Homeಮುಖಪುಟಕೇರಳ ಸರಕಾರ-ಗವರ್ನರ್‌ ಜಟಾಪಟಿ ಮುಂದುವರಿಕೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಕೇರಳ ಸರಕಾರ-ಗವರ್ನರ್‌ ಜಟಾಪಟಿ ಮುಂದುವರಿಕೆ: ಕೇಂದ್ರಕ್ಕೆ ಪತ್ರ ಬರೆದ ಸಿಎಂ

- Advertisement -
- Advertisement -

ಕೇರಳ ಸರಕಾರ ಮತ್ತು ರಾಜ್ಯಪಾಲರ ನಡುವಿನ ಜಟಾಪಟಿ ಮುಂದುವರಿದಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ಕೇಂದ್ರ ಸರಕಾರಕ್ಕೆ ಪತ್ರವನ್ನು ಬರೆದಿದ್ದಾರೆ.

ರಾಜ್ಯಪಾಲರ ವಿರುದ್ಧ ಕೇಂದ್ರದ ಮೊರೆ ಹೋಗುವುದಾಗಿ ಇತ್ತೀಚೆಗೆ ಪಿಣರಾಯ್ ವಿಜಯನ್‌ ಹೇಳಿದ್ದರು. ಮೂಲಗಳ ಪ್ರಕಾರ, ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯಗಳು ಮತ್ತು ಕಟ್ಟುಪಾಡುಗಳನ್ನು ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ ಸಿಎಂ ಪಿಣರಾಯ್‌ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಯಾವುದೇ ನಿರ್ದಿಷ್ಟ ಬೇಡಿಕೆಯನ್ನು ಸಲ್ಲಿಸದಿದ್ದರೂ, ರಾಜ್ಯಪಾಲರು ಪ್ರಚೋದನೆಗಳನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ ಪ್ರತಿಭಟನೆಯ ನಡುವೆ ರಾಜ್ಯಪಾಲರು ಇತ್ತೀಚೆಗೆ ಕೋಝಿಕ್ಕೋಡ್ ನಗರಕ್ಕೆ ಭೇಟಿ ನೀಡಿದ್ದನ್ನು ಸಹ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬದ ಬಗ್ಗೆ ಕೂಡ ಉಲ್ಲೇಖಿಸಲಾಗಿದೆ. ರಾಜ್ಯದ ವಿರುದ್ಧ ರಾಜ್ಯಪಾಲರ ನಿಲುವು ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧವನ್ನು ಹದಗೆಡಿಸಬಹುದು ಎಂದು ಪಿಣರಾಯ್‌ ವಿಜಯನ್ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೇರಳ ಸರಕಾರ-ರಾಜ್ಯಪಾಲರ ಜಟಾಪಟಿ:

2019ರಲ್ಲಿ ಕೇಂದ್ರ ಸರ್ಕಾರ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯಪಾಲರಾಗಿ ನೇಮಕಗೊಳಿಸಿದ ದಿನಗಳಿಂದಲೇ ರಾಜ್ಯಪಾಲರು ಮತ್ತು ಕೇರಳ ಸರ್ಕಾರದ ನಡುವೆ ಹಲವು ವಿಚಾರಗಳಿಗೆ ಜಟಾಪಟಿ ನಡೆದಿದೆ. 2019ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದ ಕೇರಳ ಸರ್ಕಾರ, ಜ.13 ರಂದು ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ರಾಜ್ಯ ಸರ್ಕಾರ ಕೋರ್ಟ್‌ ಮೆಟ್ಟಿಲೇರಿದ್ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲರು, ಸರ್ಕಾರ ಸುಪ್ರೀಂಕೋರ್ಟ್‌ಗೆ ಹೋಗುವುದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಅವರು ಈ ವಿಷಯವನ್ನು ಮೊದಲು ನನಗೆ ತಿಳಿಸಬೇಕಿತ್ತು. ಸರ್ಕಾರ ಕೋರ್ಟ್‌ಗೆ ಹೋದ ವಿಚಾರ ಪತ್ರಿಕೆಗಳ ಮೂಲಕ ಗೊತ್ತಾಗಿದೆ. ನಾನು ಕೇವಲ ರಬ್ಬರ್ ಸ್ಟಾಂಪ್ ಅಲ್ಲ. ಸರ್ಕಾರ ಶಿಷ್ಟಾಚಾರ ಮತ್ತು ಸೌಜನ್ಯ ಉಲ್ಲಂಘಿಸಲಾಗಿದೆ ಎಂದು ಹೇಳಿದ್ದರು.

ಬಳಿಕ ಕೇರಳದ 9 ವಿಶ್ವವಿದ್ಯಾನಿಲಯಗಳಿಗೆ ಉಪ ಕುಲಪತಿಗಳ ನೇಮಕ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಜಟಾಪಟಿ ಉಂಟು ಮಾಡಿತ್ತು. 2022ರ ಅ.22ರಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಏಕಾಏಕಿ ಕೇರಳದ 9 ವಿವಿಗಳ ಉಪ ಕುಲಪತಿಗಳ ರಾಜೀನಾಮೆ ಕೇಳಿದ್ದರು. ರಾಜ್ಯಪಾಲರ ದಿಢೀರ್ ನಿರ್ಧಾರಕ್ಕೆ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸರ್ಕಾರದ ಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯಪಾಲರ ಕ್ರಮ ಪ್ರಶ್ನಿಸಿ ಉಪ ಕುಲಪತಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆ ಬಳಿಕ ಸರ್ಕಾರ, ಉಪ ಕುಲಪತಿಗಳನ್ನು ನೇಮಿಸುವ ಅಧಿಕಾರದಿಂದ ರಾಜ್ಯಪಾಲರನ್ನೇ ಕೆಳಗಿಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮಸೂದೆಗೆ ಅಂಗೀಕಾರಕ್ಕೆ ರಾಜ್ಯಪಾಲರು ಸಹಿ ಹಾಕುವುದಿಲ್ಲ ಎಂದು ತಿಳಿದು ಸುಗ್ರಿವಾಜ್ಞೆ ಹೊರಡಿಸಲಾಗಿತ್ತು.

ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗಳನ್ನು ಇತ್ಯರ್ಥಪಡಿಸುವಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಳಂಬ ಮಾಡಿದ್ದರು. ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಸುಮಾರು 8 ಮಸೂದೆಗಳು ವಿಲೇವಾರಿಗೆ ಬಾಕಿಯಿದೆ. ಈ ನಡುವೆ ಡಿಸೆಂಬರ್ 11ರಂದು ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದರು. ರಾಜ್ಯಪಾಲರು ದೆಹಲಿಗೆ ಪ್ರಯಾಣಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತೆರಳುವ ದಾರಿ ಮಧ್ಯೆ ಈ ಘಟನೆ ನಡೆದಿತ್ತು. ತಕ್ಷಣ ಕಾರಿನಿಂದ ಕೆಳಗಿಳಿದಿದ್ದ ರಾಜ್ಯಪಾಲರು, ಸಿಎಂ ಕಳಿಸಿದ ಗೂಂಡಾಗಳು ನನ್ನ ಮೇಲೆ ದಾಳಿಗೆ ಯತ್ನಿಸಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಉದ್ದೇಶ ಅವರಿಗಿತ್ತು ಎಂದು ಮಾದ್ಯಮಗಳ ಮುಂದೆ ಹೇಳಿದ್ದರು.

ಇದನ್ನು ಓದಿ: ತಮಿಳುನಾಡು: 30 ಹಿಂದೂ ಕುಟುಂಬಗಳಿಗೆ ಆಶ್ರಯ ನೀಡಿದ ಮಸೀದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...