Homeಮುಖಪುಟಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

ಉತ್ತರ ಪ್ರದೇಶ: ಕೊಟ್ಟ ಸಾಲ ಕೇಳಿದ್ದಕ್ಕೆ ಬಾಲಕನನ್ನು ವಿವಸ್ತ್ರಗೊಳಿಸಿ ಥಳಿಸಿದ ಸಹಪಾಠಿಗಳು!

- Advertisement -
- Advertisement -

ತಾನು ಕೊಟ್ಟಿದ್ದ ₹200 ವಾಪಸ್ ಕೊಡುವಂತೆ ಕೇಳಿದ 16 ವರ್ಷದ ಬಾಲಕನಿಗೆ ಬಲವಂತವಾಗಿ ಮದ್ಯ ಕುಡಿಸಿ, ಆತನತ ಸಹಪಾಠಿಗಳೆ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ಸೋಮವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ವಿವಸ್ತ್ರಗೊಳಿಸಿ ಥಳಿಸಿರುವ ವಿಡಿಯೋಗಳನ್ನು ಆರೋಪಿತ ಬಾಲಕರು ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಲ್ಟ್ ಮತ್ತು ದೊಣ್ಣೆಗಳಿಂದ ಹೊಡೆದು, ತಮ್ಮ ಫೋನ್‌ಗಳಲ್ಲಿ ಹಲ್ಲೆ ನಡೆಸಿರುವುದನ್ನು ರೆಕಾರ್ಡ್ ಮಾಡಿಕೊಂಡರು. ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಾಲಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಆರೋಪಿತ ಬಾಲಕರು ಸಂತ್ರಸ್ತನನ್ನು ಅವಾಚ್ಯವಾಗಿ ನಿಂದಿಸುತ್ತಾ, ಬಟ್ಟೆ ಕಳಚುವಂತೆ ಬಲವಂತ ಮಾಡಿದ್ದಾರೆ. ಬಟ್ಟೆ ಬಿಚ್ಚಿಸದಂತೆ ಆತ ಮನವಿ ಮಾಡಿದಾಗ, ಅವರು ಬಾಲಕನ ಮುಖಕ್ಕೆ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆಯಾಗಿದೆ.

‘ವಿಡಿಯೋ ವೈರಲ್ ಆಗಿರುವುದು ನನಗೆ ಮುಜುಗರ ಉಂಟುಮಾಡಿದ್ದು, ತಾನು ತುಂಬಾ ನೊಂದಿದ್ದೇನೆ’ ಎಂದು ಹೇಳಿರುವ ಬಾಲಕ, ತನ್ನ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಪೊಲೀಸರನ್ನು ಸಂಪರ್ಕಿಸಿದ್ದಾನೆ. ಇದೀಗ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನಿಗೆ ನೀಡಿದ್ದ ₹200 ಸಾಲವನ್ನು ವಾಪಸ್ ಕೊಡುವಂತೆ ಕೇಳಿದ್ದಾಗಿ ಬಾಲಕ ಪೊಲೀಸರಿಗೆ ತಿಳಿಸಿದ್ದು, ಸುಮಾರು ಎರಡು ತಿಂಗಳ ಹಿಂದೆ ಹಣ ಕೇಳಿದ್ದಕ್ಕೆ ಜಗಳ ನಡೆದಿತ್ತು ಎಂದು ಆತ ಮಾಹಿತಿ ನೀಡಿದ್ದಾನೆ. ಕಳೆದ ಸೋಮವಾರ ಬಾಲಕ ಮತ್ತು ಅವನ ಸ್ನೇಹಿತ ಉದ್ಯಾನವನದಲ್ಲಿ ಹರಟೆ ಹೊಡೆಯುತ್ತಿದ್ದರು. ಹಣ ಪಡೆದಿದ್ದ ಆತನ ಸಹಪಾಠಿ ಸೇರಿದಂತೆ ನಾಲ್ವರು ಕಾರಿನಲ್ಲಿ ಪಾರ್ಕಿಗೆ ಬಂದು ಅವನನ್ನು ಕರೆದರು. ಅವನು ಕಾರಿನ ಬಳಿಗೆ ಬಂದ ತಕ್ಷಣ, ಹುಡುಗರು ಅವನನ್ನು ಒಳಗೆ ಎಳೆದುಕೊಂಡು ಸೈನಿಕರ ಅಭ್ಯಾಸವನ್ನು ವೀಕ್ಷಿಸಲು ಹತ್ತಿರದ ಅರಣ್ಯ ಪ್ರದೇಶಕ್ಕೆ ಹೋಗುವುದಾಗಿ ಹೇಳಿದರು ಎಂದು ಬಾಲಕ ಹೇಳಿದ್ದಾನೆ.

ಅರಣ್ಯಕ್ಕೆ ತಲುಪಿದಾಗ, ಅಲ್ಲಿ ಇನ್ನಿಬ್ಬರು ಕಾಯುತ್ತಿರುವುದನ್ನು ಬಾಲಕ ಕಂಡಿದ್ದಾನೆ. ಅವರು ಕುಡಿದು ಹುಡುಗನನ್ನು ಕುಡಿಯಲು ಒತ್ತಾಯಿಸಿದ್ದು, ನಂತರ ಹಲ್ಲೆ ಆರಂಭಿಸಿದ್ದಾರೆ. ಆರು ಮಂದಿ ಹುಡುಗರು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ಹೊಡೆದು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದರು ಎಂದು ಬಾಲಕ ಆರೋಪಿಸಿದ್ದಾನೆ. ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುತ್ತಲೇ ಇದ್ದೆ, ಆದರೆ ಅವರು ಥಳಿಸುವುದನ್ನು ಮುಂದುವರೆಸಿದ್ದಾರೆ. ಜತೆಗೆ, ಹಲ್ಲೆ ನಡೆಸಿದ್ದನ್ನು ಚಿತ್ರೀಕರಿಸಿದರು ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಈ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಾಲಕ ಹೇಗೋ ಸ್ಥಳದಿಂದ ತಪ್ಪಿಸಿಕೊಂಡು ತನ್ನ ಮನೆಗೆ ತಲುಪಿದ್ದಾನೆ. ಎರಡು ದಿನಗಳ ನಂತರ, ಹಲ್ಲೆ ನಡೆಸಿದ್ದ ಹುಡುಗರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ‘ವಿಡಿಯೋ ವೈರಲ್ ಆದ ನಂತರ ನನಗೆ ಮನೆಯಿಂದ ಹೊರಗಡೆ ಕಾಲಿಡಲು ಕೂಡ ಮುಜುಗರವಾಗುತ್ತಿದೆ’ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ; ಸಿಐಎಸ್ಎಫ್ ಯೋಧರ ಹೆಗಲಿಗೆ ಸಂಸತ್ ಭದ್ರತಾ ಜವಾಬ್ದಾರಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...