Homeಮುಖಪುಟಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

ಅಸ್ಸಾಂನ ಬಂಧನ ಕೇಂದ್ರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ

- Advertisement -
- Advertisement -

ಭಾರತದ ಅತಿದೊಡ್ಡ ಬಂಧನ ಕೇಂದ್ರ ಗೋಲ್‌ಪಾರಾ ಜಿಲ್ಲೆಯ ಮಾಟಿಯಾ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳು ಕೇಳಿ ಬಂದಿದ್ದು, ಅಕ್ರಮ ವಲಸಿಗರನ್ನು ಕ್ರಿಮಿನಲ್‌ಗಳ ಜೊತೆ ಒಂದೇ ಸೆಲ್‌ನಲ್ಲಿ ಇರಿಸಲಾಗುತ್ತಿದೆ. ಅಸ್ಸಾಂನಲ್ಲಿ ಪೌರತ್ವ ಬಿಕ್ಕಟ್ಟಿನಿಂದಾಗಿ 2010ರಿಂದ ಬಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಸ್ಸಾಂನ ಬಂಧನ ಕೇಂದ್ರಗಳು ಮಾನವೀಯ ಕಾಳಜಿಯ ಬಗ್ಗೆ ಪ್ರಶ್ನೆಗಳನ್ನು ಹೆಚ್ಚಿಸಿವೆ.

ಅಸ್ಸಾಂನಲ್ಲಿನ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಬಯಲು ಮಾಡಲು ಸೆಂಟರ್ ಫಾರ್ ನ್ಯೂ ಎಕನಾಮಿಕ್ಸ್ ಸ್ಟಡೀಸ್‌ನ ಆಜಾದ್ ಆವಾಜ್ ತಂಡವು ಪ್ರಾಥಮಿಕ ಸಂದರ್ಶನಗಳನ್ನು ನಡೆಸಿದೆ. ಈ ವೇಳೆ ಈ ಬಂಧನ ಕೇಂದ್ರಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅಲ್ಲಿ ಹೇಗೆ ವ್ಯಕ್ತಿಗಳ  ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂಬುವುದನ್ನು ಬಹಿರಂಗಪಡಿಸಿದೆ.

1951ರ ನಿರಾಶ್ರಿತರ ಕನ್ವೆನ್ಸನ್‌ ಪ್ರಕಾರ, ಸದಸ್ಯ ರಾಷ್ಟ್ರಗಳು, ವಲಸಿಗರು ಅನುಮತಿಯಿಲ್ಲದೆ ಪ್ರವೇಶಿಸಿದ್ದರೂ ಸಹ ವಲಸಿಗರನ್ನು ಬಂಧಿಸಲು, ಹೊರಹಾಕಲು ಸಾಧ್ಯವಿಲ್ಲ. ಭಾರತವು ಸದಸ್ಯ ರಾಷ್ಟ್ರವಲ್ಲದ ಕಾರಣ ಈ ನಿಯಮಗಳಿಗೆ ಅದು ಅನ್ವಯವಾಗಲ್ಲ. ಆದ್ದರಿಂದ ಅಕ್ರಮ ವಲಸಿಗರ ಪತ್ತೆ, ಬಂಧನ ಮತ್ತು ಗಡೀಪಾರು ಮಾಡುವುದಕ್ಕೆ ನಿರ್ಬಂಧ ಅನ್ವಯವಾಗುವುದಿಲ್ಲ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವಿಶೇಷ ಪರಿವೀಕ್ಷಕ ಹರ್ಷ್ ಮಂದರ್ ಅವರು ಶಿಬಿರಗಳಲ್ಲಿನ ಭೀಕರ ಪರಿಸ್ಥಿತಿಯನ್ನು ಬಹಿರಂಗಪಡಿಸಿದ ನಂತರ ಬಂಧಿತರು ಎದುರಿಸುತ್ತಿರುವ ಶೋಚನೀಯ ಪರಿಸ್ಥಿತಿಗಳು ಬೆಳಕಿಗೆ ಬಂದವು. ಇದಲ್ಲದೆ ಸುಮಿ ಗೋಸ್ವಾಮಿ ಪ್ರಕರಣವು ಬಂಧನ ಕೇಂದ್ರದಲ್ಲಿನ ಪರಿಸ್ಥಿತಿಗಳನ್ನು ಬಯಲುಗೊಳಿಸಿದೆ.

ಫಾರಿನರ್ಸ್ ಟ್ರಿಬ್ಯೂನಲ್‌ನ ತಾಂತ್ರಿಕ ದೋಷದ ಕಾರಣ ಸುಮಿ ಗೋಸ್ವಾಮಿ ಅವರನ್ನು ಮಾಟಿಯಾ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದರೂ ಆಕೆಯನ್ನು ಮೂರು ದಿನಗಳ ಕಾಲ ಬಂಧನ ಶಿಬಿರದಲ್ಲಿ ಇರಿಸಲಾಗಿದೆ. ನಂತರ ಅವಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಸುಮಿ ಗೋಸ್ವಾಮಿ ಬಂಧನ ಕೇಂದ್ರದಲ್ಲಿನ ತನ್ನ ನೆನಪನ್ನು ವಿವರಿಸುತ್ತಾ, ನಾನು ಏನು ಅನುಭವಿಸಿದೆ ಎಂದು ಯಾರಿಗೂ ಅರ್ಥವಾಗಲು ಸಾಧ್ಯವಿಲ್ಲ. ನನಗೆ ಮಾತ್ರ ಸಾಧ್ಯ. ನೀವು ಬಂಧನ ಶಿಬಿರಕ್ಕೆ ಹೋಗದಿದ್ದರೆ, ಅಲ್ಲಿ ವಾಸಿಸುವುದು ಹೇಗೆಂದು ನಿಮಗೆ ಅರ್ಥವಾಗುತ್ತಿರಲಿಲ್ಲ. ನಾನು ಇದನ್ನು ಅನುಭವಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದ್ದಾರೆ.

ಅಲ್ಲಿನ ಜೀವನ ಪರಿಸ್ಥಿತಿಗಳ ಬಗ್ಗೆ ಮಾತನಾಡಿದ ಅವರು, ಒಂದು ಸೆಲ್‌ನಲ್ಲಿ ಸುಮಾರು 14 ರಿಂದ 15 ಜನರಿದ್ದರು. ಒಂದು ಅಟ್ಯಾಚ್ಡ್ ಬಾತ್ರೂಮ್ ಇತ್ತು. ನಾನು ಅಲ್ಲಿಗೆ ಹೋದ ಮೊದಲ ದಿನ, ಸ್ನಾನಗೃಹಗಳ ಬಾಗಿಲುಗಳು ಅರ್ಧ ಮಾತ್ರ ನಿರ್ಮಿಸಲ್ಪಟ್ಟಿರುವುದನ್ನು ಗಮನಿಸಿದಾಗ ನನಗೆ ಆಶ್ಚರ್ಯವಾಯಿತು. ಅಲ್ಲಿ ನಿಮ್ಮ ಮುಖವನ್ನು ಹೊರಗಿನಿಂದ ನೋಡಬಹುದು. ಒಬ್ಬ ಅಧಿಕಾರಿಯನ್ನು ಕೇಳಿದಾಗ, ಕೈದಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನಿರ್ಬಂಧಿಸಲು ಆ ರೀತಿಯಲ್ಲಿ ನಿರ್ಮಿಸಲಾಗಿದೆ ಎಂದು ನಾನು ಅರಿತುಕೊಂಡೆ. ಸ್ನಾನಗೃಹದಲ್ಲಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ವಾಸಿಸುವುದು ಅಸಹನೀಯವಾಗಿದೆ. ನನಗೆ ಸತತ ಎರಡು ರಾತ್ರಿ ನಿದ್ರೆ ಬರಲಿಲ್ಲ. ನಾನು ಇಡೀ ರಾತ್ರಿ ಕುಳಿತಿದ್ದೆ. ಅವರು ನನಗೆ ಒದಗಿಸಿದ ಹಾಸಿಗೆಯಂತಿರುವ ವಸ್ತುಗಳನ್ನು ನಾನು ನನ್ನ ಜೀವನದಲ್ಲಿ ಎಂದೂ ಬಳಕೆ ಮಾಡಿರಲಿಲ್ಲ. ಅಷ್ಟು ಕಳಪೆಯಾಗಿತ್ತು ಎಂದು ಹೇಳಿದ್ದಾರೆ.

UNHRC ಮಾರ್ಗಸೂಚಿಗಳು ರಾಜ್ಯ ಕಾರಾಗೃಹಗಳನ್ನು ವಲಸಿಗರ ಬಂಧನಕ್ಕೆ ಬಳಸಬಾರದು ಎಂದು ಹೇಳುತ್ತದೆ. ಆದರೆ ವಲಸಿಗರನ್ನು ಶಿಕ್ಷೆಗೊಳಗಾದ ಕೈದಿಗಳೊಂದಿಗೆ ಅದೇ ಸೆಲ್‌ಗಳಲ್ಲಿ ಇರಿಸಲಾಗುತ್ತದೆ. ಸುಮಿ ಗೋಸ್ವಾಮಿ ತನ್ನ ಸೆಲ್‌ನಲ್ಲಿದ್ದವಳನ್ನು ಮಾತನಾಡಿಸಿದಾಗ ಆಕೆ ಜಮೀನಿಗಾಗಿ ಸಹೋದರನಿಗೆ ಕೊಲೆ ಮಾಡಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮತ್ತೋರ್ವ ಕೈದಿ ಜೊತೆ ಮಾತನಾಡಿದಾಗ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಜೈಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ. ನಿಮ್ಮ ಸುತ್ತಲೂ ಅಪರಾಧಿಗಳಿರುವ ಕೋಣೆಯಲ್ಲಿ ನೀವು ಹೇಗೆ ಶಾಂತಿಯುತವಾಗಿ ಮಲಗಬಹುದು? ಯಾರೋ ಬಂದು ನಿಮ್ಮನ್ನು ಕೊಲ್ಲಬಹುದು. ನಮ್ಮನ್ನು ಅಪರಾಧಿಗಳೊಂದಿಗೆ ಏಕೆ ಇರಿಸಲಾಗಿದೆ? ವಲಸಿಗರು ಮಾಡಿದ ಅಪರಾಧವೇನು? ಎಂದು ಸುಮಿ ಗೋಸ್ವಾಮಿ ಪ್ರಶ್ನಿಸಿದ್ದಾರೆ.

ಅಲ್ಲಿ ಒಬ್ಬಾಕೆ ಹತ್ತು ವರ್ಷಗಳಿಂದ ವಾಸ ಮಾಡುತ್ತಿದ್ದಾಳೆ ಎಂದು ಹೇಳಿದಾಗ ನನಗೆ ಆಘಾತವಾಯಿತು. ನಾನು ಅಲ್ಲಿ ಶಾಶ್ವತವಾಗಿ ವಾಸಿಸಬೇಕಾದರೆ ನಾನು ಜೀವಂತವಾಗಿರಲು ಸಾಧ್ಯವೇ ಇಲ್ಲ. ಎಲ್ಲಾ ಬಂಧಿತರು ಕೆಳದರ್ಜೆಯ ಪರಿಸ್ಥಿತಿಗಳಲ್ಲಿ ಬದುಕುತ್ತಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಗರ್ಭಪಾತ ಸೇರಿದಂತೆ ಮಹಿಳೆಯರು ಇನ್ನೂ ಕೆಟ್ಟ ಪರಿಸ್ಥಿತಿಗಳನ್ನು ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸಂಸದರ ಸಾಮೂಹಿಕ ಅಮಾನತ್ತಿನಿಂದ ಸಂಸದೀಯ ಪ್ರಜಾಪ್ರಭುತ್ವಕ್ಕೆ ಹಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...