Homeಮುಖಪುಟಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಲೋಕಸಭೆಯಿಂದ ಬಹುಪಾಲು ಪ್ರತಿಪಕ್ಷಗಳ ಸದಸ್ಯರು ಅಮಾನತುಗೊಂಡ ಬೆನ್ನಲ್ಲಿ ಇದೀಗ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕುರಿತ ಮಸೂದೆ-2023ನ್ನು ಅಂಗೀಕರಿಸಲಾಗಿದೆ.

ವಿವಾದಾತ್ಮಕ ಈ ಮಸೂದೆ ಮೊದಲು ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ಇದೀಗ ಮಸೂದೆಗೆ ರಾಷ್ಟ್ರಪತಿಗಳ ಸಹಿ ಮಾತ್ರ ಬಾಕಿ ಉಳಿದಿದೆ.

ಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿತ್ತು.

ಈ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆ.10 ರಂದು ಈ ಮಸೂದೆಯನ್ನು ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯ ಸಭೆಯಲ್ಲಿ ಮಂಡಿಸಿದ್ದರು. ಸಂಸತ್ತಿನ ಮೇಲ್ಮನೆಯಲ್ಲಿ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ಸದನತ್ಯಾಗ ಮಾಡಿದ್ದವು. ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ  ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿದ್ದವು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯ ಭಾರತದ ಮುಖ್ಯ ನ್ಯಾಯಮೂರ್ತಿ ಹೊರಕ್ಕೆ!  

ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡಿಸಿ ಕಾನೂನು ರೂಪಿಸಲು ಮುಂದಾಗಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...