Homeಮುಖಪುಟನಿರ್ಲಕ್ಷ್ಯದ ಸಾವು: ವೈದ್ಯರ ಶಿಕ್ಷೆ ಪ್ರಮಾಣ ಕಡಿತಗೊಳಿಸಲಿದೆ ಹೊಸ ಕ್ರಿಮಿನಲ್ ಕಾನೂನು

ನಿರ್ಲಕ್ಷ್ಯದ ಸಾವು: ವೈದ್ಯರ ಶಿಕ್ಷೆ ಪ್ರಮಾಣ ಕಡಿತಗೊಳಿಸಲಿದೆ ಹೊಸ ಕ್ರಿಮಿನಲ್ ಕಾನೂನು

- Advertisement -
- Advertisement -

ಚಿಕಿತ್ಸೆ ವೇಳೆ ನಿರ್ಲಕ್ಷ್ಯದಿಂದ ರೋಗಿಯ ಸಾವು ಸಂಭವಿಸಿದರೆ ವೈದ್ಯರಿಗೆ ನೀಡುವ ಶಿಕ್ಷೆ ಪ್ರಮಾಣವನ್ನು ಕಡಿತಗೊಳಿಸುವ ಅಂಶ ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡ ಭಾರತೀಯ ನ್ಯಾಯ(ಎರಡನೆಯ) ಸಂಹಿತೆ ಒಳಗೊಂಡಿದೆ.

ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿಯು ಸಾವನ್ನಪ್ಪಿದ್ದರೆ ತಪ್ಪಿತಸ್ಥರಿಗೆ ವಿಧಿಸುವ ಶಿಕ್ಷೆ ಪ್ರಮಾಣವನ್ನು 5 ವರ್ಷಗಳ ಜೈಲುವಾಸಕ್ಕೆ ಹೆಚ್ಚಿಸಿದರೆ, ಅಂತಹ ಮರಣವು ವೈದ್ಯರಿಂದ ಸಂಭವಿಸಿದರೆ ವಿಧಿಸುವ ಶಿಕ್ಷೆ ಪ್ರಮಾಣವನ್ನು 2 ವರ್ಷಗಳ ಜೈಲು ಶಿಕ್ಷೆಗೆ ಸೀಮಿತಗೊಳಿಸಲಾಗಿದೆ.

ಪ್ರಸ್ತುತ ಇರುವ ಭಾರತೀಯ ದಂಡ ಸಂಹಿತೆ (ಐಪಿಸಿ) ಕಾನೂನಿನ ಸೆಕ್ಷನ್ 304ಎ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದರೆ ತಪ್ಪಿತಸ್ಥರಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು. ಸೆಕ್ಷನ್ 304ಎ ಐಪಿಸಿಯಲ್ಲಿ ವೈದ್ಯರಿಗೆ ಮತ್ತು ಇತರ ವೈದ್ಯಕೀಯ ಸಿಬ್ಬಂದಿಗೆ ವಿಧಿಸುವ ಶಿಕ್ಷೆ ಪ್ರಮಾಣದಲ್ಲಿ ಪ್ರತ್ಯೇಕ ವರ್ಗೀಕರಣವಿಲ್ಲ. ಆದರೆ, ಹೊಸ ನ್ಯಾಯ ಸಂಹಿತೆ ವೈದ್ಯರು ಮತ್ತು ಇತರರಿಂದ ಸಂಭವಿಸುವ ಸಾವುಗಳು ಎಂಬ ಎರಡು ವರ್ಗೀಕರಣ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಪ್ರಕಾರ, ನಿರ್ಲಕ್ಷ್ಯದಿಂದ ರೋಗಿ ಸಾವನ್ನಪ್ಪಿದರೆ ನೀಡಲಾಗುವ ಗರಿಷ್ಠ ಶಿಕ್ಷೆಯನ್ನು 2 ವರ್ಷಗಳ ಜೈಲು ಶಿಕ್ಷೆಯಿಂದ 5 ವರ್ಷಗಳ ಜೈಲು ಶಿಕ್ಷೆಗೆ ಹೆಚ್ಚಿಸಲಾಗಿದೆ. ಆದರೆ, ವೈದ್ಯರಿಗೆ ಗರಿಷ್ಠ ಶಿಕ್ಷೆ 2 ವರ್ಷಗಳ ಜೈಲುವಾಸಕ್ಕೆ ಮಿತಿಗೊಳಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದ ಸಾವಿನ ಪ್ರಕರಣಗಳಲ್ಲಿ ವೈದ್ಯರಿಗೆ ದಂಡವನ್ನೂ ವಿಧಿಸಬಹುದು.

ಚಳಿಗಾಲದ ಅಧಿವೇಶನದದಲ್ಲಿ ಪರಿಚಯಿಸಲಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತೆಯ ಆರಂಭಿಕ ಆವೃತ್ತಿಯಲ್ಲಿ ವೈದ್ಯರಿಗೆ ಸಂಬಂಧಿಸಿದಂತೆ ನೀಡುವ ಶಿಕ್ಷೆಯಲ್ಲಿ ಯಾವುದೇ ವರ್ಗೀಕರಣವಿರಲಿಲ್ಲ. ಬಳಿಕ ಭಾರತೀಯ ವೈದ್ಯಕೀಯ ಸಂಘದ ಮನವಿಯನ್ನು ಪರಿಗಣಿಸಿ ತಿದ್ದುಪಡಿ ತರಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೊಸ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರಲ್ಲಿ ‘ಹಿಟ್ ಅಂಡ್ ರನ್’ ಪ್ರಕರಣಗಳಿಗೂ ಕಠಿಣ ಶಿಕ್ಷೆಯನ್ನು ಸೂಚಿಸಲಾಗಿದೆ. ವಾಹನ ಚಾಲಕ ಅತಿವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯ ಸಾವಿಗೆ ಕಾರಣವಾದರೆ ಮತ್ತು ಅದನ್ನು ಪೊಲೀಸ್ ಅಥವಾ ಮ್ಯಾಜಿಸ್ಟ್ರೇಟ್‌ಗೆ ವರದಿ ಮಾಡದೆ ಪರಾರಿಯಾದರೆ, ಅಂತವರು ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಲಿದ್ದಾರೆ.

ಮೂರು ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಈ ಮೂರು ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ(IPC) ರದ್ದಾಗಲಿದೆ.

ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನುಗಳಡಿ ಗುಂಪು ಹತ್ಯೆಯ ಅಪರಾಧಕ್ಕೆ ಮರಣದಂಡನೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...