Homeಮುಖಪುಟ"ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ": ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ”: ಡಿಎಂಕೆ ನಾಯಕರ ವಿರುದ್ಧ ನಿತೀಶ್ ಕುಮಾರ್ ಆಕ್ರೋಶ

- Advertisement -
- Advertisement -

“ರಾಷ್ಟ್ರ ಭಾಷೆ ಹಿಂದಿ ಕಲಿಯಿರಿ” ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರಿಗೆ ತಾಕೀತು ಮಾಡಿರುವುದಾಗಿ ವರದಿಗಳು ತಿಳಿಸಿವೆ.

ಮಂಗಳವಾರ ನವದೆಹಲಿಯಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ನಿತೀಶ್ ಕುಮಾರ್ ಮಾತನಾಡಲು ಶುರು ಮಾಡಿದಾಗ ಡಿಎಂಕೆ ನಾಯಕರಾದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್ ಬಾಲು ಅವರು ನಿತೀಶ್ ಕುಮಾರ್ ಅವರ ಹಿಂದಿ ಭಾಷಣವನ್ನು ಇಂಗ್ಲಿಷ್‌ಗೆ ಭಾಷಾಂತರಿಸುವಂತೆ ಕೋರಿದ್ದರು.

ಈ ವೇಳೆ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರು ನಿತೀಶ್ ಕುಮಾರ್ ಭಾಷಣವನ್ನು ಭಾಷಾಂತರಿಸಲು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ನಿತೀಶ್ ಕುಮಾರ್ ” ಹಿಂದಿ ನಮ್ಮ ರಾಷ್ಟ್ರ ಭಾಷೆ, ಅದನ್ನು ಕಲಿಯಿರಿ. ಎಲ್ಲವನ್ನು ಭಾಷಾಂತರ ಮಾಡುತ್ತಾ ಕೂರಲು ಆಗುತ್ತಾ?” ಎಂದು ಪ್ರಶ್ನಿಸಿದ್ದಾಗಿ ತಿಳಿದು ಬಂದಿದೆ.

ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಹೋರಾಟ ಮತ್ತು ಇಂಗ್ಲಿಷ್ ಹೇರಿಕೆಯ ಬಗ್ಗೆ ಇದೇ ವೇಳೆ ನಿತೀಶ್ ಕುಮಾರ್ ಮಾತನಾಡಿದ್ದಾರೆ ಎನ್ನಲಾಗಿದ್ದು, ನಿತೀಶ್ ಹೇಳಿಕೆ ಸಂಬಂಧ ಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

ಭಾಷಾಂತರ ಕೇಳಿದ್ದಕ್ಕೆ ಕೋಪಗೊಂಡಿದ್ದ ನಿತೀಶ್ ಕುಮಾರ್ ಅವರನ್ನು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಇತರ ನಾಯಕರು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ. ಆದರೂ, ಅವರು ಸಮಾಧಾನಗೊಂಡಿಲ್ಲ ಎನ್ನಲಾಗಿದೆ. ನಿತೀಶ್ ಕುಮಾರ್ ಭಾಷಣದ ಬಳಿಕ ಲಾಲೂ ಪ್ರಸಾದ್ ಯಾದವ್ ಕೂಡ ಹಿಂದಿಯಲ್ಲೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಕೆಲ ಹಿಂದಿ ಮಾತನಾಡುವ ನಾಯಕರನ್ನು ಹಿಂದಿ ಬದಲು ಇಂಗ್ಲಿಷ್‌ನಲ್ಲಿ ಭಾಷಣ ಮಾಡಿದ್ದಾರೆ.

ತಮಿಳುನಾಡು ಹಿಂದಿ ಭಾಷೆಯ ಹೇರಿಕೆಯನ್ನು ಕಠುವಾಗಿ ವಿರೋಧಿಸುವ ರಾಜ್ಯವಾಗಿದೆ. ಅಲ್ಲಿನ ಸಾಮಾನ್ಯ ಜನರು, ರಾಜಕೀಯ ನಾಯಕರೂ ಕೂಡ ಹಿಂದಿಯನ್ನು ಒಪ್ಪಿಕೊಳ್ಳುವುದಿಲ್ಲ. ಈ ಹಿಂದೆ ಹಿಂದಿ ಹೇರಿಕೆಯ ವಿರುದ್ಧ ತಮಿಳುನಾಡಿನಲ್ಲಿ ದೊಡ್ಡ ಕ್ರಾಂತಿಯೇ ಆಗಿದೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಕಳೆದ 10 ವರ್ಷಗಳಿಂದ ಇದೆ. ತಮಿಳುನಾಡು ಮೋದಿ ಸರ್ಕಾರದ ಹಿಂದಿ ಹೇರಿಕೆಯನ್ನು ಸದಾ ವಿರೋಧಿಸುತ್ತಲೇ ಬಂದಿದೆ. ಆದರೆ, ಈಗ ಡಿಎಂಕೆಯ ಮಿತ್ರ ಪಕ್ಷದ ನಾಯಕನೇ ಹಿಂದಿ ಹೇರಿಕೆಯ ಮಾತನಾಡಿರುವುದು ಹೊಸತೊಂದು ಚರ್ಚೆಯನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: “ಅವರು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾರೆ”: ಸಂಸದರ ಅಮಾನತು ಕುರಿತು ಬಿಜೆಪಿ ಸಂಸದೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...