Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...