರ್ಚ್‌ನಲ್ಲಿ ನಡೆಯಲಿರುವ ರಿಪಬ್ಲಿಕನ್ ಪಕ್ಷದ ಆಂತರಿಕ ಚುನಾವಣೆ ಮಾತ್ರವಲ್ಲದೆ ನವೆಂಬರ್‌ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಏನಿದು 14 ನೇ ತಿದ್ದುಪಡಿಯ ಸೆಕ್ಷನ್ 3?

ಅಮೆರಿಕದ ಸಂವಿಧಾನದ 14 ನೇ ತಿದ್ದುಪಡಿಯ ಸೆಕ್ಷನ್ 3 ಅಡಿಯಲ್ಲಿ ಟ್ರಂಪ್ ಅವರು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದರಿಂದ ಅನರ್ಹಗೊಳಿಸಲಾಗಿದೆ. ಈ ಸೆಕ್ಷನ್ ದಂಗೆ, ಹಿಂಸಾಚಾರ ಆರೋಪ ಹೊತ್ತಿರುವ ಜನರು ಅಧ್ಯಕ್ಷೀಯ ಪದವಿಯಂತಹ ಉನ್ನತ ಹುದ್ದೆಗೆ ಏರುವುದನ್ನು ತಡೆಯುತ್ತದೆ.

ಇದನ್ನೂ ಓದಿ: ಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...