Homeಮುಖಪುಟತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

- Advertisement -
- Advertisement -

ತಮಿಳುನಾಡಿನಲ್ಲಿ ಮೈಚಾಂಗ್ ಚಂಡಮಾರುತದ ಪ್ರಭಾವಕ್ಕೆ ಸುರಿದ ಮಳೆ ಪ್ರವಾಹ ಸೃಷ್ಟಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಜನಸಜೀವನ ಅಸ್ತವ್ಯಸ್ತವಾಗಿತ್ತು. ಈ ವೇಳೆ ಧಾರ್ಮಿಕ ಸಾಮರಸ್ಯದ ನಿದರ್ಶನವೊಂದು ಬೆಳಕಿಗೆ ಬಂದಿದೆ. ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ.

ತಿರುನಲ್ವೇಲಿಯಿಂದ ತೂತುಕುಡಿ ರಸ್ತೆಯಲ್ಲಿರುವ ಸೇಡುಂಗನಲ್ಲೂರ್ ಬೈತುಲ್ಮಾಲ್ ಜಮಾತ್ ಮಸೀದಿಯು ಪ್ರವಾಹದಿಂದ ಮನೆ ಕಳೆದುಕೊಂಡ ಸುಮಾರು 30 ಹಿಂದೂ ಕುಟುಂಬಗಳಿಗೆ ಮಸೀದಿಯಲ್ಲಿ ಆಶ್ರಯವನ್ನು ನೀಡಿದೆ, ಜೊತೆಗೆ  ಮಸೀದಿ ಸಮಿತಿಯು ನಿರಾಶ್ರಿತರಿಗೆ ಬಟ್ಟೆ, ಔಷಧಿಗಳು ಮತ್ತು ಸೇರಿದಂತೆ ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆಯನ್ನು ಕೂಡ ಮಾಡಿದೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ಸುರಿದ ಮಳೆಗೆ ತಮಿಳುನಾಡಿನಲ್ಲಿ ಭಾರೀ ಪ್ರವಾಹ ಉದ್ಭವಿಸಿತ್ತು. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮನೆಗಳು, ರಸ್ತೆಗಳು ಸಂಪೂರ್ಣ ಜಲಾವೃತವಾಗಿತ್ತು. ವಿದ್ಯುತ್ ಸಂಪರ್ಕ, ಮೊಬೈಲ್ ಫೋನ್ ಸಂಪರ್ಕ ಕಡಿತಗೊಂಡು ಸಾರ್ವಜನಿಕ ಸಾರಿಗೆ ಕೂಡ ಅಸ್ತವ್ಯಸ್ತಗೊಂಡಿತ್ತು. ಭಾರೀ ಮಳೆಯಿಂದ ಸಂಭವಿಸಿದ ಅವಘಡದಿಂದ ರಾಜ್ಯದ ವಿವಿಧ ಭಾಗಗಳಲ್ಲಿ 12ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

ಈ ಕುರಿತು ಮಾತನಾಡಿದ ಪ್ರವಾಹದಿಂದ ನಿರಾಶ್ರಿತರಾದ ಕೋವಿಲ್‌ಪತ್‌ನ ತಮಿಳರಸಿ, ಮಸೀದಿಯಲ್ಲಿ ನಮ್ಮನ್ನು ಸ್ವಾಗತಿಸಲಾಗಿದೆ. ಅವರು ಎಂದಿಗೂ ಮಹಿಳೆಯರು ಮಸೀದಿಗೆ ಪ್ರವೇಶಿಸಬಾರದು ಎಂದು  ಹೇಳಲಿಲ್ಲ. ಅವರು ನಮಗೆ ಬೇಕಾದಷ್ಟು ದಿನ ಇಲ್ಲಿಯೇ ಇರಬಹುದು ಎಂದು ಹೇಳಿದರು. ಆಹಾರದಿಂದ ಹಿಡಿದು ಔಷಧಿಗಳವರೆಗೆ ಅವರು ನಮಗೆ ಎಲ್ಲವನ್ನೂ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯಲ್ಲಿ ಆಶ್ರಯ ಪಡೆದಿರುವ ಮತ್ತೋರ್ವ ಪ್ರವಾಹ ಪೀಡಿತ ದೈವಕನಿ ಅವರು ಮಾತನಾಡುತ್ತಾ, ನಾವು  4 ದಿನಗಳ ಹಿಂದೆ ನಾವು ಧರಿಸಿದ್ದ ಬಟ್ಟೆಯೊಂದಿಗೆ ಇಲ್ಲಿಗೆ ಬಂದಿದ್ದೇವೆ. ನಮ್ಮಲ್ಲಿ ಬೇರೆ ಏನೂ ಇರಲಿಲ್ಲ. ಈ ಮಸೀದಿಯಲ್ಲಿ ಉಳಿದೆಲ್ಲವನ್ನೂ ಅವರು ನಮಗೆ ಒದಗಿಸಿದ್ದಾರೆ. ಇಲ್ಲಿ ಆಶ್ರಯ ಪಡೆದಿರುವವರೆಲ್ಲರೂ ಹಿಂದೂಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮಾತ್ ಸಮಿತಿಯ ಸದಸ್ಯ ಇಮ್ರಾನ್ ಖಾನ್ ಅವರು ಈ ಬಗ್ಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಜೊತೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ಮತ್ತು ಸ್ಥಳಾವಕಾಶ ಕಲ್ಪಿಸಲು ಮಸೀದಿಯಲ್ಲಿ ಎಲ್ಲಾ ಸಾಮೂಹಿಕ ಪ್ರಾರ್ಥನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಸಂತ್ರಸ್ತ ಹಿಂದೂ ಸಮುದಾಯದ ಜನರು ಮಸೀದಿಯಿಂದ ತಮ್ಮ-ತಮ್ಮ ಮನೆಗಳಿಗೆ ಹಿಂದಿರುಗುವವರೆಗೆ ನಾವು ಯಾವುದೇ ಸಾಮೂಹಿಕ ಪ್ರಾರ್ಥನೆಗಳನ್ನು ನಡೆಸದಿರಲು ನಿರ್ಧರಿಸಿದ್ದೇವೆ. ನಾವು ಏಕತೆ ಮತ್ತು ಸಮಾನತೆಯನ್ನು ನಂಬುತ್ತೇವೆ. ಪ್ರವಾಹ ಬಂದಾಗ ನಾವು ಜಮಾಅತ್ ಸಮಿತಿಯಲ್ಲಿ ಸಭೆ ನಡೆಸಿದ್ದೇವೆ ಮತ್ತು ಮಸೀದಿಯನ್ನು ಪರಿಹಾರ ಶಿಬಿರವಾಗಿ ತೆರೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಮೈಚಾಂಗ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ 4 ದಕ್ಷಿಣ ಜಿಲ್ಲೆಗಳಾದ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ರಾಮನಾಥಪುರಂನಲ್ಲಿ ಡಿ.17 ಮತ್ತು 18ರಂದು ಭಾರೀ ಮಳೆಯಾಗಿದೆ. ಇದರಿಂದಾಗಿ ಉಂಟಾದ ಪ್ರವಾಹದಲ್ಲಿ ಅನೇಕ ಪ್ರದೇಶಗಳು ಸಂಪರ್ಕ ಕಡಿತಗೊಂಡವು ಮತ್ತು ಹಲವಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗಳು ಮತ್ತು ರಾಜ್ಯ ವಿಪತ್ತು ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿತ್ತು.

ಇದನ್ನು ಓದಿ: ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...