Homeಮುಖಪುಟಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ದಂಪತಿಗೆ 3 ವರ್ಷ ಜೈಲು

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಚಿವ ಪೊನ್ಮುಡಿ ದಂಪತಿಗೆ 3 ವರ್ಷ ಜೈಲು

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿಗೆ ಮೂರು ವರ್ಷಗಳ ಸಾಮಾನ್ಯ ಜೈಲು ಶಿಕ್ಷೆ ಮತ್ತು ತಲಾ 50ಲಕ್ಷ ರೂಪಾಯಿ ದಂಡ ವಿಧಿಸಿ ಮದ್ರಾಸ್ ಹೈಕೋರ್ಟ್‌ ಇಂದು(ಡಿ.21) ಆದೇಶಿಸಿದೆ.

ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು ಶರಣಾಗಲು ಅಪರಾಧಿಗಳಿಗೆ 30 ದಿನಗಳ ಕಾಲಾವಕಾಶ ನೀಡಿದ್ದು, ಈ ಅವಧಿಯಲ್ಲಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಬಹುದು ಎಂದು ಹೇಳಿದ್ದಾರೆ.

30 ದಿನದೊಳಗೆ ದಂಪತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಸಾಧ್ಯವಾಗದಿದ್ದರೆ ಸಮಯ ವಿಸ್ತರಿಸುವ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಇದು ಬೇರೆ ಯಾವುದೇ ಸಚಿವರ ಮೇಲಿನ ಅಪರಾಧವಾಗಿದ್ದರೆ ವಿಷಯ ವಿಭಿನ್ನವಾಗಿರುತ್ತಿತ್ತು. ಆದರೆ, ಇದು ಉನ್ನತ ಶಿಕ್ಷಣ ಸಚಿವರ ಪ್ರಕರಣ. ಶಿಕ್ಷಣ ಸಚಿವರ ಅಪರಾಧ ಭವಿಷ್ಯದ ಪೀಳಿಗೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ನ್ಯಾಯಧೀಶರು ಹೇಳಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಪೊನ್ಮುಡಿ ದಂಪತಿ ತಪ್ಪಿತಸ್ಥರು ಎಂದು ಮದ್ರಾಸ್ ಹೈಕೋರ್ಟ್‌ ಮಂಗಳವಾರ ಘೋಷಿಸಿತ್ತು. ತೀರ್ಪು ಕಾಯ್ದಿರಿಸಿತ್ತು.

ಏನಿದು ಪ್ರಕರಣ?

1996ರಿಂದ 2001ರ ವರೆಗಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರದಲ್ಲಿ ಪೊನ್ಮುಡಿ ಅವರು ರಾಜ್ಯ ಸಾರಿಗೆ ಸಚಿವರಾಗಿದ್ದ ಸಂದರ್ಭ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಎಐಎಡಿಎಂಕೆ 2002ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜಾಗೃತ ಹಾಗೂ ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (ಡಿವಿಎಸಿ)ಅವರ ವಿರುದ್ದ ಪ್ರಕರಣ ದಾಖಲಿಸಿತ್ತು.

2015ರಲ್ಲಿ ಪೊನ್ಮುಡಿ ವಿರುದ್ಧ ಆರೋಪ ರೂಪಿಸಲಾಗಿತ್ತು. ವಿಚಾರಣೆಯನ್ನು ವಿಲ್ಲುಪುರಂನಿಂದ ವೆಲ್ಲೂರಿಗೆ ಸ್ಥಳಾಂತರಿಸಲಾಗಿತ್ತು. ಕಳೆದ ಜೂನ್ 28ರಂದು ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಧೀಶೆ ಎನ್ .ವಸಂತಲೀಲಾ ಅವರು ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದರು.

ಆದರೆ, ಮದ್ರಾಸ್ ಹೈಕೋರ್ಟ್‌ ಪೊನ್ಮುಡಿ ದಂಪತಿ ಸೇರಿದಂತೆ ಇತರ ಆರು ಮಂದಿ ರಾಜಕಾರಣಿಗಳ ವಿರುದ್ಧದ ಪ್ರಕರಣಗಳನ್ನು ಸ್ವಯಂ ಪ್ರೇರಿತ ಮರು ಪರಿಶೀಲನೆಗೆ ತೆಗೆದುಕೊಂಡಿತ್ತು.ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪೊನ್ಮುಡಿ ದಂಪತಿಯ ಪ್ರಕರಣದ ವಿಚಾರಣೆ ಆರಂಭಿಸಿದ್ದರು.

ವಿಚಾರಣಾ ನ್ಯಾಯಾಲಯ ಇತ್ಯರ್ಥಪಡಿಸಿದ ಪ್ರಕರಣವನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ವೆಂಕಟೇಶ್ ವಿರುದ್ಧ ಪೊನ್ಮುಡಿ ಮತ್ತು ಅವರ ಪತ್ನಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. “ನಮ್ಮ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಂತಹ ನ್ಯಾಯಾಧೀಶರನ್ನು ಹೊಂದಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು”ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ನವೆಂಬರ್ 5 ರಂದು ಹೇಳಿತ್ತು.

ಬಳಿಕ ನ್ಯಾಯಾಲಯದ ರೋಸ್ಟರ್ ಬದಲಾವಣೆಯ ಕಾರಣ ನ್ಯಾಯಮೂರ್ತಿ ಜಿ.ಜಯಚಂದ್ರ ಅವರು ಈ ಪ್ರಕರಣಗಳ ವಿಚಾರಣೆಯನ್ನು ಮುಂದುವರೆಸಿದ್ದರು. ವಿಚಾರಣೆಗೆ ಪೂರ್ಣಗೊಳಿಸಿ ಮಂಗಳವಾರ ತೀರ್ಪು ಕಾಯ್ದಿರಿಸಿದ್ದರು. ಇಂದು ಪ್ರಕಟಿಸಿದ್ದಾರೆ.

ಎರಡು ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದ ಹಿನ್ನೆಲೆ ಕೆ. ಪೊನ್ಮುಡಿ ಅವರು ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ಇದೆ. ಹಾಗೇನಾದರು ಆದರೆ ಅವರ ಸಚಿವ ಸ್ಥಾನವೂ ಕೈ ತಪ್ಪಲಿದೆ. ಮುಂದೆ ಅವರು ಸುಪ್ರೀಂ ಕೋರ್ಟ್ ಮೊರೆ ಹೋದರೆ ಏನಾಗಲಿದೆ ಎಂಬುವುದು ಕಾದು ನೋಡಬೇಕಿದೆ.

ಇದನ್ನೂ ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...