Homeಮುಖಪುಟ‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

- Advertisement -
- Advertisement -

ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರನ್ನು ಅನುಕರಿಸುವ ವಿಡಿಯೋವನ್ನು ನಾನು ಎಲ್ಲಿಯೂ ಹಂಚಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಸಭೆ ಕಲಾಪದಲ್ಲಿನ ಉಪರಾಷ್ಟ್ರಪತಿಯವರ ನಡೆ-ನುಡಿಯನ್ನು ಅನುಕರಿಸಿದ ಟಿಎಂಸಿ ಸಂಸದರ ವಿರುದ್ಧ ಹಾಗೂ ಅದನ್ನು ಚಿತ್ರೀಕರಿಸಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು.

‘ಯಾರು ಮತ್ತು ಹೇಗೆ ಅವಮಾನಿಸಿದರು?’ ಎಂದು ಮಾಧ್ಯಮಗಳನ್ನು ಪ್ರಶ್ನಿಸಿದ ಅವರು, ‘ಸಂಸದರು ಅಲ್ಲಿ ಕುಳಿತಿದ್ದರು, ನಾನು ಅವರ ವೀಡಿಯೋವನ್ನು ನನ್ನ ಫೋನ್‌ನಲ್ಲಿ ತೆಗೆದುಕೊಂಡಿದ್ದೇನೆ. ಮಾಧ್ಯಮಗಳು ಅದನ್ನು ತೋರಿಸುತ್ತಾ ಟೀಕೆಗಳನ್ನು ಮಾಡುತ್ತಿವೆ. ಮೋದಿಯವರು ಕೂಡ ಹಲವು ಟೀಕೆಗಳನ್ನು ಮಾಡುತ್ತಿದ್ದಾರೆ, ಯಾರೂ ಏನನ್ನೂ ಹೇಳಲಿಲ್ಲ’ ಎಂದು ಅವರು ಹೇಳಿದರು.

‘ನಮ್ಮ ಗೌರವಾನ್ವಿತ ಉಪರಾಷ್ಟ್ರಪತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವಮಾನಿಸಿದ ರೀತಿಯನ್ನು ನೋಡಿ ನಾನು ದಿಗ್ಭ್ರಮೆಗೊಂಡೆ. ಚುನಾಯಿತ ಪ್ರತಿನಿಧಿಗಳು ತಮ್ಮ ಅಭಿವ್ಯಕ್ತಿ ವ್ಯಕ್ತಪಡಿಸಲು ಮುಕ್ತವಾಗಿರಬೇಕು. ಆದರೆ ಅವರ ಅಭಿವ್ಯಕ್ತಿ ಘನತೆ ಮತ್ತು ಸೌಜನ್ಯದ ಮಾನದಂಡಗಳೊಳಗೆ ಇರಬೇಕು. ಅದು ನಾವು ಹೆಮ್ಮೆಪಡುವ ಸಂಸದೀಯ ಸಂಪ್ರದಾಯವಾಗಿದೆ ಮತ್ತು ಭಾರತದ ಜನರು ಅದನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸುತ್ತಾರೆ’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಈ ವಿವಾದದ ಕುರಿತು ಮಾಧ್ಯಮಗಳ ಪಕ್ಷಪಾತದ ವಿರುದ್ಧ ಆಕ್ರೋಶ ಹೊರಹಾಕಿರುವ ರಾಹುಲ್ ಗಾಂಧಿ, ‘ಉಭಯ ಸದನಗಳಿಂದ 150 ಸಂಸದರನ್ನು ಹೊರಹಾಕಲಾಗಿದೆ. ಆ ಬಗ್ಗೆ ಮಾಧ್ಯಮಗಳು ಮಾತನಾಡುತ್ತಲೇ ಇಲ್ಲ. ಅದಾನಿ ಮತ್ತು ರಫೇಲ್ ವಿಷಯಗಳ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ಚರ್ಚೆಯಾಗಿಲ್ಲ’ ಎಂದು ಕಿಡಿಕಾರಿದರು.

‘ಮಾಧ್ಯಮಗಳಲ್ಲಿ ಅದಾನಿ ಮತ್ತು ರಫೇಲ್ ಬಗ್ಗೆ ಯಾವುದೇ ಚರ್ಚೆ ಇಲ್ಲ. ತನಿಖೆಗೆ ಅವಕಾಶ ನೀಡುತ್ತಿಲ್ಲ ಎಂದು ಫ್ರಾನ್ಸ್ ಹೇಳಿದೆ. ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ, ನಿರುದ್ಯೋಗದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಅಮಾನತಾಗಿರುವ ನಮ್ಮ ಸಂಸದರು ದುಃಖಿತರಾಗಿದ್ದಾರೆ. ಅಲ್ಲಿ ಕುಳಿತು ನೀವು ಚರ್ಚಿಸುತ್ತಿದ್ದೀರಿ’ ಎಂದು ಅವರು ಹೇಳಿದರು.

ಗಮನ ಬೇರೆಡೆ ಸೆಳೆಯುತ್ತಿರುವ ಬಿಜೆಪಿ:

ಡಿ.13, 22ರಂದು ಲೋಕಸಭೆಗೆ ಇಬ್ಬರು ನುಸುಳುಕೋರರ ಪ್ರವೇಶವನ್ನು ಬಿಜೆಪಿ ಸಂಸದರೊಬ್ಬರು ಹೇಗೆ ಸುಗಮಗೊಳಿಸಿದರು ಎಂಬ ಬಗ್ಗೆ ಗಮನ ಬೇರೆಡೆ ಸೆಳೆಯಲು ‘ಮಿಮಿಕ್ರಿ ಅಲ್ಲದ ವಿಷಯ’ವನ್ನು ಬಿಜೆಪಿ ವಿವಾದ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಮಿಮಿಕ್ರಿ ಅಲ್ಲದ ವಿಷಯವನ್ನು ವಿವಾದ ಮಾಡಲು ಇಡೀ ಮೋದಿ ಪರಿಸರ ವ್ಯವಸ್ಥೆಯು ಉತ್ಸಾಹಭರಿತವಾಗಿದೆ. ಆದರೆ, ಮೈಸೂರಿನ ಬಿಜೆಪಿ ಸಂಸದರೊಬ್ಬರು ಏಕೆ ಮತ್ತು ಹೇಗೆ ಲೋಕಸಭೆಗೆ ಇಬ್ಬರು ನುಸುಳುಕೋರರು ಪ್ರವೇಶವನ್ನು ಸುಗಮಗೊಳಿಸಿದರು ಎಂಬ ನೈಜ ವಿಷಯದ ಬಗ್ಗೆ ಮೌನವಾಗಿದೆ. ಈಗ ಅವರ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ’ ಎಂದು ಹೇಳಿದ್ದಾರೆ.

‘ಸಂಪೂರ್ಣ ನ್ಯಾಯಸಮ್ಮತ ಬೇಡಿಕೆಗಾಗಿ 142 ಸಂಸದರ ಅಮಾನತು ಕುರಿತು ಅವರ ಇಡೀ ಪರಿಸರ ವ್ಯವಸ್ಥೆಯು ಮೌನವಾಗಿದೆ. ಬುಧವಾರ ಮತ್ತೆ ಇಬ್ಬರು ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಒಟ್ಟು ಸಂಖ್ಯೆ 143ಕ್ಕೆ ಏರಿಕೆಯಾಗಿದೆ’ ಎಂದು ಹೇಳಿದ್ದಾರೆ.

ತನ್ನ ಕುರಿತು ಅನುಕರಣೆ ಮಾಡಿದ ಕುರಿತು ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಧನ್ಖರ್, ‘ಸೆರಾಂಪೋರ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮಿಮಿಕ್ರಿ ಮತ್ತು ರಾಹುಲ್ ಗಾಂಧಿ ಅವರ ಚಿತ್ರೀಕರಣವು ರೈತರು ಮತ್ತು ಜಾಟ್ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ’ ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರನ್ನು ಉದ್ದೇಶಿಸಿ ಮಾತನಾಡಿದ ಧನ್ಖರ್, ‘ಚಿದಂಬರಂ ನೀವು ತುಂಬಾ ಹಿರಿಯ ಸದಸ್ಯರು. ನಿಮ್ಮ ಪಕ್ಷದ ಹಿರಿಯ ನಾಯಕ, ಸಂಸದರೊಬ್ಬರು ನನ್ನನ್ನು ಗೇಲಿ ಮಾಡುವ ಕೃತ್ಯವನ್ನು ಚಿತ್ರೀಕರಿಸಿದಾಗ ನನಗೆ ಏನನಿಸಿತು ಎಂದು ಊಹಿಸಿ. ಇದು ಕೇವಲ ರೈತ ಅಥವಾ ಸಮುದಾಯದ ಅವಮಾನವಲ್ಲ, ಇದು ರಾಜ್ಯಸಭಾ ಅಧ್ಯಕ್ಷ ಸ್ಥಾನಕ್ಕೆ ಅಗೌರವ. ಅದೂ ಕೂಡ ದೇಶವನ್ನು ದೀರ್ಘಕಾಲ ಆಳಿದ ಪಕ್ಷದಿಂದ ನನಗೆ ತುಂಬಾ ನೋವಾಗಿದೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ; ವಿಪಕ್ಷಗಳ 143 ಸಂಸದರ ಅಮಾನತು ಖಂಡಿಸಿ ‘ಇಂಡಿಯಾ’ ಒಕ್ಕೂಟದಿಂದ ನಾಳೆ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...