Homeಕರ್ನಾಟಕಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

ಬಿಜೆಪಿಗರು ದೆಹಲಿಗೆ ನಡೆದುಕೊಂಡು ಹೋಗುವಿರಾ: ಆರ್. ಅಶೋಕ್‌ಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.

‘ಸಿಎಂ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಕೃಷ್ಣಬೈರೇಗೌಡ ಐಷಾರಾಮಿ ಜೆಟ್‌ನಲ್ಲಿ ಪ್ರಯಾಣ ಮಾಡುತ್ತಾರೆ. ಇಲ್ಲಿ ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇನಾ ನಿಮ್ಮ ಸಮಾಜವಾದ’ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದರು.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವಾಗ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಹೋದ್ಯೋಗಿಗಳು ಐಶಾರಾಮಿ ಜೆಟ್ ಬಳಸಿದ್ದರ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ‘ಐಶಾರಾಮಿ ಜೆಟ್ ಬಳಸುವ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಪ್ರಶ್ನಿಸಿದ್ದರು.

ವಿಪಕ್ಷ ನಾಯಕನ ಏಟಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ‘ಆರ್. ಅಶೋಕ್ ಅವರೇ, ಮೋದಿಯವರು ಓಡಾಡುವ ಐಷಾರಾಮಿ ವಿಮಾನದ ಬೆಲೆ ಎಷ್ಟು ತಿಳಿದಿದೆಯೇ? ಹಿಂದಿನ ಪ್ರಧಾನಿಗಳು ವಾಯುಪಡೆಯ ವಿಮಾನ ಬಳಸುತ್ತಿದ್ದರು, ಮೋದಿಗೆ ₹8000 ಕೋಟಿಯ ವಿಮಾನದ ಅಗತ್ಯ ಬಿದ್ದಿದ್ದೇಕೆ? ಮಣಿಪುರ ಹೊತ್ತಿ ಉರಿಯುತ್ತಿರುವಾಗ ಮೋದಿ ರೋಡ್ ಶೋಕಿ ಮಾಡಿಕೊಂಡು ತಿರುಗಿದ್ದೇಕೆ? ಅಂದಹಾಗೆ ತಾವೂ ಸೇರಿದಂತೆ ತಮ್ಮ ಪಕ್ಷದವರು ದೆಹಲಿಗೆ ನಡೆದುಕೊಂಡು ಹೋಗುವಿರಾ, ಎತ್ತಿನ ಬಂಡಿ ಹತ್ತುವಿರಾ ಅಥವಾ ವಿಮಾನದಲ್ಲಿ ಹೋಗುವಿರಾ’ ಎಂದು ಪ್ರಶ್ನಿಸಿದೆ.

ಆಪರೇಷನ್ ಕಮಲಕ್ಕೆ ಬಳಸಿದ ಹಣ ಬಿಜೆಪಿಗರು ಕೂಲಿ ಮಾಡಿ ಕೂಡಿಟ್ಟದ್ದಲ್ಲ:

ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮ್ಯ, ‘ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ? 2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ. ದೇಶ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ’ ಎಂದು ಪ್ರಶ್ನಿಸಿದ್ದಾರೆ.

ಘಟನೆ ಹಿನ್ನೆಲೆ:

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಜಮೀರ್ ಅಹಮದ್ ಖಾನ್ ಅವರು ಬೆಂಗಳೂರಿಗೆ ಮರಳಲು ಖಾಸಗಿ ಜೆಟ್ ಬಳಸಿದ್ದರು. ಪ್ರಯಾಣದ ಸಂದರ್ಭದಲ್ಲಿನ ಫೋಟೋ ಹಾಗೂ ವಿಡಿಯೋಗಳನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿತ್ತು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ‘ಬರದಿಂದ ರಾಜ್ಯದಲ್ಲಿ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. 60 ಲಕ್ಷಕ್ಕೂ ಹೆಚ್ಚಿನ ರೈತರ ಜಮೀನಿನಲ್ಲಿ ಬೆಳೆ ನಷ್ಟವಾಗಿದ್ದು, ರೈತರು ಬೇರೆ ರಾಜ್ಯಗಳಿಗೆ ಗುಳೇ ಹೋಗುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ ಮಕ್ಕಳು ಜೆಸಿಬಿಯಲ್ಲಿ ಶಾಲೆಗೆ ಹೋಗ್ತಿದ್ದಾರೆ. ಇತ್ತ ಮುಖ್ಯಮಂತ್ರಿಗಳು ಹಾಗೂ ಸಚಿವರು ಖಾಸಗಿ ಜೆಟ್ ನಲ್ಲಿ ಪ್ರಯಾಣ ಮಾಡಿದ್ದಾರೆ. ಬರದ ಛಾಯೆ ಸಂದರ್ಭದಲ್ಲಿ ಐಷಾರಾಮಿ ವಿಮಾನ ಪ್ರಯಾಣ ಬಗ್ಗೆ ಖುಷಿಯಾಗಿದೆ ಅಂತ ಜಮೀರ್ ವಿಡಿಯೋ ಹಂಚಿಕೊಂಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದರು.

‘ಸಿಎಂ ಹಾಗೂ ಸಚಿವರು ಜೆಟ್ ನಲ್ಲಿ ಪ್ರಯಾಣ, ಮಕ್ಕಳು ಜೆಸಿಬಿಯಲ್ಲಿ ಪ್ರಯಾಣ.. ಇದೇನಾ ನಿಮ್ಮ ಸಮಾಜವಾದ; ಎಂದು ಕಿಡಿಕಾರಿದ್ದ ಅಶೋಕ್, ‘ಈ ರೀತಿಯ ದೌಲತ್ತು ಸಿಎಂ, ಸಚಿವರಿಗೆ ಬೇಕಿತ್ತಾ’ ಎಂದು ಜಮೀರ್ ಟ್ವೀಟ್ ಮಾಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.

ಇದನ್ನೂ ಓದಿ; ದೇಶದ ಐಕ್ಯತೆ, ಸಮಗ್ರತೆಗೆ ಭಂಗ ತರುತ್ತಿರುವ ಬಿಜೆಪಿ; ಕೇಂದ್ರ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...