Homeಮುಖಪುಟಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

- Advertisement -
- Advertisement -

ಡಿಸೆಂಬರ್ 13ರಂದು ಲೋಕಸಭೆಯಲ್ಲಿ ಸಂಭವಿಸಿದ ಭಾರಿ ಭದ್ರತಾ ಉಲ್ಲಂಘನೆ ನಂತರ ಎಚ್ಚೆತ್ತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ದೆಹಲಿ ಪೊಲೀಸರ ಜತೆಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ರಕ್ಷಣೆಗೆ ನಿಯೋಜಿಸಲು ಮುಂದಾಗಿದೆ.

ದೆಹಲಿ ಪೊಲೀಸರ ಬದಲಿಗೆ ಸಿಐಎಸ್ಎಫ್ ಅನ್ನು ಸಂಸತ್ ಉಸ್ತುವಾರಿ ಏಜೆನ್ಸಿಯಾಗಿ ಬದಲಾಯಿಸಲಾಗುತ್ತಿದ್ದು, ಆವರಣ ಪ್ರವೇಶಿಸುವ ಪ್ರತಿಯೊಬ್ಬರನ್ನು ಪರೀಕ್ಷಿಸುವುದು ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಈ ತಂಡ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವಾಲಯ ಬುಧವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಕಟ್ಟಡದೊಳಗಿನ ಭದ್ರತೆಯು ಲೋಕಸಭೆಯ ಸಚಿವಾಲಯದ ಜವಾಬ್ದಾರಿಯಾಗಿ ಮುಂದುವರಿಯುತ್ತದೆ. ಆದರೆ, ಹೊರಗಿನ ರಕ್ಷಣಾ ಪರಿಧಿಯನ್ನು ಪೊಲೀಸರು ಮುಂದುವರಿಸುತ್ತಾರೆ. ವಿಭಿನ್ನ ಏಜೆನ್ಸಿಗಳು ಪರಸ್ಪರರ ಸಹಕಾರ ನೀಡುವ ಮೂಲಕ ಪ್ರೋಟೋಕಾಲ್‌ಗಳನ್ನು ಸುವ್ಯವಸ್ಥಿತಗೊಳಿಸುವ ಪ್ರಯತ್ನವೆಂದು ಈ ಬದಲಾವಣೆಯನ್ನು ಪರಿಗಣಿಸಲಾಗಿದ್ದು, ಗೃಹ ಸಚಿವಾಲಯದ ಆದೇಶದ ವಿವರ ‘ಭದ್ರತಾ ಸ್ವೀಪ್’ ನಂತರ ಇದನ್ನು ಜಾರಿಗೊಳಿಸಲಾಗುವುದು ಎನ್ನಲಾಗಿದೆ.

ಸಿಐಎಸ್ಎಫ್, ದೇಶದ ಸೂಕ್ಷ್ಮ ಸಾರ್ವಜನಿಕ ವಲಯದ ಉದ್ಯಮಗಳಿಗೆ ಸಮಗ್ರ ಭದ್ರತಾ ರಕ್ಷಣೆ ಒದಗಿಸುತ್ತದೆ. ಪ್ರಸ್ತುತ ವಿಮಾನ ನಿಲ್ದಾಣಗಳು, ಬಂದರುಗಳು, ಪ್ರಮುಖ ಐಟಿ ಕಾರಿಡಾರ್‌ಗಳು ಮತ್ತು ಪರಮಾಣು ಘಟಕಗಳು ಒಳಗೊಂಡಂತೆ 350ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾವಲು ಕಾಯುತ್ತಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪ್ರವೇಶ ಪಾಸ್‌ಗಳ ಮೂಲಕ ಇಬ್ಬರು ಯುವಕರು, ಡಿಸೆಂಬರ್ 13 ರಂದು ಲೋಕಸಭೆಯ ಸಂದರ್ಶಕರ ಗ್ಯಾಲರಿ ಮೂಲಕ ಸದನ ಪ್ರವೇಶಿಸಿದ್ದರು. ಜತೆಗೆ, ಕೆಳ ಮನೆಯಲ್ಲಿ ಹಳದಿ ಹೊಗೆ ಡಬ್ಬಿಗಳನ್ನು ಹಾಕಿ ಸಂಸತ್ ಸದಸ್ಯರಿಗೆ ಆತಂಕ ಉಂಟು ಮಾಡಿದ್ದರು. ಉಳಿದ ಒಬ್ಬ ಪುರುಷ ಮತ್ತು ಮಹಿಳೆ ಸಂಸತ್ತಿನ ಹೊರಗಡೆ ಕೆಂಪು ಮತ್ತು ಹಳದಿ ಹೊಗೆ ಕ್ಯಾನ್‌ಗಳನ್ನು ಸ್ಪೋಟಿಸಿದ್ದರು.
ಉತ್ತರ ಪ್ರದೇಶದ ಸಾಗರ್ ಶರ್ಮಾ ಮತ್ತು ಕರ್ನಾಟಕದ ಡಿ. ಮನೋರಂಜನ್ ಲೋಕಸಭೆಯ ಒಳಗೆ ಪ್ರವೇಶಿಸಿ ಹಳದಿ ಹೊಗೆ ಡಬ್ಬಗಳನ್ನು ಸ್ಟೋಟಿಸಿದ್ದರು.

ಈಗಾಗಲೇ ಘಟನೆ ಸಂಬಂಧ ಏಳಕ್ಕೂ ಹೆಚ್ಚು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆಪಾದಿತ ಮಾಸ್ಟರ್ ಮೈಂಡ್ ಸೇರಿದಂತೆ ಇನ್ನಿಬ್ಬರು ಸಹ ಬಂಧನದಲ್ಲಿದ್ದಾರೆ. ಆದರೆ, ಇಡೀ ಘಟನೆಯು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಉತ್ತರ ಕೊಡಬೇಕು ಎಂದು ಪ್ರತಿಪಕ್ಷಗಳು ಉಭಯ ಸದನಗಳಲ್ಲಿ ಧರಣಿ ನಡೆಸುತ್ತಿದ್ದು, 140ಕ್ಕೂ ಹೆಚ್ಚು ಸಂಸದರು ಈ ಗದ್ದಲದ ಕಾರಣಕ್ಕಾಗಿ ಚಳಿಗಾಲ ಅಧಿವೇಶನದಿಂದ ಅಮಾನತಾಗಿದ್ದಾರೆ.

ಇದನ್ನೂ ಓದಿ; ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...