Homeಮುಖಪುಟ'ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…'; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿದ್ದು, ಇಂದು ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು, ‘ನಾನು ಪ್ರಶಸ್ತಿಗಳನ್ನು ಪಡೆದಾಗ ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಬ್ರಿಜ್ ಭೂಷಣ್ ಅವರಿಂದ ಮಹಿಳಾ ಅಥ್ಲೀಟ್‌ಗಳಿಗೆ ಅನ್ಯಾಯವಾಗಿದೆ ಎಂಬ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವ ಪುನಿಯಾ, ‘ಪ್ರೀತಿಯ ಪ್ರಧಾನಿಯವರೆ, ನಿಮ್ಮ ಆರೋಗ್ಯ ಚೆನ್ನಾಗಿರಲಿ ಎಂದು ಹಾರೈಸುತ್ತೇನೆ. ನೀವು ಅನೇಕ ಕೆಲಸಗಳಲ್ಲಿ ನಿರತರಾಗಿದ್ದೀರಿ. ಆದರೆ, ದೇಶದ ಕುಸ್ತಿಪಟುಗಳತ್ತ ನಿಮ್ಮ ಗಮನವನ್ನು ಸೆಳೆಯಲು ನಾನು ಈ ಪತ್ರ ಬರೆಯುತ್ತಿದ್ದೇನೆ. ದೇಶದ ಮಹಿಳಾ ಕುಸ್ತಿಪಟುಗಳು ಜನವರಿಯಲ್ಲಿ ಆರಂಭಿಸಿದ್ದ ಪ್ರತಿಭಟನೆ ಕುರಿತು ನೀವು ತಿಳಿದಿರಬೇಕು. ಇದೇ ವರ್ಷ ಬ್ರಿಶ್ ಭೂಷಣ್ ಸಿಂಗ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನಾನು ಕೂಡ ಅವರ ಪ್ರತಿಭಟನೆಗೆ ಸೇರಿಕೊಂಡಿದ್ದೆ. ಸರ್ಕಾರವು ಕಠಿಣ ಕ್ರಮದ ಭರವಸೆ ನೀಡಿದ ನಂತರ ನಾವು ನಮ್ಮ ಹೋರಾಟವನ್ನು ವಾಪಸ್ ಪಡೆದೆವು’ ಎಂದು ಹೇಳಿದ್ದಾರೆ.

‘ಪ್ರತಿಭಟನೆ ವಾಪಸ್ ಪಡೆದ ಮೂರು ತಿಂಗಳ ನಂತರವೂ ಬ್ರಿಜ್ ಭೂಷಣ್ ವಿರುದ್ಧ ಯಾವುದೇ ಎಫ್ಐಆರ್ ದಾಖಲಾಗಿರಲಿಲ್ಲ. ನಾವು ಮತ್ತೆ ಏಪ್ರಿಲ್‌ನಲ್ಲಿ ಬೀದಿಗಿಳಿದಿದ್ದರಿಂದ ಪೊಲೀಸರು ಅವರ ವಿರುದ್ಧ ಕೇವಲ ಒಂದೇಒಂದು ಎಫ್ಐಆರ್ ದಾಖಲಿಸಿದ್ದಾರೆ. ಜನವರಿಯಲ್ಲಿ 19 ದೂರುದಾರರಿದ್ದರು, ಆದರೆ, ಏಪ್ರಿಲ್ ವೇಳೆಗೆ ಅವರ ಸಂಖ್ಯೆ 7ಕ್ಕೆ ಇಳಿದಿದೆ. ಇದರರ್ಥ ಬ್ರಿಜ್ ಭೂಷಣ್ ಅವರು 12 ಮಹಿಳಾ ಕುಸ್ತಿಪಟುಗಳ ಮೇಲೆ ತಮ್ಮ ಪ್ರಭಾವವನ್ನು ಬೀರಿದ್ದಾರೆ’ ಎಂದು ಪುನಿಯಾ ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಪ್ರತಿಭಟನೆ 40 ದಿನಗಳ ಕಾಲ ನಡೆಯಿತು. ಆ ದಿನಗಳಲ್ಲಿ ನಮ್ಮ ಮೇಲೆ ಹೆಚ್ಚಿನ ಒತ್ತಡವಿತ್ತು. ನಾವು ಗಂಗಾ ನದಿಯಲ್ಲಿ ನಮ್ಮ ಪದಕಗಳನ್ನು ಮುಳುಗಿಸಲು ಹೋದಾಗ ನಮ್ಮನ್ನು ರೈತ ಮುಖಂಡರು ತಡೆದರು. ಆ ಸಮಯದಲ್ಲಿ ನಿಮ್ಮ ಸಂಪುಟದ ಜವಾಬ್ದಾರಿಯುತ ಮಂತ್ರಿಯೊಬ್ಬರು ಕರೆ ಮಾಡಿ, ನಮಗೆ ನ್ಯಾಯದ ಭರವಸೆ ನೀಡಿದ್ದರು. ಈ ಮಧ್ಯೆ, ನಾವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ. ಅವರೂ ಸಹ ನಮಗೆ ನ್ಯಾಯದ ಭರವಸೆ ನೀಡಿದರು. ಆದ್ದರಿಂದ ನಾವು ನಮ್ಮ ಪ್ರತಿಭಟನೆಯನ್ನು ನಿಲ್ಲಿಸಿದ್ದೇವೆ’ ಎಂದು ವಿವರಿಸಿದ್ದಾರೆ.

‘ಆದರೆ, ಡಿಸೆಂಬರ್ 21 ರಂದು ನಡೆದ ಡಬ್ಲ್ಯುಎಫ್ಐ ಚುನಾವಣೆಯಲ್ಲಿ ಫೆಡರೇಶನ್ ಮತ್ತೊಮ್ಮೆ ಬ್ರಿಜ್ ಭೂಷಣ್ ಅಧೀನಕ್ಕೆ ಬಂದಿದೆ. ಅವರು ಎಂದಿನಂತೆ ಫೆಡರೇಶನ್ ಮೇಲೆ ಮೇಲುಗೈ ಸಾಧಿಸುತ್ತಾರೆ ಎಂದು ಹೇಳಿದ್ದಾರೆ. ತೀವ್ರ ಒತ್ತಡಕ್ಕೆ ಒಳಗಾದ ಸಾಕ್ಷಿ ಮಲಿಕ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು’ ಎಂದು ಹೇಳಿದ್ದಾರೆ.

‘ನಾವೆಲ್ಲರೂ ನಿನ್ನೆ ರಾತ್ರಿಯಿಡೀ ಕಣ್ಣೀರಿನಲ್ಲಿ ಕಳೆದಿದ್ದೇವೆ. ನಮಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು ಎಂದು ಅರ್ಥವಾಗಲಿಲ್ಲ. ಸರ್ಕಾರ ನಮಗೆ ಸಾಕಷ್ಟು ನೀಡಿದೆ; 2019 ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಾನು ಅರ್ಜುನ, ಖೇಲ್ ರತ್ನ ಪ್ರಶಸ್ತಿಯನ್ನು ಸಹ ಸ್ವೀಕರಿಸಿದ್ದೇನೆ. ನಾನು ಈ ಪ್ರಶಸ್ತಿಗಳನ್ನು ಪಡೆದಾಗ ನಾನು ಮೋಡದಲ್ಲಿ ತೇಲುತ್ತಿದ್ದೆ. ಆದರೆ ಇಂದು ದುಃಖವು ಹೆಚ್ಚು ಭಾರವಾಗಿದೆ. ಮುಖ್ಯವಾಗಿ, ಮಹಿಳಾ ಕುಸ್ತಿಪಟು ತನ್ನ ಭದ್ರತೆ ಕಾರಣಕ್ಕೆ ಕ್ರೀಡೆಯನ್ನು ತೊರೆದಿರುವುದೂ ಒಂದು ಕಾರಣ’ ಎಂದು ಬಜರಂಗ್ ಬರೆದಿದ್ದಾರೆ.

ಇದನ್ನೂ ಓದಿ; ‘ನಾನು ವಿಡಿಯೋ ಮಾಡಿದ್ದರ ಬಗ್ಗೆ ಮಾತನಾಡುತ್ತಿರುವ ಮಾಧ್ಯಮಗಳು ನಿರುದ್ಯೋಗದ ಕುರಿತು ಚರ್ಚಿಸುತ್ತಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...