Homeಕರ್ನಾಟಕಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕ್ರಮ: RSS ಗಾಗಿ ಪರೀಕ್ಷೆ ದಿನಾಂಕಗಳೇ ಅದಲು ಬದಲು..

- Advertisement -
- Advertisement -

“ರಾಜಕೀಯ ಪಕ್ಷವಾದ BJP ಶಾಲಾ ಕಾಲೇಜುಗಳಲ್ಲಿ ಮೋದಿಯವರ ಹುಟ್ಟುಹಬ್ಬವನ್ನು ಆಚರಣೆ ಮಾಡಬಹುದೆ? ಇಂತಹ ಮೂರು ಬಿಟ್ಟವರ ಕೆಲಸವನ್ನು BJP ಮಾಡುತ್ತಿದೆ. ನಮ್ಮೂರಿನ ಹೈಸ್ಕೂಲಿನ ಶಾಲಾ ವಿದ್ಯಾರ್ಥಿಗಳನ್ನು ಹೀಗೆ ರಾಜಕೀಯ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲು ಯಾರು ಇವರಿಗೆ ಅನುಮತಿ ಕೊಟ್ಟವರು?

ಪಕ್ಷದ ಚಿಹ್ನೆಗಳನ್ನು ಬಳಸಿಕೊಂಡು, ರಾಜಕೀಯ ನಾಯಕರನ್ನು ಸೇರಿಸಿಕೊಂಡು ಶಾಲಾ ಅವಧಿಯಲ್ಲಿ ಹೀಗೆ ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಇದು ಮಕ್ಕಳ ಬೆಳವಣಿಗೆ ಮೇಲೆ ಪ್ರಭಾವ ಬೀರುವುದಿಲ್ಲವೇ? ನಾಳೆ ಕಾಂಗ್ರೆಸ್, ನಾಳಿದ್ದು ಜೆ‌.ಡಿ.ಎಸ್ ಕಾರ್ಯಕ್ರಮ ಮಾಡುತ್ತೇವೆ ಎಂದರೆ ಶಾಲಾ ಮುಖ್ಯಸ್ಥರು ಅನುಮತಿ ಕೊಡುತ್ತಾರಾ? ತಾಲ್ಲೂಕಿನ ಶಿಕ್ಷಣಾಧಿಕಾರಿಗಳು ಮಲಗಿದ್ದಾರೆಯೇ? ಚೇ.. ನಾಚಿಕೆ ಆಗುತ್ತಿದೆ ಎಂಬಂತಹ ವಾಟ್ಸಾಪ್ ಸಂದೇಶವೊಂದು ವೈರಲ್ ಆಗಿದೆ. ಜೊತೆಗೆ ಕಾರ್ಯಕ್ರಮದ ಫೋಟೊಗಳು ಹರಿದಾಡುತ್ತಿವೆ.

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಜೆಪಿ ಮುಖಂಡರು ತಮ್ಮ ಪಕ್ಷದ ಬ್ಯಾನರ್ ಹಾಕಿ ಮೋದಿ ಜನ್ಮದಿನಾಚರಣೆ ಕಾರ್ಯಕ್ರಮ ಮಾಡಿದ್ದಾರೆ. ಭಾಷಣಗಳನ್ನು ಸಹ ಮಾಡಿದ್ದಲ್ಲದೇ, ಮೋದಿಯವರ ಬಗ್ಗೆ ವಿದ್ಯಾರ್ಥಿಗಳಿಂದಲೂ ಮಾತಾಡಿದ್ದಾರೆ. ಈ ಕುರಿತು ಅದೇ ಊರಿನ ಬಹಳಷ್ಟು ಜನರು ಕಾರ್ಯಕ್ರಮದ ಬಗ್ಗೆ ಅಪಸ್ವರ ಎತ್ತಿದ್ದಾರೆ.

ನರೇಂದ್ರ ಮೋದಿಯವರು ನಮ್ಮ ದೇಶದ ಪ್ರಧಾನಿಗಳು. ಅವರಿಗೆ ನಾವು ಗೌರವಿಸುವ, ಶುಭ ಹಾರೈಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಅದು ಖಾಸಗಿಯಾಗಿರಬೇಕೆ ಹೊರತು ಸಾರ್ವಜನಿಕವಾಗಿರಬಾರದು. ಅದರಲ್ಲೂ ಶಾಲಾ ಕಾಲೇಜುಗಳು ಪಕ್ಷರಾಜಕೀಯ ಮುಕ್ತ ಕಲಿಕೆಯ ತಾಣಗಳು. ಅಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯಕ್ರಮ ಮಾಡುವುದು ಯಾವುದೇ ಕಾರಣಕ್ಕೂ ಸರಿಯಲ್ಲ. ಇಂತಹ ಕನಿಷ್ಠ ಸಾಮಾನ್ಯ ಜ್ಞಾನವೂ ಬಿಜೆಪಿಗಿಲ್ಲವೇ? ಅಥವಾ ಗೊತ್ತಿದ್ದೂ ಸಹ ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ನಮ್ಮ ಸರಕಾರವೇ ಇದೆ ಎಂಬ ಅಹಂಕಾರದಿಂದ ಹೀಗೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳು ಎದ್ದಿವೆ.

ಇದೊಂದು ಕೆಟ್ಟ ಮಾದರಿಯಾಗಿದ್ದು, ತೀರಾ ರಾಜಕೀಯ ಲಾಭಕ್ಕಾಗಿ ನಡೆಸಿದ ಕುತಂತ್ರದಂತೆ ಕಾಣುತ್ತಿದೆ. ಬೆಳೆಯುವ ಮಕ್ಕಳ ಮನಸ್ಸಿನಲ್ಲಿ ಯಾವುದೇ ಪಕ್ಷದ ಸಿದ್ಧಾಂತವನ್ನು ತುರುಕುವುದು ಅಕ್ಷಮ್ಯ ಅಪರಾಧ.. ಮಕ್ಕಳು ಸ್ವಂತಂತ್ರವಾಗಿ ಅಭ್ಯಸಿಸಿ ತಮ್ಮ ಅಭಿಪ್ರಾಯಗಳನ್ನು ರೂಪಿಸಿಕೊಳ್ಳುವಂತೆ ಶಿಕ್ಷಣವಿರಬೇಕು. ಚಿಕ್ಕ ವಯಸ್ಸಿನಲ್ಲಿಯೇ ಅವರ ಮೇಲೆ ಬಲವಂತವಾಗಿ ಪಕ್ಷ ರಾಜಕೀಯವನ್ನು ಹೇರುವುದು ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ವಿಜಯಪುರದಲ್ಲಿ ನಡೆದಿರುವ ಈ ಕಾನೂನು ಬಾಹಿರ ಕಾರ್ಯಕ್ರಮದ ಕುರಿತು ಕೂಡಲೇ ಶಿಕ್ಷಣ ಇಲಾಖೆ ಸಮರ್ಪಕ ತನಿಖೆ ನಡೆಸಿ ಕ್ರಮ ಜರುಗಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಎಚ್ಚರ ವಹಿಸಬೇಕೆಂದು ವಿಜಯಪುರದ ವಕೀಲರು ಮತ್ತು ಯುವಜನ ಹೋರಾಟಗಾರರಾದ ಶ್ರೀನಾಥ್ ಪೂಜಾರಿಯವರು ಒತ್ತಾಯಿಸಿದ್ದಾರೆ.

RSS ಗಾಗಿ ಅರ್ಧವಾರ್ಷಿಕ ಪರೀಕ್ಷೆಯನ್ನು ಮುಂಚಿತವಾಗಿ ನಡೆಸುತ್ತಿರುವ ಉಡುಪಿ ಜಿಲ್ಲಾಡಳಿತ

ಉಡುಪಿಯಲ್ಲಿ ಅರ್ಧವಾರ್ಷಿಕ ಪರೀಕ್ಷೆ ಬಹಳಷ್ಟು ಮುಂಚಿತವಾಗಿ ನಡೆಯಲಿದೆ. ಏಕೆ ಗೊತ್ತೆ? RSS ನವರು ಅಕ್ಟೋಬರ್ 9 ರಿಂದ 16 ರವರೆಗೆ ನಡೆಸುವ ITC ತರಬೇತಿಯಲ್ಲಿ ಮಕ್ಕಳನ್ನು ಭಾಗವಹಿಸಲು ಅನುವು ಮಾಡಿ ಕೊಡುವ ಸಲುವಾಗಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆಯಂತೆ. ಉಸ್ತುವಾರಿ ಸಚಿವರ ಸಭೆಯಲ್ಲಿ RSS ಮುಖಂಡರು ಶಿಕ್ಷಣ ಇಲಾಖೆಯ ಉಪನಿರ್ದೇಶಕರನ್ನು ಕರೆಸಿ ಆದೇಶ ನೀಡಲಾಗಿದೆಯಂತೆ.. ಹೀಗೊಂದು ಸುದ್ದಿ ಉಡುಪಿಯಿಂದ ಹೊರಬಿದ್ದಿದೆ.

“ಶಿಕ್ಷಣದ ಉದ್ದೇಶ ಮಾನವೀಯವಾದ, ಸಮಾನವಾದ, ಪ್ರಜಾತಾಂತ್ರಿಕವಾದ, ಬಹುವೈವಿಧ್ಯತೆಯನ್ನು ಗೌರವಿಸುವ ಸಮಾಜ ನಿರ್ಮಾಣ ಮಾಡುವುದಾಗಿದೆ”. ಆದರೆ ಇಂದು ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಶಾಲಾ ಕಾಲೇಜುಗಳಿಗೆ ಮನಬಂದಂತೆ ನುಗ್ಗಿ ತಮ್ಮ ಅಜೆಂಡಾಗಳನ್ನು ಮಕ್ಕಳ ಮನಸ್ಸಲ್ಲಿ ತುರುಕುತ್ತಿರುವುದು ಅಪಾಯಕಾರಿ ನಡೆಯಾಗಿದೆ. ಇದರ ವಿರುದ್ಧ ಪ್ರಜಾತಂತ್ರವನ್ನು ಉಳಿಸುವ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಡಬೇಕಾದ ಅನಿವಾರ್ಯತೆಯಿದೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is good from childhood patriotism will come. Nice idea. Only frustrated depressed lot can thing negative of this programme. Nothing wrong in conducting and involving future citizens into main stream of future India.?????✌?????

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...