Homeಮುಖಪುಟ4 ವರ್ಷದೊಳಗಿನ ಮಕ್ಕಳಿಗೆ ಶೀತ ನಿವಾರಕ ಔಷಧದ ಮಿಶ್ರಣ ನೀಡಬೇಡಿ: CDSCO

4 ವರ್ಷದೊಳಗಿನ ಮಕ್ಕಳಿಗೆ ಶೀತ ನಿವಾರಕ ಔಷಧದ ಮಿಶ್ರಣ ನೀಡಬೇಡಿ: CDSCO

- Advertisement -
- Advertisement -

ಭಾರತೀಯ ಔಷಧ ನಿಯಂತ್ರಕ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಶಿಶುಗಳು ಮತ್ತು 4 ವರ್ಷದೊಳಗಿನ ಮಕ್ಕಳಿಗೆ ವ್ಯಾಪಕವಾಗಿ ಬಳಸುವ ಶೀತ ನಿವಾರಕ ಕಾಕ್ಟೈಲ್ ಮೆಡಿಸಿನ್  ಮಿಶ್ರಣವನ್ನು ನೀಡದಂತೆ ನಿಷೇಧಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ರಾಜ್ಯದ ಡ್ರಗ್ ಕಂಟ್ರೋಲರ್‌ಗಳಿಗೆ ತಮ್ಮ ವ್ಯಾಪ್ತಿಯಲ್ಲಿರುವ ತಯಾರಕರಿಗೆ ಈ ಕುರಿತು ಮಹತ್ವದ ಸೂಚನೆಯನ್ನು ನೀಡಿದೆ. ಜೂನ್‌ನಲ್ಲಿ ತಜ್ಞರ ಸಮಿತಿ ನೀಡಿದ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದ ಡ್ರಗ್ ಕಂಟ್ರೋಲರ್ ಜನರಲ್ ಮತ್ತು ಸಿಡಿಎಸ್‌ಸಿಒ ಮುಖ್ಯಸ್ಥ ಡಾ ರಾಜೀವ್ ಸಿಂಗ್ ರಘುವಂಶಿ ಹೇಳಿದ್ದಾರೆ.

ಶೀತ ವಿರೋಧಿ ಔಷಧದಲ್ಲಿ ಕ್ಲೋರ್ಫೆನಿರಮೈನ್ ಮೆಲೇಟ್ ಮತ್ತು ಫೀನೈಲ್ಫ್ರಿನ್ ಹೈಡ್ರೋಕ್ಲೋರೈಡ್‌ನ ‘ಫಿಕ್ಸೆಡ್-ಡೋಸ್  (ಎಫ್‌ಡಿಸಿ) ಬಳಸಲಾಗುತ್ತದೆ. ರಾಯಿಟರ್ಸ್ ಪ್ರಕಾರ, ಸಾಮಾನ್ಯ ಶೀತ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಲು ಎಫ್‌ಡಿಸಿಯನ್ನು ಸಿರಪ್‌ಗಳು ಮತ್ತು ಟ್ಯಾಬ್ಲೆಟ್‌ಗಳಲ್ಲಿ ಬಳಸಲಾಗುತ್ತದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಅಪೆಕ್ಸ್ ಹೆಲ್ತ್ ರೆಗ್ಯುಲೇಟರಿ ಏಜೆನ್ಸಿಯು ಕ್ಲೋರ್‌ಫೆನಿರಮೈನ್ ಮಲೇಟ್ ಐಪಿ 2ಎಂಜಿ ಮತ್ತು ಫೆನೈಲ್‌ಫ್ರಿನ್ ಎಚ್‌ಸಿಐ ಐಪಿ 5ಎಂಜಿ ಡ್ರಾಪ್ಸ್‌ನ ಸ್ಥಿರ ಔಷಧ ಸಂಯೋಜನೆಯ ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಈ ಮಿಶ್ರಣವು  ಶಿಶುಗಳಿಗೆ ಅನುಮೋದಿತವಲ್ಲ ಎಂದು ಹೇಳಿದೆ.

ಭಾರತದಲ್ಲಿ ತಯಾರಿಸಲಾದ ಕೆಮ್ಮುವಿನ ಸಿರಪ್‌ಗಳ ಸೇವನೆ ಬಳಿಕ ವಿದೇಶದಲ್ಲಿ ಮಕ್ಕಳ ಸಾವುಗಳು ವರದಿ ಬಳಿಕ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ಗಳು ಪರಿಶೀಲನೆಗೆ ಒಳಪಟ್ಟಿವೆ. 2022ರಲ್ಲಿ ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್‌ನಲ್ಲಿ 141 ಮಕ್ಕಳ ಸಾವುಗಳು ಭಾರತದಲ್ಲಿ ತಯಾರಿಸಿದ ಕೆಮ್ಮು ಸಿರಪ್‌ಗಳಿಗೆ ಸಂಬಂಧಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು.

ಪಶ್ಚಿಮ ಆಫ್ರಿಕಾದ ಗ್ಯಾಂಬಿಯಾದಲ್ಲಿ, ಭಾರತೀಯ ಫಾರ್ಮಾಸ್ಯುಟಿಕಲ್ ಕಂಪನಿಯು ತಯಾರಿಸಿದ ಡಿಕೊಂಜೆಸ್ಟೆಂಟ್ ಮತ್ತು ಕೆಮ್ಮಿನ ಸಿರಪ್ ಕುಡಿದು 66 ಮಕ್ಕಳು ಸಾವನ್ನಪ್ಪಿದ್ದರು. ಆ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಈ ಸಿರಪ್‌ಗಳನ್ನು ಬಳಸದಂತೆ ಎಚ್ಚರಿಕೆಯನ್ನು ನೀಡಿದೆ. ಈ ಬಗ್ಗೆ ದೆಹಲಿಯಲ್ಲಿರುವ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ತನಿಖೆಗೆ ಆದೇಶಿಸಿತ್ತು.

ಈ ಡ್ರಗ್ಸ್‌ನ್ನು ಹರ್ಯಾಣದ ಸೋನಿಪತ್‌ನಲ್ಲಿರುವ ಮೇಡನ್ ಫಾರ್ಮಾಸ್ಯುಟಿಕಲ್ ಲಿಮಿಟೆಡ್ ಕಂಪನಿಯಲ್ಲಿ ತಯಾರಿಸಲಾಗುತ್ತಿತ್ತು. ಇದನ್ನು ಸೇವಿಸಿದ ಪರಿಣಾಮ ಭಾರೀ ಪ್ರಮಾಣದಲ್ಲಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ಔಷಧಿ ಸೇವಿಸಿದ ಮಕ್ಕಳು ಮೂತ್ರಪಿಂಡದ ಹಾನಿ ಸಮಸ್ಯೆಯಿಂದ ಪ್ರಾಣ ಬಿಟ್ಟಿದ್ದರು ಎನ್ನಲಾಗಿತ್ತು.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...