Homeಮುಖಪುಟಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

- Advertisement -
- Advertisement -

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜಾಪ್ರಭುತ್ವದ ಸಂಕೇತವಾಗಿ ನಮ್ಮ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ತಿನಲ್ಲಿ ದೇಶದ ಜನರ ಅಭಿವೃದ್ಧಿಗೆ ಪೂರಕ ಶಾಸನಗಳ ರಚನೆ ಮಾಡಲಾಗುತ್ತದೆ. ಆದರೆ ಇತ್ತೀಚೆಗೆ ಸಂಸತ್ತಿನಲ್ಲಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ವ್ಯವಸ್ಥೆಯ ಬಲಪಡಿಸುವ ಶಾಸನಗಳ ರೂಢೀಕರಣದ ಬದಲು, ರಾಜಕೀಯ ಚರ್ಚೆಗಳು ಮತ್ತು ಗದ್ದಲಗಳಿಗೆ ಸಾಕ್ಷಿಯಾಗುತ್ತಿದೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನಲ್ಲಿ ಪ್ರತಿಪಕ್ಷವು ಕಾವಲು ನಾಯಿಯಾಗಿ ಕಾರ್ಯನಿರ್ವಹಿಸುತ್ತದೆ. ಆದರೆ 2023ರ ಡಿಸೆಂಬರ್‌ನಲ್ಲಿ ಪ್ರತಿಪಕ್ಷದ ಸಂಸದರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯೇ ಇಲ್ಲದಂತೆ ಮಾಡಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿಯಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಉಭಯ ಸದನಗಳಿಂದ 141 ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಮಾಡಲಾಗಿದೆ. ಭಾರತದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ನಡೆದ ಬೆಳವಣಿಗೆ ಮತ್ತು ಇದು ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿ ಆರೋಗ್ಯಕರ ಬೆಳವಣಿಗೆಯೂ ಅಲ್ಲವಾಗಿದೆ.

ಪ್ರತಿಪಕ್ಷದ ಸಂಸತ್ ಸದಸ್ಯರ ಸಾಮೂಹಿಕ ಅಮಾನತು ಸಂಸತ್ತಿನಲ್ಲಿ ಬಹುಮತವನ್ನು ಹೊಂದಿರುವ ಆಡಳಿತ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಕಾರಣವಾಗುತ್ತದೆ. ಈ ಹಿಂದೆ ಪ್ರಧಾನಿ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸಂಸತ್ತಿನಲ್ಲಿ ಪ್ರಚಂಡ ಬಹುಮತವನ್ನು ಪಡೆದಿದ್ದ ವೇಳೆ ಇಂತಹ ದೊಡ್ಡ ಪ್ರಮಾಣದ ಅಮಾನತುಗಳು ನಡೆದಿದ್ದವು. 1989ರ ಮಾ.15ರಂದು ಸಂಸತ್ತಿನಲ್ಲಿ ಇಂದಿರಾ ಗಾಂಧಿಯವರ ಹತ್ಯೆಗೆ ಸಂಬಂಧಿಸಿದ ಆಯೋಗದ ವರದಿಯನ್ನು ಮಂಡಿಸುವ ಬಗ್ಗೆ ಗದ್ದಲವನ್ನು ಸೃಷ್ಟಿಸಿದ ನಂತರ 63 ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು.

ಈ ಬಳಿಕ 2015ರಲ್ಲಿ ಬಿಜೆಪಿ ಸರಕಾರದ ವೇಳೆ 25 ಪ್ರತಿಪಕ್ಷದ ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಆಗಿನ ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಅವರು ಕಲಾಪಕ್ಕೆ ಅಡ್ಡಿ ಆರೋಪದಲ್ಲಿ 25 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸುವ ವೇಳೆ ಕಾಂಗ್ರೆಸ್‌ಗೆ 1989ರ ಘಟನೆಯನ್ನು ನೆನೆಪಿಸಿದ್ದರು. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಈ ಬೆಳವಣಿಗೆ ನಡೆದಿತ್ತು.

ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರು ಮಾತನಾಡಬೇಕು ಎಂದು ಪಟ್ಟು ಹಿಡಿದ ಪ್ರತಿಪಕ್ಷದ 141 ಸಂಸದರನ್ನು ಸಾಮೂಹಿಕವಾಗಿ ಅಮಾನತು ಮಾಡಲಾಗಿತ್ತು. ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರುವ ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಶ್ನಿಸಬಹುದು ಆದರೆ ಅದೇ ಸಮಯದಲ್ಲಿ ಗೃಹ ಸಚಿವರು ಹೇಳಿಕೆ ನೀಡುವಂತೆ ಕೇಳಿರುವ ಪ್ರತಿಪಕ್ಷದ ಬೇಡಿಕೆಯನ್ನು ಅಸಂಸದೀಯ ಎಂದು ಪರಿಗಣಿಸುಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಇಬ್ಬರೂ ಸಂಸತ್ತಿನ ಹೊರಗೆ ಈ ಬಗ್ಗೆ ಮಾತನಾಡುತ್ತಾರೆ. ಆದರೆ ಸಂಸತ್ತಿನಲ್ಲಿ ಬಿಜೆಪಿ ಮತ್ತು ಸರಕಾರದ ಪರವಾಗಿ  ಮಾತನಾಡಬೇಕು ಎನ್ನುವುದು ಪ್ರತಿಪಕ್ಷಗಳ ಬೇಡಿಕೆಯಾಗಿತ್ತು. ಇದಲ್ಲದೆ ಸಂಸತ್ತನ್ನು ನಡೆಸುವ ಜವಾಬ್ದಾರಿಯು ಆಡಳಿತ ನಡೆಸುವ ಸರಕಾರಕ್ಕೆ ಇದೆ ಮತ್ತು ಲೋಪ ಕಂಡು ಬಂದಲ್ಲಿ ಆ ಬಗ್ಗೆ ವಿವರಣೆಯನ್ನು ಕೂಡ ನೀಡಬೇಕಿದೆ.

2014ರಿಂದ ಬಿಜೆಪಿ ಸರ್ಕಾರ ಮತ್ತು ಪ್ರತಿಪಕ್ಷಗಳ ನುಡವಿನ ಗುದ್ದಾಟಕ್ಕೆ ಸಂಸತ್ತು ಹಲವು ಬಾರಿ ಸಾಕ್ಷಿಯಾಗಿದೆ. ಬಿಜೆಪಿಯು 2004ರಿಂದ 2014ರವರೆಗೆ ವಿರೋಧ ಪಕ್ಷದಲ್ಲಿದ್ದಾಗ ಹಲವು ಸಂದರ್ಭಗಳಲ್ಲಿ ಸದನದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿತ್ತು. 2010ರ ಚಳಿಗಾಲದ ಅಧಿವೇಶನದಲ್ಲಿ 2ಜಿ ತರಂಗಾಂತರ ಹಂಚಿಕೆ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿ ಬಿಜೆಪಿ ನೇತೃತ್ವದ ವಿರೋಧ ಪಕ್ಷಗಳು ಕಲಾಪವನ್ನು ಸ್ಥಗಿತಗೊಳಿಸಿದ್ದವು. ದಾಖಲೆಗಳು ಸೂಚಿಸುವಂತೆ, ಆ ಸಮಯದಲ್ಲಿ ಯಾವುದೇ ವಿರೋಧ ಪಕ್ಷದ ಸದಸ್ಯರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿಲ್ಲ.

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಆಡಳಿತ ಪಕ್ಷವು ದುರಹಂಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದಾರೆ ಮತ್ತು ಪ್ರತಿಪಕ್ಷಗಳನ್ನು ಹೊರಗಿಟ್ಟು ಸಂಸತ್ತಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಪ್ರಮುಖ ಮಸೂದೆಗಳನ್ನು ಪಾಸ್‌ ಮಾಡಲು ಬಿಜೆಪಿ ಬಯಸಿದೆ ಎಂದು ಆರೋಪಿಸಿದ್ದಾರೆ. ಮೋದಿ ಸರ್ಕಾರವು ಅಮಾನತುಗಳನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.19ರಂದು ದೆಹಲಿಯಲ್ಲಿ ನಡೆದ INDIA ಮೈತ್ರಿ ಕೂಟದ ಸಭೆಯಲ್ಲಿ ಈ ಕ್ರಮವನ್ನು ಖಂಡಿಸಿ ಡಿ.22ರಂದು ರಾಷ್ಟ್ರವ್ಯಾಪಿ ಆಂದೋಲನಗಳನ್ನು ನಡೆಸಲು ಪ್ರತಿಪಕ್ಷಗಳು ನಿರ್ಧರಿಸಿದೆ. ಸಂಸದರ ಅಮಾನತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಹಾಸ್ಯ ಮತ್ತು ಅವಮಾನ ಎಂದು ಹೇಳಿದೆ. ಸಂಸತ್ತಿನಲ್ಲಿ 141 ಸಂಸದರನ್ನು ಅಮಾನತು ಮಾಡಿದ ಬಳಿಕ ಸಂಸದರು ಕೇಳಲು ಇಚ್ಚಿಸಿದ 27 ಪ್ರಶ್ನೆಗಳನ್ನು ಸಂಸತ್ತಿನ ಪ್ರಶ್ನೋತ್ತರಗಳ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ. ಇದಲ್ಲದೆ ಪ್ರಶ್ನೆ ಕೇಳಲು ಇಚ್ಚಿಸಿದ ಅಮಾನತುಗೊಂಡ ಸಂಸದರನ್ನು ಕೂಡ ಪಟ್ಟಿಯಿಂದ ತೆಗೆದು ಹಾಕಗಿದೆ. ಈ ಮೂಲಕ ಸಂಸತ್ತಿನಲ್ಲಿ ಪ್ರತಿಪಕ್ಷಗಳು ಧ್ವನಿ ಮತ್ತು ಪ್ರಶ್ನೆ ಸಂಸತ್ತಿನಲ್ಲಿ ಕುಗ್ಗಿ ಹೋಗುವಂತಾಗಿದೆ. ಯಾವುದೇ ವಿರೋಧವಿಲ್ಲದೆ ಸಂಸತ್ತಿನಲ್ಲಿ ಏಕಪಕ್ಷೀಯವಾಗಿ ಆಡಳಿತ ಪಕ್ಷಕ್ಕೆ ಬಿಲ್‌ಗಳನ್ನು ಪಾಸ್‌ ಮಾಡಲು ಅನುಕೂಲಕರವಾಗಿದೆ. ಆದರೆ ಸಂಸದೀಯ ಪ್ರಜಾಪ್ರಭುತ್ವಕ್ಕೆ ಈ ಬೆಳವಣಿಗೆ ಮಾರಕವಾಗಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಅಮಾನತುಗೊಂಡ ಸಂಸದರು ಕೇಳಿದ್ದ 27 ಪ್ರಶ್ನೆಗಳು ಡಿಲಿಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...