Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...