Homeಮುಖಪುಟಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

ಇಸ್ರೇಲ್ ದಾಳಿಯಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಸಾವು

- Advertisement -
- Advertisement -

ಇಸ್ರೇಲ್‌ ಮಿಲಿಟರಿ ದಾಳಿಯಿಂದ ಇದುವರೆಗೆ 20,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಿಯಂತ್ರಿತ ಎನ್‌ಕ್ಲೇವ್‌ ಪ್ರದೇಶದ ಆರೋಗ್ಯಾಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಮೃತರ ಸಂಖ್ಯೆ ಗಾಝಾದ ಯುದ್ಧ ಪೂರ್ವ ಜನಸಂಖ್ಯೆಯ ಸುಮಾರು 1% ರಷ್ಟಿದೆ. ಯುದ್ದದ ಪರಿಣಾಮ ಗಾಝಾದ ಶೇ. 85ರಷ್ಟು ಜನರನ್ನು ಸ್ಥಳಾಂತರಿಸಲಾಗಿದೆ. ಇಸ್ರೇಲ್ ದಾಳಿಯಲ್ಲಿ ಗಾಝಾ ನಿಯಂತ್ರಿತ ಸಣ್ಣ ಕರಾವಳಿ ಎನ್‌ಕ್ಲೇವ್‌ನ ವಿಶಾಲ ಪ್ರದೇಶಗಳು ಯುದ್ಧ ಭೂಮಿಯಾಗಿ ಮಾರ್ಪಟ್ಟಿವೆ.

ಇಸ್ರೇಲ್‌ ದಾಳಿಯಿಂದ ಇದುವರೆಗೆ 20,057 ಗಾಝಾ ನಾಗರಿಕರು ಮೃತಪಟ್ಟಿದ್ದಾರೆ. ಸುಮಾರು 53,320 ಜನರು ಗಾಯಗೊಂಡಿದ್ದಾರೆ. ಮೃತರಲ್ಲಿ ಸರಿಸುಮಾರು ಮೂರನೇ ಎರಡರಷ್ಟು ಮಂದಿ ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಹಮಾಸ್ ಗುಂಪಿನವರು ಮತ್ತು ನಾಗರಿಕರು ಎಂಬ ವ್ಯತ್ಯಾಸವಿಲ್ಲದೆ ಸಾವಿರಾರು ಜನರನ್ನು ಇಸ್ರೇಲ್ ನಿರ್ಧಯವಾಗಿ ಹತ್ಯೆ ಮಾಡಿದೆ. ಹಮಾಸ್ ನಮ್ಮ ಗುರಿ ಎಂದು ಇಸ್ರೇಲ್ ಹೇಳುತ್ತಿದ್ದು, ಅಮಾಯಕ ನಾಗರಿಕರ ಮಾರಣ ಹೋಮ ನಡೆಸುತ್ತಿದೆ.

ಅಕ್ಟೋಬರ್ 7ರಂದು ಗಾಝಾದ ಹಮಾಸ್ ಗುಂಪು ಇಸ್ರೇಲ್‌ ಮೇಲೆ ಏಕಾಏಕಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 1,200 ಮಂದಿ ಇಸ್ರೇಲ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಮಾಸ್‌ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಿರಂತರ ದಾಳಿ ನಡೆಸುತ್ತಾ ಬಂದಿದ್ದು, ಇದರಿಂದ 20 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಇದುವರೆಗೆ ಸುಮಾರು 7 ಸಾವಿರ ಹಮಾಸ್ ಸದಸ್ಯರನ್ನು ಕೊಂದಿದ್ದೇವೆ ಎಂದು ಇಸ್ರೇಲ್ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದೆ. ಆದರೆ, ಇದನ್ನು ಖಚಿತಡಿಸುವ ಯಾವುದೇ ಪುರಾವೆಗಳು ದೊರೆತಿಲ್ಲ.

ಕದನ ವಿರಾಮದ ಕರೆಗಳ ಹೊರತಾಗಿಯೂ, 16 ವರ್ಷಗಳಿಂದ ಗಾಝಾವನ್ನು ಆಳುತ್ತಿರುವ ಹಮಾಸ್ ಅನ್ನು ಸಂಪೂರ್ಣ ನಾಶಪಡಿಸುವವರೆಗೂ ತಾನು ಸುಮ್ಮನಿರುವುದಿಲ್ಲ ಎಂದು ಇಸ್ರೇಲ್ ಹೇಳಿದೆ.

“ಹಮಾಸ್‌ನ ನಿರ್ಮೂಲನೆ, ನಮ್ಮ ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದಿಂದ ಬೆದರಿಕೆಯನ್ನು ಕೊನೆಗೊಳಿಸುವುದು ಈ ಎಲ್ಲಾ ಉದ್ದೇಶಗಳನ್ನು ಸಾಧಿಸುವವರೆಗೆ ನಾವು ಯುದ್ಧ ನಿಲ್ಲಿಸುವುದಿಲ್ಲ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಬೆಂಬಲದೊಂದಿಗೆ ಅಥವಾ ಇಲ್ಲದೆ ಇಸ್ರೇಲ್ ಯುದ್ಧ ಮುಂದುವರೆಸಲಿದೆ ಎಂದು ಇಸ್ರೇಲ್‌ನ ವಿದೇಶಾಂಗ ಸಚಿವ ಎಲಿ ಕೊಹೆನ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: 87 ಮೃತದೇಹಗಳ ಸಾಮೂಹಿಕ ಅಂತ್ಯ ಸಂಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...