Homeಕರ್ನಾಟಕದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

- Advertisement -
- Advertisement -

‘ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂಡಿಯಾ ಒಕ್ಕೂಟದ 146 ಸಂಸದರ ಅಮಾನತು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಕೇಂದ್ರದ ಈ ಜನ ವಿರೋಧಿ ನಿರ್ಧಾರದ ಬಗ್ಗೆ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾವು ಪ್ರಜಾಪ್ರಭುತ್ವ ಉಳಿಸಬೇಕು ಎಂಬ ಕಾರಣಕ್ಕೆ, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಹಾಗೂ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ’ ಎಂದರು.

‘ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಲಾಗಿದೆ. ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ. ಸ್ಪೀಕರ್ ಅವರ ಬಳಿ ಕಾಗದ ಹರಿದಿದ್ದಾರೆ ಎಂದು ವಿರೋಧ ಪಕ್ಷಗಳ ಕೆಲವು ಸದಸ್ಯರ ನಡೆಯನ್ನು ಹಕ್ಕುಬಾಧ್ಯತಾ ಸಮಿತಿಯ ಪರಿಶೀಲನೆಗೆ ಒಳಪಡಿಸಿದ್ದಾರೆ. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ನಾವು ಜನರ ಮುಂದೆ ಇಡಬೇಕಿದೆ’ ಎಂದರು.

‘ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಆದ್ದರಿಂದ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದ್ದರು. ಜನ ಸದನದ ಒಳಗೆ ಚರ್ಚೆ ಮಾಡಲು ಬಿಜೆಪಿಯ 65 ನಾಯಕರನ್ನು ಆರಿಸಿ ಕಳುಹಿಸಿದ್ದಾರೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

‘ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98 ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ. ಕಾರ್ಯಕರ್ತರಿಂದಲೇ ಈ ಪಕ್ಷ. ನಿಮ್ಮ ಹೋರಾಟವೇ ನಮಗೆ ಸ್ಫೂರ್ತಿ. ನಿಮ್ಮ ವಿಶ್ವಾಸ ಸದಾ ನಮ್ಮ ಜತೆ ಇರಲಿ ಎಂದು ಮನವಿ ಮಾಡುತ್ತೇನೆ’ ಎಂದರು.

ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ತಪ್ಪಿತಸ್ಥರನ್ನು ಬಿಡುವುದಿಲ್ಲ:

ಯಶವಂತಪುರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವುದರ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿಗಳು, ‘ಈ ವಿಚಾರ ನನ್ನ ಗಮನಕ್ಕೆ ಬಂದಿದೆ. 3 ಗಂಟೆಗೆ ಪಾಲಿಕೆ ವ್ಯಾಪ್ತಿಯ ಶಾಲೆಗಳ ವಿಚಾರವಾಗಿ ಸಭೆ ಕರೆದಿದ್ದು, ಈ ಘಟನೆ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಇತ್ತೀಚೆಗೆ ಕೋಲಾರದ ಶಾಲೆಯ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಮಕ್ಕಳನ್ನು ನಾವು ಯಾವ ರೀತಿ ನಡೆಸಿಕೊಳ್ಳಬೇಕೋ ಆ ರೀತಿ ನಡೆಸಿಕೊಳ್ಳಬೇಕು. ಮಕ್ಕಳನ್ನು ದುರುಪಯೋಗ ಮಾಡಿಕೊಳ್ಳುವಂತಿಲ್ಲ. ಶೌಚಾಲಯಗಳನ್ನು ಮಕ್ಕಳಿಂದ ಸ್ವಚ್ಛಗೊಳಿಸಲು ಅವಕಾಶ ನೀಡಿಲ್ಲ, ಮುಂದೆಯೂ ನೀಡುವುದಿಲ್ಲ’ ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಅವರು ಮೇಧಾವಿಗಳು; ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದ್ದು, ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ. ಅವರು ಮಾತನಾಡುತ್ತಿರಬೇಕು; ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೆನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ’ ಎಂದರು.

ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ‘ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಕೆ ಮಾಡಲಾಗಿದೆ. 2013ರಿಂದ ಇಲ್ಲಿಯವೆಗೂ ಕಳೆದ 10 ವರ್ಷಗಳಿಂದ ಬೆಂಗಳೂರಿನ ಜನಸಾಮಾನ್ಯರ ಬಳಕೆ ನೀರಿನ ದರವನ್ನು ಏರಿಕೆ ಮಾಡಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ’ ಎಂದು ತಿಳಿಸಿದರು.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...