Homeಮುಖಪುಟಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

ಸಂಸದರ ಸಾಮೂಹಿಕ ಅಮಾನತಿನ ಬೆನ್ನಲ್ಲಿ ಲೋಕಸಭೆಯಲ್ಲಿ 3 ಕ್ರಿಮಿನಲ್ ಕಾನೂನು ಮಸೂದೆ ಅಂಗೀಕಾರ

- Advertisement -
- Advertisement -

ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ 3 ಮಸೂದೆಗಳನ್ನು ಬುಧವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ.

ಬುಧವಾರ ಲೋಕಸಭೆಯಲ್ಲಿ ಮಸೂದೆಗಳ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅಮಿತ್‌ ಶಾ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದಾರೆ.

ಮೂರು ಹೊಸ ಮಸೂದೆಗಳು ಭಾರತೀಯ ಚಿಂತನೆಯ ಆಧಾರದ ಮೇಲೆ ನ್ಯಾಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತವೆ. ಮೂರು ಪ್ರಸ್ತಾವಿತ ಕ್ರಿಮಿನಲ್ ಕಾನೂನುಗಳು ಜನರನ್ನು ವಸಾಹತುಶಾಹಿ ಮನಸ್ಥಿತಿಯಿಂದ  ಮುಕ್ತಗೊಳಿಸುತ್ತವೆ ಎಂದು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸುವ ಮೊದಲು ಶಾ ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿದ ನಡುವೆ ಈ ಬೆಳವಣಿಗೆಯಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಿಂದ ಒಟ್ಟು 143 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಅದರಲ್ಲಿ 97 ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು. ಅಂದರೆ ಶೇಕಡಾ 68ಕ್ಕಿಂತ ಹೆಚ್ಚು ಪ್ರತಿಪಕ್ಷಗಳ ಸಂಸದರನ್ನು ಅಮಾನತು ಮಾಡಲಾಗಿದೆ.

ಇದಲ್ಲದೆ ಲೋಕಸಭೆಯಿಂದ ಸಂಸದರ ಅಮಾನತಿನ ಬಳಿಕ ತಾತ್ಕಾಲಿಕ ತೆರಿಗೆ ಸಂಗ್ರಹ ಮಸೂದೆ-2023, ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ತಿದ್ದುಪಡಿ) ಮಸೂದೆಯನ್ನು ಕೂಡ ಅಂಗೀಕರಿಸಲಾಗಿದೆ.

ಮೂರು ಕ್ರಿಮಿನಲ್​ ಕಾನೂನು ವಿಧೇಯಕಗಳನ್ನು ಹಿಂಪಡೆದಿದ್ದ ಕೇಂದ್ರ ಸರ್ಕಾರ

ಕಳೆದ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಕೇಂದ್ರವು ಮಂಡಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ವಿಧೇಯಕಗಳನ್ನು ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಸರ್ಕಾರವು ಹಿಂಪಡೆದಿತ್ತು. ಆಗಸ್ಟ್ ತಿಂಗಳಲ್ಲಿ ನಡೆದ ಅಧಿವೇಶನದ ವೇಳೆ 3 ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು. ಹೀಗಾಗಿ ಅವುಗಳನ್ನು ವಾಪಸ್ ಪಡೆದಿದ್ದ ಕೇಂದ್ರ ಸರ್ಕಾರ ಚಳಿಗಾಲದ ಸಂಸತ್‌ ಕಲಾಪದಲ್ಲಿ ಹೊಸದಾಗಿ 3 ವಿಧೇಯಕವನ್ನು ಮಂಡಿಸಿತ್ತು.

ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಮಂಡಿಸಿದ 3 ಕ್ರಿಮಿನಲ್‌ ತಿದ್ದುಪಡಿ ವಿಧೇಯಕಗಳಿಗೆ ಸಂಪುಟ ಅನುಮೋದನೆ ನೀಡಿತ್ತು.  ಲೋಕಸಭೆಯಲ್ಲಿ ವಿಧೇಯಕಗಳನ್ನು ಮಂಡಿಸುವ ಸಂದರ್ಭದಲ್ಲಿ ಅಮಿತ್ ಶಾ ಅವರು ಈ ಮಸೂದೆಗಳ ಉದ್ದೇಶವು ನ್ಯಾಯ ಒದಗಿಸುವುದು, ಶಿಕ್ಷೆಯಲ್ಲ ಎಂದು ಹೇಳಿದ್ದರು.  ಕಳೆದ ವಾರ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 3 ಮಸೂದೆಗಳನ್ನು ಮಂಡಿಸಿದ್ದರು.

ಇದನ್ನು ಓದಿ: ಲೋಕಸಭೆಯಿಂದ ಮತ್ತಿಬ್ಬರು ಸಂಸದರ ಅಮಾನತು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...