Homeಮುಖಪುಟಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

ಕಾಂಗ್ರೆಸ್ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ: ವರದಿ

- Advertisement -
- Advertisement -

ಅನಾವರಣಗೊಂಡ ಎರಡು ದಿನಗಳೊಳಗೆ ಕಾಂಗ್ರೆಸ್‌ನ ದೇಣಿಗೆ ಸಂಗ್ರಹ ವೆಬ್‌ಸೈಟ್‌ಗೆ 20,400 ಬಾರಿ ಸೈಬರ್ ದಾಳಿ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ವೆಬ್‌ಸೈಟ್‌ನಿಂದ ಮಾಹಿತಿ ಕದಿಯಲು ಮತ್ತು ಅದನ್ನು ನಿಧಾನಗೊಳಿಸಲು (ಸರ್ವರ್ ಡೌನ್‌) ಸೈಬರ್ ದಾಳಿಕೋರರು ವಿಫಲ ಯತ್ನ ಮಾಡಿದ್ದಾರೆ. ಈ ನಡುವೆಯೂ ವೆಬ್‌ಸೈಟ್‌ ಮೂಲಕ 1.13 ಲಕ್ಷ ಜನರಿಂದ ₹2.81 ಕೋಟಿ ದೇಣಿಗೆ ಸಂಗ್ರಹಿಸಲಾಗಿದೆ ಎಂದು ವರದಿ ಹೇಳಿದೆ.

ಬುಧವಾರ ಬೆಳಗ್ಗೆ 9 ಗಂಟೆಯವರೆಗೆ ಒಟ್ಟು 1,13,713 ದಾನಿಗಳು ದೇಣಿಗೆ ನೀಡಿದ್ದಾರೆ. ಈ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ಸೇರಿದಂತೆ 32 ಜನರಿಂದ ₹1 ಲಕ್ಷಕ್ಕಿಂತ ಹೆಚ್ಚು ದೇಣಿಗೆ ಬಂದಿದೆ. 612 ಮಂದಿ ₹13,800 ರೂ.ಗಿಂತ ಹೆಚ್ಚು ದೇಣಿಗೆ ನೀಡಿದ್ದಾರೆ.

ಕಳೆದ ಸೋಮವಾರ ‘ದೇಶಕ್ಕಾಗಿ ದೇಣಿಗೆ’ ಅಭಿಯಾನದ ಅಂಗವಾಗಿ ಕಾಂಗ್ರೆಸ್ ತನ್ನ ವೆಬ್‌ಸೈಟ್‌ ಅನಾವರಣಗೊಳಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ₹1.38 ಲಕ್ಷ ದೇಣಿಗೆ ನೀಡಿದ್ದಾರೆ.

ಇದುವರೆಗೆ ಸಂಗ್ರಹವಾದ ಒಟ್ಟು ₹2.81 ಕೋಟಿಯಲ್ಲಿ ಮಹಾರಾಷ್ಟ್ರದಿಂದ ಗರಿಷ್ಟ ₹56 ಲಕ್ಷ ಸಂಗ್ರಹವಾಗಿದೆ. ನಂತರದ ಸ್ಥಾನದಲ್ಲಿ ರಾಜಸ್ಥಾನದಿಂದ ₹26 ಲಕ್ಷ, ದೆಹಲಿಯಿಂದ ₹20 ಲಕ್ಷ, ಉತ್ತರ ಪ್ರದೇಶದಿಂದ ₹19 ಲಕ್ಷ ಮತ್ತು ಕರ್ನಾಟಕದಿಂದ ₹18 ಲಕ್ಷ ಸಂಗ್ರಹವಾಗಿದೆ.

ದೇಣಿಗೆ ಸಂಗ್ರಹದ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ದೇಣಿಗೆಯ ಪ್ರಮಾಣದಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನದಲ್ಲಿದ್ದರೂ, ಬಿಹಾರದಿಂದ ಹೆಚ್ಚಿನ ಸಂಖ್ಯೆಯ ದಾನಿಗಳು ದೇಣಿಗೆ ನೀಡಿದ್ದಾರೆ. ಇದು ಹೆಚ್ಚಿನ ಸಂಖ್ಯೆಯ ಜನರು ನಮ್ಮೊಂದಿಗೆ ಬೆರೆಯಲು ಸಿದ್ಧರಿದ್ದಾರೆಂದು ತೋರಿಸುತ್ತದೆ ಎಂದು ಹೇಳಿದ್ದಾಗಿ ವರದಿ ತಿಳಿಸಿದೆ.

ದೇಣಿಗೆ ಸಂಗ್ರಹ ವೆಬ್‌ಸೈಟ್‌ www.donateinc.inಗೆ ಕಳೆದ 48 ಗಂಟೆಗಳಲ್ಲಿ ₹1.2 ಕೋಟಿ ಜನರು ಭೇಟಿ ನೀಡಿದ್ದಾರೆ. ಈ ನಡುವೆ 20,400 ಸೈಬರ್ ದಾಳಿಗಳು ನಡೆದಿವೆ. ಇದರಲ್ಲಿ 1,340 ಜನರು ಸೈಟ್‌ನಿಂದ ಮಾಹಿತಿ ಕದಿಯಲು ಪ್ರಯತ್ನಿಸಿದ್ದಾರೆ. ಉಳಿದವರು ವೆಬ್‌ಸೈಟ್‌ ನಿಧಾನಗೊಳಿಸಲು ವಿಫಲ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ದೇಣಿಗೆ ಪಾವತಿ ವಿಧಾನದ ವಿಶ್ಲೇಷಣೆ ನೋಡುವುದಾದರೆ, ಶೇ.81ರಷ್ಟು ದಾನಿಗಳು ಪಾವತಿ ಮಾಡಲು ಯುಪಿಐ ಬಳಸಿದ್ದಾರೆ. ಶೇ.7.95 ರಷ್ಟು ಜನರು ಕ್ರೆಡಿಟ್ ಕಾರ್ಡ್‌, ಶೇ.6.34ರಷ್ಟು ಜನರು ಡೆಬಿಟ್ ಕಾರ್ಡ್‌, ಶೇ.4.78ರಷ್ಟು ಜನರು ನೆಟ್ ಬ್ಯಾಂಕಿಂಗ್ ಮತ್ತು ಶೇ.0.02 ಜನರು RTGS-NEFT ಬಳಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :‘ಯಾರು ಹೇಗೆ ಅವಮಾನಿಸಿದರು….?’ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...