Homeಮುಖಪುಟಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

- Advertisement -
- Advertisement -

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳನ್ನು ಬುಧವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ.

ಬುಧವಾರ ಲೋಕಸಭೆಯಲ್ಲಿ ಮಸೂದೆಗಳ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅಮಿತ್‌ ಶಾ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಮೂರು ಹೊಸ ಮಸೂದೆಗಳು ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತವೆ. ಮೂರು ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳು ಜನರನ್ನು ವಸಾಹತುಶಾಹಿ ಮನಸ್ಥಿತಿಯಿಂದ  ಮುಕ್ತಗೊಳಿಸುತ್ತವೆ ಎಂದು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸುವ ಮೊದಲು ಶಾ ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಡುವೆ ಈ ಬೆಳವಣಿಗೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಿಂದ ಒಟ್ಟು 143 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಅದರಲ್ಲಿ 97 ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು. ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ.

ಇದಲ್ಲದೆ ಲೋಕಸಭೆಯಿಂದ ಸಂಸದರ ಅಮಾನತಿನ ಬಳಿಕ ತಾತ್ಕಾಲಿಕ ತೆರಿಗೆ ಸಂಗ್ರಹ ಮಸೂದೆ-2023, ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ತಿದ್ದುಪಡಿ) ಮಸೂದೆಯನ್ನು ಕೂಡ ಅಂಗೀಕರಿಸಲಾಗಿದೆ.

ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ

ಕಳೆದ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿತ್ತು. ಆಗಸ್ಟ್ ತಿಂಗಳಲ್ಲಿ ನಡೆದ ಅಧಿವೇಶನದ ವೇಳೆ 3 ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು. ಹೀಗಾಗಿ ಅವುಗಳನ್ನು ವಾಪಸ್ ಪಡೆದಿದ್ದ ಕೇಂದ್ರ ಸರ್ಕಾರ ಚಳಿಗಾಲದ ಸಂಸತ್‌ ಕಲಾಪದಲ್ಲಿ ಹೊಸದಾಗಿ 3 ವಿಧೇಯಕವನ್ನು ಮಂಡಿಸಿತ್ತು.

ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಮಂಡಿಸಿದ 3 ಕ್ರಿಮಿನಲ್‌ ತಿದ್ದುಪಡಿ ವಿಧೇಯಕಗಳಿಗೆ ಸಂಪುಟ ಅನುಮೋದನೆ ನೀಡಿತ್ತು.  ಲೋಕಸಭೆಯಲ್ಲಿ ವಿಧೇಯಕಗಳನ್ನು ಮಂಡಿಸುವ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಮಸೂದೆಗಳ ಉದ್ದೇಶವು ನ್ಯಾಯ ಒದಗಿಸುವುದು, ಶಿಕ್ಷೆಯಲ್ಲ ಎಂದು ಹೇಳಿದ್ದರು.  ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 3 ಮಸೂದೆಗಳನ್ನು ಮಂಡಿಸಿದ್ದರು.

ಇದನ್ನು ಓದಿ: ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...